Drought ನಿರ್ವಹಣೆಯಲ್ಲಿ ಸರಕಾರ ವಿಫ‌ಲ: ಕೋಟ ಶ್ರೀನಿವಾಸ ಪೂಜಾರಿ


Team Udayavani, Nov 6, 2023, 10:56 PM IST

Drought ನಿರ್ವಹಣೆಯಲ್ಲಿ ಸರಕಾರ ವಿಫ‌ಲ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಬಣ ರಾಜ ಕೀಯ, ಭಿನ್ನಾಭಿಪ್ರಾಯದಲ್ಲಿ ಸರಕಾರ ಜನರ ಸಮಸ್ಯೆಗಳನ್ನು ಬಗೆಹರಿಸಲು ಸಂಪೂರ್ಣ ವಿಫ‌ಲವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸರಕಾರ ನಡೆಸಲು ಸಾಧ್ಯವಾಗದೇ ಇದ್ದರೆ ಬಿಟ್ಟು ಹೋಗಬಹುದು ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ರಾಜ್ಯದ 216 ತಾಲೂಕಿನಲ್ಲಿ ಗಂಭೀರ ಬರ ಪರಿಸ್ಥಿತಿಯಿದೆ. ಇದರ ನಿಯಂತ್ರಣ ಸಂಬಂಧ ಬೆಳೆ ನಷ್ಟ ಪರಿಹಾರಕ್ಕೆ 5000 ಕೋ.ರೂ. ಬಿಡುಗಡೆ ಮಾಡಿ, ಜಿಲ್ಲಾಧಿಕಾರಿಗಳ ಮೂಲಕ ಪರಿಹಾರ ಕಾರ್ಯಕ್ರಮಗಳನ್ನು ನಡೆಸಬೇಕು. ಅದನ್ನು ಬಿಟ್ಟು ರಾಜ್ಯದ ಕಾಂಗ್ರೆಸ್‌ ನಾಯಕರು ತಮ್ಮ ವೈಫ‌ಲ್ಯ ಮರೆಮಾಚಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯುತ್ನ ಮಾಡುತ್ತಿದ್ದಾರೆ. ಕೇಂದ್ರ ಸರಕಾರದಿಂದ ಬರ ಪರಿಹಾರಕ್ಕೆ ಅನುದಾನ ಬರಲಿದೆ. ಆದರೆ, ರಾಜ್ಯ ಸರಕಾರ ತುರ್ತು ಪರಿಹಾರ ಕಾರ್ಯ ಕೈಗೊಳ್ಳುವುದನ್ನು ಮರೆತು ಜನರಿಗೆ ಅನ್ಯಾಯ ಮಾಡುತ್ತಿದೆ ಎಂದವರು ತಿಳಿಸಿದರು.

ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಯಡಿ ಮೊದಲ ಕಂತು ಮಾತ್ರ ಸರಿಯಾಗಿ ನೀಡಿದ್ದಾರೆ. ಉಳಿದ ಕಂತುಗಳನ್ನು ಎಲ್ಲರಿಗೂ ನೀಡಿಲ್ಲ. ಶಕ್ತಿ ಯೋಜನೆಯಡಿ ಉಚಿತ ಬಸ್‌ ಪ್ರಯಾಣಕ್ಕೆ ಬಸ್‌ಗಳನ್ನೇ ಬಿಟ್ಟಿಲ್ಲ. ಗ್ಯಾರಂಟಿ ಯೋಜನೆಗೆ ಹಣಕಾಸಿನ ಲಭ್ಯತೆಯ ಬಗ್ಗೆಯೂ ಸರಕಾರದಲ್ಲಿ ಸ್ಪಷ್ಟತೆಯಿಲ್ಲ. ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಭೆ ಮಾಡು ವುದನ್ನು ಬಿಟ್ಟು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಡಿನ್ನರ್‌ ಪಾರ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಧ್ಯಯನ ತಂಡ
ಬಿಜೆಪಿಯಿಂದ ಹಿರಿಯ ನಾಯಕ ರಾದ ಬಿ.ಎಸ್‌.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ರಾಜ್ಯ ನಾಯಕರನ್ನು ಒಳಗೊಂಡ 17 ತಂಡ ರಚನೆ ಮಾಡಲಾಗಿದೆ. ರಾಜ್ಯಾದ್ಯಂತ ಸಂಚಾರ ಮಾಡಿ ಬರ ಪರಿಸ್ಥಿತಿ ಅಧ್ಯಯನ ನಡೆಸಲಿದೆ ಎಂದು ಹೇಳಿದರು.

ಶೀಘ್ರ ಆಯ್ಕೆಯ ನಿರೀಕ್ಷೆ
ವಿಧಾನಸಭೆ ಹಾಗೂ ವಿಧಾನಪರಿಷತ್‌ಗೆ ವಿಪಕ್ಷ ನಾಯಕರನ್ನು ಈಗಾಗಲೇ ಆಯ್ಕೆ ಮಾಡಬೇಕಿತ್ತು. ಈ ಬಗ್ಗೆ ಕೇಂದ್ರ ನಾಯಕರ ಗಮನವನ್ನು ಸೆಳೆದಿದ್ದೇವೆ. ಆದಷ್ಟು ಬೇಗ ಆಯ್ಕೆ ಪ್ರಕ್ರಿಯೆ ನಡೆಸುವ ನಿರೀಕ್ಷೆಯಿದೆ. ಸಾಮೂಹಿಕ ನಾಯಕತ್ವದೊಂದಿಗೆ ಮುಂದಿನ ಅಧಿವೇಶನದಲ್ಲಿ ರಾಜ್ಯ ಸರಕಾರದ ವೈಫ‌ಲ್ಯಗಳನ್ನು ಜನರ ಮುಂದಿಡುವ ಎಲ್ಲ ಪ್ರಯತ್ನ ಮಾಡಲಿದ್ದೇವೆ. ರಾಜ್ಯಾಧ್ಯಕ್ಷರ ಆಯ್ಕೆಯೂ ನಡೆಯಲಿದೆ ಎಂದರು.

ಪಕ್ಷದ ಕೆಲವು ಸಂಘಟನಾತ್ಮಕ ವಿಷಯಗಳು, ಹಿಂದುಳಿದ ವರ್ಗಗಳ ಮೀಸಲಾತಿ ಸಹಿತ ವಿವಿಧ ವಿಚಾರಗಳ ಚರ್ಚೆಗೆ ನನ್ನನ್ನು ಸೇರಿದಂತೆ ಕೆ.ಎಸ್‌.ಈಶ್ವರಪ್ಪ, ಪಿ.ಸಿ. ಮೋಹನ್‌ ಅವರನ್ನು ಕೇಂದ್ರದ ನಾಯಕರು ಆಹ್ವಾನಿಸಿ ಮಾತುಕತೆ ನಡೆಸಿದ್ದಾರೆ. ನಮ್ಮಿಂದ ಕೇಳಿರುವ ಮಾಹಿತಿ ನೀಡಿದ್ದೇವೆ ಎಂದವರು ತಿಳಿಸಿದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.