ಹತ್ತೂರಿನ ಮಕ್ಕಳಿಗೆ ಅಕ್ಷರ ಕಲಿಸಿದ ಜ್ಞಾನ ದೇಗುಲಕ್ಕೆ 130ರ ಸಂಭ್ರಮ

ತಲ್ಲೂರು ಸರಕಾರಿ ಹಿ.ಪ್ರಾ. ಶಾಲೆ

Team Udayavani, Nov 8, 2019, 5:00 AM IST

0511KDPP7A-2

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಕುಂದಾಪುರ: ತಲ್ಲೂರಿನ ಸರಕಾರಿ ಮಾದರಿ ಹಿ.ಪ್ರಾ. ಶಾಲೆಗೆ 130 ವರ್ಷಗಳ ಇತಿಹಾಸವಿದೆ. 1890ರಲ್ಲಿ ಆರಂಭವಾದ ಈ ಶಾಲೆಯಲ್ಲಿ ಈವರೆಗೆ ಅನೇಕ ಮಂದಿ ಮಹಾನ್‌ ಸಾಧಕರು ಜ್ಞಾನಾರ್ಜನೆ ಮಾಡಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ.

ತಲ್ಲೂರು, ಹೆಮ್ಮಾಡಿ, ಹೊಸ್ಕಳಿ, ಸಂತೋಷ್‌ ನಗರ, ದೇವಲ್ಕುಂದ, ಕಟ್‌ಬೆಲೂ¤ರು, ಕರ್ಕಿ, ಕೂಡ್ಲು – ಕನ್ಯಾನ, ರಾಜಾಡಿ, ಸಬ್ಲಾಡಿ ಹೀಗೆ ಹತ್ತಾರು ಊರುಗಳಿಗೆ ಆಗ ಸ್ವಾತಂತ್ರತ್ರ್ಯ ಪೂರ್ವದಲ್ಲಿ ಇದ್ದದು ಇದೊಂದೇ ಶಿಕ್ಷಣ ಸಂಸ್ಥೆ. ಈಗ ಹೆಮ್ಮಾಡಿ, ಕೂಡ್ಲು – ಕನ್ಯಾನ, ದೇವಲ್ಕುಂದ. ಕಟ್‌ಬೆಲೂ¤ರು, ಸಬ್ಲಾಡಿ ಸಹಿತ ಹಲವೆಡೆಗಳಲ್ಲಿ ಶಾಲೆಗಳಾಗಿವೆ.

ಓದಿದ ಮಹನೀಯರು
ಇಂಗ್ಲೆಂಡ್‌ನ‌ಲ್ಲಿ ವೈದ್ಯರಾಗಿರುವ ಡಾ| ಮೈಕಲ್‌ ಮೆನೇಜಸ್‌, ಊರಲ್ಲಿಯೇ ವೈದ್ಯರಾಗಿರುವ ಡಾ| ರಂಜಿತ್‌ ಕುಮಾರ್‌ ಹೆಗ್ಡೆ, ಖ್ಯಾತ ವಕೀಲ ಟಿ.ಬಿ. ಶೆಟ್ಟಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಅರುಣ್‌ ಕುಮಾರ್‌ ಶೆಟ್ಟಿ, ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡ ತಲ್ಲೂರು ಶಿವರಾಮ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಟಿ.ಕೆ. ಕೋಟ್ಯಾನ್‌, ಹೀಗೆ ಅನೇಕ ಮಂದಿ ಇಲ್ಲಿ ಕಲಿತವರು ಪ್ರಸಿದ್ಧರಾಗಿದ್ದಾರೆ.

ಈ ಶಾಲೆ ಶತಮಾನೋತ್ಸವ ಪೂರೈಸಿರುವ ಬಗ್ಗೆ ಹೆಮ್ಮೆಯಿದೆ. ಊರಿನ ದಾನಿಗಳು, ಹಳೆ ವಿದ್ಯಾರ್ಥಿಗಳು, ಎಸ್‌ಡಿಎಂಸಿ, ಗ್ರಾ.ಪಂ. ಸಹಕಾರದಿಂದ ಗುಣಮಟ್ಟದ ಶಿಕ್ಷಣದಲ್ಲಿಯೂ ಮುಂಚೂಣಿಯಲ್ಲಿದೆ. 2010ರಲ್ಲಿ 140 ಇದ್ದ ಮಕ್ಕಳ ಸಂಖ್ಯೆ ಈಗ 210 ಕ್ಕೆ ತಲುಪಿದೆ. ಹಾಗಾಗಿ ಶಾಲೆಗೆ ಹೆಚ್ಚುವರಿ ಕಟ್ಟಡದ ಅಗತ್ಯವಿದೆ. ಹಳೆ ವಿದ್ಯಾರ್ಥಿಗಳ ಸಹಕಾರದೊಂದಿಗೆ 130ನೇ ವರ್ಷಾಚರಣೆ ಆಚರಿಸುವ ಯೋಜನೆಯಿದೆ.
-ಶಂಕರ್‌, ಮುಖ್ಯೋಪಾಧ್ಯಾಯರು

ಶತಮಾನೋತ್ಸವ ಸಮಿತಿ ಆಚರಣೆ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದೆ. ಈಗ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷನಾಗಿದ್ದೇನೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಶಾಲೆಯಿದು. ಈಗಲೂ ಅದೇ ಗುಣ ಮಟ್ಟವನ್ನು ಕಾಪಾಡಿಕೊಂಡಿದೆ. ಈ ಶಾಲೆಯ ವಿದ್ಯಾರ್ಥಿ ಎಂದು ಹೇಳಿಕೊಳ್ಳಲು ಹೆಮ್ಮೆ ಅನ್ನಿಸುತ್ತದೆ.
-ಟಿ.ಬಿ. ಶೆಟ್ಟಿ, ಹಿರಿಯ ನ್ಯಾಯವಾದಿ
(ಹಳೆ ವಿದ್ಯಾರ್ಥಿ)

1890ರಲ್ಲಿ ಆರಂಭ
1890ರಲ್ಲಿ ಆರಂಭವಾದ ಈ ಶಾಲೆ ಈಗ 129 ವಸಂತಗಳನ್ನು ಪೂರೈಸಿ, 130ನೇ ವರ್ಷಾಚರಣೆ ಸಂಭ್ರಮದಲ್ಲಿದೆ. ಶಾಂತಮೂರ್ತಿ ಅವರು ಇಲ್ಲಿನ ಮೊದಲ ಮುಖ್ಯೋಪಾಧ್ಯಾಯರು. ಆಗ ಉಪ್ಪಿನಕುದ್ರುವಿನಲ್ಲಿ ಹೊರತುಪಡಿಸಿದರೆ, ಆಸುಪಾಸಿನಲ್ಲಿ ಇದ್ದುದು ಇದೊಂದೇ ಶಾಲೆ. ಹಾಗಾಗಿ ದೂರ-ದೂರದ ಊರುಗಳಿಂದ ಇಲ್ಲಿಗೆ ವಿದ್ಯಾರ್ಜನೆಗೆ ಬರುತ್ತಿದ್ದರು.

210 ವಿದ್ಯಾರ್ಥಿಗಳು
ಸರಕಾರಿ ಶಾಲೆಗೆ ವಿದ್ಯಾರ್ಥಿಗಳ ಕೊರತೆ ಹೆಚ್ಚಿನ ಕಡೆಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿದ್ದರೂ ಈ ಶಾಲೆಗೆ ಮಾತ್ರ ಅಂತಹ ಯಾವುದೇ ಸಮಸ್ಯೆ ಎದುರಾಗಿಲ್ಲ. ಪ್ರಸ್ತುತ ಇಲ್ಲಿ 210 ಮಂದಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಬಾರಿ 1ನೇ ತರಗತಿಗೆ ದಾಖಲಾದ ಮಕ್ಕಳ ಸಂಖ್ಯೆ 23. ಒಟ್ಟಾರೆ ಈ ವರ್ಷ 35 ಮಕ್ಕಳ ಹೊಸದಾಗಿ ದಾಖಲಾತಿಯಾಗಿದೆ. ಮುಖ್ಯ ಶಿಕ್ಷಕರು ಸೇರಿ, ಒಟ್ಟು 7 ಮಂದಿ ಬೋಧಕರಿದ್ದಾರೆ.
ಕಳೆದ 5 ವರ್ಷಗಳಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕೋಲಾಟದಲ್ಲಿ ಪ್ರತಿ ಬಾರಿ ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆ ಈ ಶಾಲೆಯ ವಿದ್ಯಾರ್ಥಿಗಳದ್ದು.

-  ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.