ಸರಕಾರಿ ಕಚೇರಿಗಳು ಪುನರ್ವಸತಿ ಕೇಂದ್ರಗಳಲ್ಲ: ಡಿಸಿ ತರಾಟೆ


Team Udayavani, Nov 14, 2018, 11:21 AM IST

dc.png

ಕುಂದಾಪುರ: ಸರಕಾರಿ ಕಚೇರಿಗಳೆಂದರೆ ಪುನರ್ವಸತಿ ಕೇಂದ್ರಗಳಲ್ಲ. ಕೆಲಸ ಮಾಡದಿದ್ದರೆ ಸಕಾರಣ ನೀಡಿ. ಸಬೂಬು ಬೇಡ. ಸರಕಾರದ ಕೆಲಸಗಳು ಕಡ್ಡಾಯ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಗ್ರಾಮಕರಣಿಕ ಹಾಗೂ ಗ್ರಾಮ ಸಹಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕುಂದಾಪುರ ತಾ.ಪಂ.ನಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಕರಣಿಕರು ಗ್ರಾಮ ಸಹಾಯಕರನ್ನು ಬಳಸಿಕೊಂಡು ಪಡಿತರ ಚೀಟಿ ದಾಖಲಾತಿ ಪರಿಶೀಲನೆ ಮಾಡಬೇಕು. 2,600 ಪಡಿತರ ಚೀಟಿಗಳು ಪರಿಶೀಲನೆಗೆ ಬಾಕಿ ಇದ್ದು, ನೆಪ ಹೇಳದೆ ವಾರಾಂತ್ಯದೊಳಗೆ ಮುಗಿಸಬೇಕು ಎಂದರು.

ನಿಧಾನಗತಿ ಏಕೆ?
ಸೆ. 7ರಂದು ಮುಖ್ಯಮಂತ್ರಿಗಳು ಪ್ರಗತಿ ಪರಿಶೀಲನೆ ವೇಳೆ ಪಡಿತರ ಚೀಟಿ ತತ್‌ಕ್ಷಣ ವಿತರಣೆಗೆ ಸೂಚಿಸಿದ್ದರೂ ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಇಷ್ಟು ಪ್ರಮಾಣದ ಅರ್ಜಿ ಬಾಕಿ ಇರುವುದು ಕೆಲಸದ ನಿಧಾನಗತಿಯನ್ನು ಸೂಚಿಸುತ್ತದೆ; ಯಾಕೆ ಹೀಗೆ ಎಂದು ಪ್ರಶ್ನಿಸಿದರು.

ಅಕ್ರಮ ಸಕ್ರಮ ಯೋಜನೆಯಲ್ಲಿ 94ಸಿ ಹಾಗೂ 94ಸಿಸಿಯಲ್ಲಿ ಹಕ್ಕುಪತ್ರ ಆದವರಿಗೆ 45 ದಿನಗಳೊಳಗೆ ಖಾತಾ ಬದಲಾವಣೆ ಮಾಡಬೇಕು. 9/11 ಹಾಗೂ ಖಾತಾ ಜೋಡಣೆಯನ್ನು ಹಕ್ಕುಪತ್ರ ನೀಡುವಾಗಲೇ ಮಾಡಬೇಕು ಎಂದು ಕಂದಾಯ ಸಚಿವರು ಸೂಚಿಸಿದ್ದು, ಕಾರವಾರದಲ್ಲಿ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಫ‌ಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಿದ್ದಾರೆ ಎಂದರು.

ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಬೆಳೆ ಸರ್ವೆ ತತ್‌ಕ್ಷಣ ಮುಗಿಸಬೇಕು, ಗ್ರಾ.ಪಂ.ಗಳಲ್ಲಿ ನಿವೇಶನ ಕಾದಿರಿಸುವಾಗ ಕಂದಾಯ, ಪಂಚಾಯತ್‌ರಾಜ್‌ ಅಧಿಕಾರಿಗಳು ಸ್ಥಳ ಪರಿಶೀಲಿಸಬೇಕು ಎಂದರು.

35 ಸಾವಿರ ಯುವಜನತೆ
ಉಡುಪಿ ಜಿಲ್ಲೆಯಲ್ಲಿ 18ರ ವಯೋಮಾನದ ಆಸುಪಾಸಿನಲ್ಲಿ 35 ಸಾವಿರ ಮಂದಿ ಇದ್ದು,
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭ ಅವರನ್ನು ಸೇರಿಸಬೇಕು. ಇದಕ್ಕೆ ಪ್ರಚಾರ ವ್ಯವಸ್ಥೆಗಳನ್ನು ಮಾಡಿ, ನ. 20ರ ವರೆಗೆ ಕುಂದಾಪುರ, ಡಿ. 20ರ ವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹೆಸರು ಸೇರಿಸಬಹುದು. ನ. 15ರಂದು ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿ ವೀಕ್ಷಕರು ಬರಲಿದ್ದಾರೆ. 7,000 ಇವಿಎಂಗಳನ್ನು ಪರಿಶೀಲನೆಗೆ ಒಳಪಡಿಸಲಾಗುವುದು ಎಂದರು.

ಸಹಾಯಕ ಕಮಿಷನರ್‌ ಟಿ. ಭೂಬಾಲನ್‌, ಕುಂದಾಪುರ ತಹಶೀಲ್ದಾರ್‌ ತಿಪ್ಪೆಸ್ವಾಮಿ, ಬೈಂದೂರು ತಹಶೀಲ್ದಾರ್‌ ಕಿರಣ್‌ ಗೋರಯ್ಯ, ತಾ.ಪಂ. ಇಒ ಕಿರಣ ಪೆಡೆ°àಕರ್‌ ಉಪಸ್ಥಿತರಿದ್ದರು.

ಎಲ್ಲ ಗ್ರಾ.ಪಂ.ಗಳಲ್ಲಿ ಆರ್‌ಟಿಸಿ
ಕೆಲವು ಗ್ರಾ.ಪಂ.ಗಳಲ್ಲಿ ಪಹಣಿ ಪತ್ರಿಕೆ ವಿತರಿಸಲು ಸಮಸ್ಯೆ ಉಂಟಾಗಿದೆ ಎನ್ನುವುದು ಡಿಸಿಯವರ ಗಮನಕ್ಕೆ ಬಂತು. ಪಹಣಿ ತೆಗೆಯಲು ಎಸ್‌ಬಿಐಯಲ್ಲಿ ರಿಚಾರ್ಜ್‌ ಮಾಡಲಾಗುತ್ತಿಲ್ಲ. ತೆಕ್ಕಟ್ಟೆ ಮತ್ತು ಕೆಲವೆಡೆ ಶೂನ್ಯ ಮೊತ್ತದ ಖಾತೆಗಳನ್ನು ಆರ್‌ಬಿಐ ನಿಯಮದಂತೆ ಎಸ್‌ಬಿಐ ರದ್ದು ಮಾಡಿದ್ದು, 10 ಸಾವಿರ ರೂ. ಹಣ ಕಟ್ಟಿ ಪ್ರತ್ಯೇಕ ಚಾಲ್ತಿ ಖಾತೆ ತೆರೆಯಬೇಕಿದೆ ಎಂದು ಪಿಡಿಒಗಳು ಸಮಸ್ಯೆ ಬಿಚ್ಚಿಟ್ಟರು. ಇದಕ್ಕೆ ಪರಿಹಾರ ಸೂಚಿಸಿದ ಡಿಸಿ, ಎಲ್ಲ ಪಂಚಾಯತ್‌ಗಳಲ್ಲೂ ಆರ್‌ಟಿಸಿ ನೀಡಬೇಕೆಂದು ತಾಕೀತು ಮಾಡಿದರು. ಬಡ್ಡಿ ಹಣದ ದುರ್ಬಳಕೆ ತಡೆಗಾಗಿ ಸರಕಾರಿ ಇಲಾಖೆಗಳ ಬ್ಯಾಂಕ್‌ ಖಾತೆಗಳನ್ನು ಉಳಿತಾಯ ಖಾತೆಯಲ್ಲಿ ತೆರೆಯದೆ ಬಡ್ಡಿ ಬರದ ಚಾಲ್ತಿ ಖಾತೆಯಲ್ಲಿಯೇ ತೆರೆಯುವಂತೆ ನಿಯಮ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.