ಸರಕಾರಿ ಶಾಲೆ ಆಸ್ತಿ ನೋಂದಣಿ ಸಂಕಷ್ಟ ! ದಾಖಲೆ ಸಮಸ್ಯೆ, ಅಧಿಕಾರಿಗಳ ಅಸಹಕಾರ


Team Udayavani, Mar 20, 2023, 7:30 AM IST

ಸರಕಾರಿ ಶಾಲೆ ಆಸ್ತಿ ನೋಂದಣಿ ಸಂಕಷ್ಟ ! ದಾಖಲೆ ಸಮಸ್ಯೆ, ಅಧಿಕಾರಿಗಳ ಅಸಹಕಾರ

ಉಡುಪಿ: ಸರಕಾರಿ ಶಾಲೆಗಳು ಇರುವ ಜಾಗದ ದಾಖಲೆ ಪತ್ರ ಸಮರ್ಪಕವಾಗಿಲ್ಲದ ಹಿನ್ನೆಲೆಯಲ್ಲಿ ಎರಡು ವರ್ಷಗಳ ಹಿಂದೆ ಜಮೀನು ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಸರಕಾರಿ ಇಲಾಖೆಗಳಿಂದ ಶಾಲೆಯ ಹೆಸರಿಗೆ ಜಮೀನು ನೋಂದಣಿ ಮಾಡಿಸಿಕೊಳ್ಳುವುದು ಕಗ್ಗಂಟಾಗುತ್ತಿದೆ.

ಕೆಲವು ಶಾಲೆಗಳು ಸರಕಾರಿ ಜಮೀನಿನಲ್ಲಿದ್ದರೂ ಕಂದಾಯ, ಲೋಕೋಪಯೋಗಿ, ಮೀನುಗಾರಿಕೆ ಅಥವಾ ಬೇರ್ಯಾವುದೋ ಇಲಾಖೆಯಲ್ಲಿ ಅದರ ದಾಖಲೆ ಪತ್ರಗಳಿರುತ್ತವೆ. ಕೆಲವು ಶಾಲೆಗಳ ಜಮೀನು ದಾನವಾಗಿ ಬಂದಿದ್ದು, ಅದರ ನೋಂದಣಿ ಕಷ್ಟವಾಗುತ್ತದೆ. ಕೆಲವೆಡೆ ಖಾಸಗಿ ಸೊತ್ತು, ಬೇರೆ ಬೇರೆ ಸಂಘ ಸಂಸ್ಥೆಗಳ ಅಧೀನದ ಜಮೀನಿನಲ್ಲಿ ಶಾಲೆಗಳಿವೆ. ಎಲ್ಲವನ್ನೂ ನೋಂದಣಿ ಮಾಡಿಸುವ ಪ್ರಕ್ರಿಯೆ ವರ್ಷಗಳಿಂದ ನಡೆಯುತ್ತಿದ್ದು, ಶೇ. 100ರಷ್ಟು ಸಾಧನೆ ಸಾಧ್ಯವಾಗುತ್ತಿಲ್ಲ.

ತಾಂತ್ರಿಕ ಸವಾಲು
ಸರಕಾರಿ ಜಮೀನಿನಲ್ಲಿರುವ ಆಸ್ತಿಗಳನ್ನು ಶಾಲೆಯ ಹೆಸರಿಗೆ ಸುಲಭವಾಗಿ ನೋಂದಣಿ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾರಣ ಮೂಲ ಇಲಾಖೆಯಿಂದ ಆ ಜಮೀನನ್ನು ಶಿಕ್ಷಣ ಇಲಾಖೆಗೆ ನೋಂದಣಿ ಮಾಡಿ ಕೊಡಲು ಅಧಿಕಾರಿಗಳು ಒಪ್ಪುತ್ತಿಲ್ಲ. ಮಾಡಿ ಕೊಡಲು ಸಿದ್ಧವಿರುವ ಕೆಲವು ಕಡೆ ಮೇಲಧಿಕಾರಿಗಳು ಮುಂದಿನ ಪ್ರಕ್ರಿಯೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಶಾಲಾ ಮುಖ್ಯ ಶಿಕ್ಷಕರಿಗೆ ಜಮೀನು ದಾಖಲೆ ಹಿಡಿದು ಇಲಾಖೆಯಿಂದ ಇಲಾಖೆಗೆ ಅಲೆಯುವುದೇ ಕೆಲಸ ವಾಗಿದೆ. ಕೆಲವು ತಾಂತ್ರಿಕ ಸವಾಲುಗಳಿಗೆ ಸರಕಾರವೇ ಮುಕ್ತಿ ನೀಡಬೇಕು ಎಂಬ ಆಗ್ರಹವೂ ಕೇಳಿಬರುತ್ತಿವೆ.

ಉಡುಪಿ ಜಿಲ್ಲೆಯಲ್ಲಿ 578 ಸರಕಾರಿ ಪ್ರಾಥಮಿಕ ಶಾಲೆ ಹಾಗೂ 106 ಪ್ರೌಢಶಾಲೆಗಳಿವೆ. 384 ಪ್ರಾಥಮಿಕ ಶಾಲೆಗಳ ಆಸ್ತಿ ನೋಂದಣಿ ಮಾಡಿದ್ದು, 194 ನೋಂದಣಿಗೆ ಬಾಕಿಯಿದೆ.

ಇದರಲ್ಲಿ ತಲಾ 7 ದಾನ ಹಾಗೂ ಖಾಸಗಿ ಸೊತ್ತಾಗಿದೆ. 55 ಪ್ರೌಢಶಾಲೆ ಆಸ್ತಿ ನೋಂದಣಿಯಾಗಿದ್ದು, 51 ಬಾಕಿಯಿದೆ. 1 ದಾನ ಹಾಗೂ ಮೂರು ಖಾಸಗಿ ಸೊತ್ತಿನಲ್ಲಿದೆ.

ದ.ಕ. ಜಿಲ್ಲೆಯ 914 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 838 ಶಾಲೆಗಳ ಆಸ್ತಿ ನೋಂದಣಿ ಆಗಿದ್ದು, 76 ಬಾಕಿಯಿದೆ. 21 ದಾನ, 45 ಖಾಸಗಿ ಸೊತ್ತು ಸೇರಿದೆ. 170 ಪ್ರೌಢಶಾಲೆಗಳಲ್ಲಿ 158 ನೋಂದಣಿಯಾಗಿದ್ದು, 12 ಬಾಕಿಯಿದೆ. ತಲಾ ಒಂದೊಂದು ದಾನ ಹಾಗೂ ಖಾಸಗಿ ಸೊತ್ತಾಗಿದೆ.

ಸರಕಾರಿ ಜಮೀನು ಹೆಚ್ಚಿದೆ
ಉಭಯ ಜಿಲ್ಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಯಾವುದೇ ಶಾಲೆಯ ನೋಂದಣಿ ಪ್ರಕ್ರಿಯೆ ನಡೆದಿಲ್ಲ. ಆಸ್ತಿ ನೋಂದಣಿಗೆ ಬಾಕಿ ಇರುವ 333 ಶಾಲೆಗಳಲ್ಲಿ 226 ಶಾಲೆಗಳು ಸರಕಾರಿ ಜಮೀನಿನಲ್ಲಿವೆ. ಉಳಿದವು ಖಾಸಗಿ ಹಾಗೂ ದಾನ ರೂಪದಲ್ಲಿ ಬಂದಿರುವ ಜಮೀನಿನಲ್ಲಿವೆ.

ನೋಂದಣಿ ಯಾಕೆ?
ಹಲವು ಕಡೆಗಳಲ್ಲಿ ಸರಕಾರಿ ಶಾಲೆಗಳ ಜಮೀನು ಎಷ್ಟಿದೆ ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲ. ಕೆಲವು ಕಡೆಗಳಲ್ಲಿ ಸರಕಾರಿ ಶಾಲೆಯ ಜಾಗವನ್ನು ಪರಭಾರೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರಕಾರಿ ಶಾಲೆಗಳ ಆಸ್ತಿ ನೋಂದಣಿಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಸರಕಾರಿ ಇಲಾಖೆಗಳ ಜಮೀನಿನಲ್ಲಿರುವ ಶಾಲೆಯನ್ನು ಶಿಕ್ಷಣ ಇಲಾಖೆಯಡಿ ನೋಂದಣಿ ಮಾಡಿಕೊಳ್ಳಲು ಶಾಲೆಗಳಿಂದ ಹೋಗಿರುವ ಪ್ರಸ್ತಾವನೆ ಆಧಾರದಲ್ಲಿ ಮೂಲ ಇಲಾಖೆಯಿಂದ ಸರಕಾರಕ್ಕೆ ಕಳುಹಿಸಿ, ಅನುಮತಿ ನೀಡ ಬೇಕಾಗುತ್ತದೆ. ಕೆಲವು ಕಡೆಗಳಲ್ಲಿ ಫಾಲೋಅಪ್‌ ಕೊರತೆಯಿಂದ ನೋಂದಣಿ ಬಾಕಿ ಉಳಿದಿದೆ. ಆದಷ್ಟು ಬೇಗ ಪೂರ್ಣಗೊಳಿಸ ಲಾಗುವುದು.
-ಡಾ| ವಿಶಾಲ್‌, ಆಯುಕ್ತರು,
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.