Govt ಉಭಯ ಜಿಲ್ಲೆಯ ಸರಕಾರಿ ಶಾಲೆಗಳು ನಿರಾಳ: ಶಾಲಾ ಮಕ್ಕಳ ಶೂ, ಸಾಕ್ಸ್‌ ಮತ್ತು ಚಪ್ಪಲಿ


Team Udayavani, Dec 8, 2023, 11:59 PM IST

Govt ಉಭಯ ಜಿಲ್ಲೆಯ ಸರಕಾರಿ ಶಾಲೆಗಳು ನಿರಾಳ: ಶಾಲಾ ಮಕ್ಕಳ ಶೂ, ಸಾಕ್ಸ್‌ ಮತ್ತು ಚಪ್ಪಲಿ

ಉಡುಪಿ: ಸರಕಾರ ಅಥವಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ನಿರ್ದೇಶನವನ್ನು ಉಲ್ಲಂಘಿಸಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌ ಬದಲಿಗೆ ಸ್ಯಾಂಡಲ್‌ (ಚಪ್ಪಲಿ) ವಿತರಿಸಿದ ಶಾಲಾ ಮುಖ್ಯಶಿಕ್ಷಕರು ಸಹಿತ ಎಸ್‌ಡಿಎಂಸಿಗಳ ವಿರುದ್ಧ ಇಲಾಖೆಯಿಂದ ಕ್ರಮ ತೆಗೆದುಕೊಳ್ಳುವ ಸಾಧ್ಯತೆಯಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಲ್ಲಿ ಸ್ಯಾಂಡಲ್‌ ವಿತರಿಸಿದ್ದರೂ ಯಾವುದೇ ಸಮಸ್ಯೆಯಾಗದು.

ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಳೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣಾಂಶ ಹೆಚ್ಚಿರುವುದರಿಂದ ಆಯಾ ಪ್ರದೇಶದ ವಾತಾವರಣಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಧರಿಸಲು ಹಾಗೂ ತೆಗೆಯಲು ಅನುಕೂಲವಾಗುವಂತೆ ಶೂ, ಸಾಕ್ಸ್‌, ಸ್ಯಾಂಡಲ್‌ಗ‌ಳನ್ನು ಶಾಲಾ ಮೇಲುಸ್ತುವಾರಿ ಸಮಿತಿ ನಿರ್ಣಯದಂತೆ ಖರೀದಿಸಿ, ವಿತರಿಸಲು ಅನುಮತಿಯನ್ನು ಇಲಾಖೆ ನೀಡಿತ್ತು. ಅದರಂತೆ ಉಡುಪಿಯ ಶಾಲೆಗಳಲ್ಲಿ ಹಾಗೂ ದ.ಕ. ಕೆಲವು ಶಾಲೆಗಳಲ್ಲಿ ಸ್ಯಾಂಡಲ್‌ ವಿತರಣೆ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌ ಬದಲಿಗೆ ಸ್ಯಾಂಡಲ್‌ ನೀಡಲಾಗಿದೆ ಎಂದು ಪಾಲಕ, ಪೋಷಕರು ಇಲಾಖೆಗೆ ದೂರು ಸಲ್ಲಿಸಿದ್ದರು. ಇದು ಶಿಕ್ಷಣ ಸಚಿವರ ಗಮನಕ್ಕೂ ಬಂದಿತ್ತು. ಸರಕಾರದ ಆದೇಶದಂತೆ ಶೂ, ಸಾಕ್ಸ್‌ ಬದಲಿಗೆ ಚಪ್ಪಲಿ ವಿತರಣೆ ಮಾಡಿದ್ದಲ್ಲಿ ಸಮಸ್ಯೆಯಿಲ್ಲ. ನಿಯಮ ಉಲ್ಲಂ ಸಿ ಚಪ್ಪಲಿ ವಿತರಣೆ ಮಾಡಿದ್ದಲ್ಲಿ ಅಂತಹ ಶಾಲಾಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇಲಾಖೆಯ ಶಿಸ್ತು ಕ್ರಮ ಎದುರಿಸಲಿದ್ದಾರೆ.

1ರಿಂದ 5ನೇ ತರಗತಿ ಮಕ್ಕಳ ಒಂದು ಜತೆ ಶೂ, ಸಾಕ್ಸ್‌ ಅಥವಾ ಚಪ್ಪಲಿ ಖರೀದಿಗೆ ಇಲಾಖೆಯಿಂದ 265 ರೂ., 6ರಿಂದ 8ನೇ ತರಗತಿ ಮಕ್ಕಳ ಶೂ, ಸಾಕ್ಸ್‌ ಅಥವಾ ಚಪ್ಪಲಿ ಖರೀದಿಗೆ 295 ರೂ. ಹಾಗೂ 9 ಮತ್ತು 10ನೇ ತರಗತಿ ಮಕ್ಕಳ ಶೂ, ಸಾಕ್ಸ್‌ ಅಥವಾ ಚಪ್ಪಲಿ ಖರೀದಿಗೆ 325 ರೂ. ನೀಡಲಾಗಿದೆ. ಚಪ್ಪಲಿಗೂ ಖರೀದಿಗೂ ನಿರ್ದಿಷ್ಟ ಅನುದಾನವೇ ಬಳಸಬೇಕು. ಖರೀದಿಯಲ್ಲಿ ಅವ್ಯವಹಾರ, ಲೋಪ ಮಾಡಬಾರದು ಎಂಬ ನಿರ್ದೇಶನವನ್ನು ನೀಡಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆ ಹೆಚ್ಚಿರುವುದರಿಂದ ಎಸ್‌ಡಿಎಂಸಿ ನಿರ್ಧಾರದಂತೆ ಸ್ಯಾಂಡಲ್‌ ಖರೀದಿಗೆ ಇಲಾಖೆಯಿಂದ ಅವಕಾಶ ನೀಡಲಾಗಿದೆ. ನಗರ ಪ್ರದೇಶ ಅಥವಾ ಜಿಲ್ಲಾ ಕೇಂದ್ರದ ಕೆಲವು ಶಾಲೆಗಳಲ್ಲಿ ಶೂ, ಸಾಕ್ಸ್‌ ಖರೀದಿಸಿದ್ದಾರೆ.

ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಚಿಕ್ಕಮಗಳೂರು, ದಾವಣಗೆರೆ, ಗದಗ, ಶಿರಸಿ, ಶಿವಮೊಗ್ಗ, ಉಡುಪಿ ಹಾಗೂ ದ.ಕ.ದ ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಚಪ್ಪಲಿ ವಿತರಣೆ ಮಾಡಲಾಗಿದೆ. ಉಳಿದೆಲ್ಲ ಜಿಲ್ಲೆಗಳಲ್ಲೂ ಶೂ, ಸಾಕ್ಸ್‌ ವಿತರಿಸಲಾಗಿದೆ. ಉಡುಪಿಯಲ್ಲಿ 39,368 ಹಾಗೂ ದ.ಕ.ದಲ್ಲಿ 16,819, ಶಿವಮೊಗ್ಗದಲ್ಲಿ 915, ಗದಗದಲ್ಲಿ 423, ಚಿಕ್ಕಮಗಳೂರಿನಲ್ಲಿ 9473 ಮಕ್ಕಳಿಗೆ ಚಪ್ಪಲಿ ವಿತರಿಸಲಾಗಿದೆ.

ಸರಕಾರದ ನಿಯಮಾನುಸಾರವಾಗಿ ಶೂ, ಸಾಕ್ಸ್‌ ಬದಲಿಗೆ ಚಪ್ಪಲಿ ವಿತರಣೆ ಮಾಡಿದ್ದಲ್ಲಿ ಯಾವುದೇ ಸಮಸ್ಯೆಯಿಲ್ಲ. ಸರಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕಾಗುತ್ತದೆ. ನಿಯಮ ಮೀರಿ ನಿರ್ಧಾರ ತೆಗೆದುಕೊಂಡಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಆಗಲಿದೆ.
– ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.