Govt ಉಭಯ ಜಿಲ್ಲೆಯ ಸರಕಾರಿ ಶಾಲೆಗಳು ನಿರಾಳ: ಶಾಲಾ ಮಕ್ಕಳ ಶೂ, ಸಾಕ್ಸ್‌ ಮತ್ತು ಚಪ್ಪಲಿ


Team Udayavani, Dec 8, 2023, 11:59 PM IST

Govt ಉಭಯ ಜಿಲ್ಲೆಯ ಸರಕಾರಿ ಶಾಲೆಗಳು ನಿರಾಳ: ಶಾಲಾ ಮಕ್ಕಳ ಶೂ, ಸಾಕ್ಸ್‌ ಮತ್ತು ಚಪ್ಪಲಿ

ಉಡುಪಿ: ಸರಕಾರ ಅಥವಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ನಿರ್ದೇಶನವನ್ನು ಉಲ್ಲಂಘಿಸಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌ ಬದಲಿಗೆ ಸ್ಯಾಂಡಲ್‌ (ಚಪ್ಪಲಿ) ವಿತರಿಸಿದ ಶಾಲಾ ಮುಖ್ಯಶಿಕ್ಷಕರು ಸಹಿತ ಎಸ್‌ಡಿಎಂಸಿಗಳ ವಿರುದ್ಧ ಇಲಾಖೆಯಿಂದ ಕ್ರಮ ತೆಗೆದುಕೊಳ್ಳುವ ಸಾಧ್ಯತೆಯಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಲ್ಲಿ ಸ್ಯಾಂಡಲ್‌ ವಿತರಿಸಿದ್ದರೂ ಯಾವುದೇ ಸಮಸ್ಯೆಯಾಗದು.

ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಳೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣಾಂಶ ಹೆಚ್ಚಿರುವುದರಿಂದ ಆಯಾ ಪ್ರದೇಶದ ವಾತಾವರಣಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಧರಿಸಲು ಹಾಗೂ ತೆಗೆಯಲು ಅನುಕೂಲವಾಗುವಂತೆ ಶೂ, ಸಾಕ್ಸ್‌, ಸ್ಯಾಂಡಲ್‌ಗ‌ಳನ್ನು ಶಾಲಾ ಮೇಲುಸ್ತುವಾರಿ ಸಮಿತಿ ನಿರ್ಣಯದಂತೆ ಖರೀದಿಸಿ, ವಿತರಿಸಲು ಅನುಮತಿಯನ್ನು ಇಲಾಖೆ ನೀಡಿತ್ತು. ಅದರಂತೆ ಉಡುಪಿಯ ಶಾಲೆಗಳಲ್ಲಿ ಹಾಗೂ ದ.ಕ. ಕೆಲವು ಶಾಲೆಗಳಲ್ಲಿ ಸ್ಯಾಂಡಲ್‌ ವಿತರಣೆ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌ ಬದಲಿಗೆ ಸ್ಯಾಂಡಲ್‌ ನೀಡಲಾಗಿದೆ ಎಂದು ಪಾಲಕ, ಪೋಷಕರು ಇಲಾಖೆಗೆ ದೂರು ಸಲ್ಲಿಸಿದ್ದರು. ಇದು ಶಿಕ್ಷಣ ಸಚಿವರ ಗಮನಕ್ಕೂ ಬಂದಿತ್ತು. ಸರಕಾರದ ಆದೇಶದಂತೆ ಶೂ, ಸಾಕ್ಸ್‌ ಬದಲಿಗೆ ಚಪ್ಪಲಿ ವಿತರಣೆ ಮಾಡಿದ್ದಲ್ಲಿ ಸಮಸ್ಯೆಯಿಲ್ಲ. ನಿಯಮ ಉಲ್ಲಂ ಸಿ ಚಪ್ಪಲಿ ವಿತರಣೆ ಮಾಡಿದ್ದಲ್ಲಿ ಅಂತಹ ಶಾಲಾಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇಲಾಖೆಯ ಶಿಸ್ತು ಕ್ರಮ ಎದುರಿಸಲಿದ್ದಾರೆ.

1ರಿಂದ 5ನೇ ತರಗತಿ ಮಕ್ಕಳ ಒಂದು ಜತೆ ಶೂ, ಸಾಕ್ಸ್‌ ಅಥವಾ ಚಪ್ಪಲಿ ಖರೀದಿಗೆ ಇಲಾಖೆಯಿಂದ 265 ರೂ., 6ರಿಂದ 8ನೇ ತರಗತಿ ಮಕ್ಕಳ ಶೂ, ಸಾಕ್ಸ್‌ ಅಥವಾ ಚಪ್ಪಲಿ ಖರೀದಿಗೆ 295 ರೂ. ಹಾಗೂ 9 ಮತ್ತು 10ನೇ ತರಗತಿ ಮಕ್ಕಳ ಶೂ, ಸಾಕ್ಸ್‌ ಅಥವಾ ಚಪ್ಪಲಿ ಖರೀದಿಗೆ 325 ರೂ. ನೀಡಲಾಗಿದೆ. ಚಪ್ಪಲಿಗೂ ಖರೀದಿಗೂ ನಿರ್ದಿಷ್ಟ ಅನುದಾನವೇ ಬಳಸಬೇಕು. ಖರೀದಿಯಲ್ಲಿ ಅವ್ಯವಹಾರ, ಲೋಪ ಮಾಡಬಾರದು ಎಂಬ ನಿರ್ದೇಶನವನ್ನು ನೀಡಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆ ಹೆಚ್ಚಿರುವುದರಿಂದ ಎಸ್‌ಡಿಎಂಸಿ ನಿರ್ಧಾರದಂತೆ ಸ್ಯಾಂಡಲ್‌ ಖರೀದಿಗೆ ಇಲಾಖೆಯಿಂದ ಅವಕಾಶ ನೀಡಲಾಗಿದೆ. ನಗರ ಪ್ರದೇಶ ಅಥವಾ ಜಿಲ್ಲಾ ಕೇಂದ್ರದ ಕೆಲವು ಶಾಲೆಗಳಲ್ಲಿ ಶೂ, ಸಾಕ್ಸ್‌ ಖರೀದಿಸಿದ್ದಾರೆ.

ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಚಿಕ್ಕಮಗಳೂರು, ದಾವಣಗೆರೆ, ಗದಗ, ಶಿರಸಿ, ಶಿವಮೊಗ್ಗ, ಉಡುಪಿ ಹಾಗೂ ದ.ಕ.ದ ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಚಪ್ಪಲಿ ವಿತರಣೆ ಮಾಡಲಾಗಿದೆ. ಉಳಿದೆಲ್ಲ ಜಿಲ್ಲೆಗಳಲ್ಲೂ ಶೂ, ಸಾಕ್ಸ್‌ ವಿತರಿಸಲಾಗಿದೆ. ಉಡುಪಿಯಲ್ಲಿ 39,368 ಹಾಗೂ ದ.ಕ.ದಲ್ಲಿ 16,819, ಶಿವಮೊಗ್ಗದಲ್ಲಿ 915, ಗದಗದಲ್ಲಿ 423, ಚಿಕ್ಕಮಗಳೂರಿನಲ್ಲಿ 9473 ಮಕ್ಕಳಿಗೆ ಚಪ್ಪಲಿ ವಿತರಿಸಲಾಗಿದೆ.

ಸರಕಾರದ ನಿಯಮಾನುಸಾರವಾಗಿ ಶೂ, ಸಾಕ್ಸ್‌ ಬದಲಿಗೆ ಚಪ್ಪಲಿ ವಿತರಣೆ ಮಾಡಿದ್ದಲ್ಲಿ ಯಾವುದೇ ಸಮಸ್ಯೆಯಿಲ್ಲ. ಸರಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕಾಗುತ್ತದೆ. ನಿಯಮ ಮೀರಿ ನಿರ್ಧಾರ ತೆಗೆದುಕೊಂಡಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಆಗಲಿದೆ.
– ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.