ಉಡುಪಿ ತಾಯಿ, ಮಕ್ಕಳ ಆಸ್ಪತ್ರೆ : ಸರಕಾರದಿಂದಲೇ ನಿರ್ವಹಣೆ: ಸಚಿವ ಡಾ| ಸುಧಾಕರ್ ಭರವಸೆ
Team Udayavani, Sep 23, 2021, 7:50 AM IST
ಬೆಂಗಳೂರು/ಉಡುಪಿ: ಉಡುಪಿಯ ತಾಯಿ ಮತ್ತು ಮಗುವಿನ ಆಸ್ಪತ್ರೆಯನ್ನು ಸರಕಾರವೇ ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಿ ನಿರ್ವಹಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಕೆ. ಸುಧಾಕರ್ ಹೇಳಿದ್ದಾರೆ.
ಉಡುಪಿ ಶಾಸಕ ರಘುಪತಿ ಭಟ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಸ್ಪತ್ರೆಯನ್ನು 70 ಹಾಸಿಗೆಯಿಂದ 200 ಹಾಸಿಗೆಗೆ ಹೆಚ್ಚಿಸಿ ಅಭಿವೃದ್ಧಿಪಡಿಸಲು ಬಿ.ಆರ್.ಶೆಟ್ಟಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈಗ ಸಂಸ್ಥೆ ಮುಖ್ಯಸ್ಥ ಬಿ.ಆರ್. ಶೆಟ್ಟಿ ಅವರು ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಈಗಾಗಲೇ ಕರ್ತವ್ಯ ನಿರ್ವಹಿಸುವ ಸಿಬಂದಿಯ ಜವಾಬ್ದಾರಿಯನ್ನು ಕೂಡ ಸರಕಾರವೇ ವಹಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಹೀಗಾಗಿ ತಾಯಿ ಮತ್ತು ಮಗುವಿನ ಆಸ್ಪತ್ರೆಯ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದರು. ಆಸ್ಪತ್ರೆಯ ಕ್ಯಾಂಟೀನ್ ಸಹಿತ ಇತರ ಬಾಕಿ ಹಣ ಸುಮಾರು 5 ಕೋಟಿ ರೂ. ಇದೆ. ಅದನ್ನು ಕೂಡ ಸರಕಾರವೇ ತೀರಿಸಬೇಕಿದೆ ಎಂದು ರಘುಪತಿ ಭಟ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ