ಕುಂದಾಪುರ : ಬಾವಿ ಕುಸಿತ, ಹಾಸ್ಟೆಲ್ ಗೋಡೆಗೆ ಅಪಾಯ
Team Udayavani, Jun 22, 2018, 2:15 AM IST
ಕುಂದಾಪುರ: ಕುಂದಾಪುರ ಪುರಸಭೆಯ ಅಧೀನದ ನಿರುಪಯುಕ್ತ ಬಾವಿಯೊಂದು ಮಳೆ ನೀರಿನ ಒತ್ತಡದಿಂದ ಬುಧವಾರ ತಡರಾತ್ರಿ ಕುಸಿದು ಬಿದ್ದಿದ್ದು, ಇದಕ್ಕೆ ತಾಗಿಕೊಂಡೇ ಇರುವ ಪ.ಜಾತಿ, ಪಂಗಡದ ಬಾಲಕರ ವಿದ್ಯಾರ್ಥಿನಿಲಯದ ಊಟದ ಕೋಣೆಯಿರುವ ಕಟ್ಟಡಕ್ಕೂ ಅಪಾಯ ಎದುರಾಗುವ ಸಂಭವವಿದೆ.
ಕಟ್ಟಡದಲ್ಲಿ ಬಿರುಕು
ನಿರಂತರ ಮಳೆಯಾಗುತ್ತಿರುವುದರಿಂದ ಬಾವಿಯು ಮತ್ತೆ ಮತ್ತೆ ಕುಸಿಯುತ್ತಿದೆ. ಒಂದು ಬದಿಯ ಆವರಣ ಗೋಡೆ ಕೂಡ ಕುಸಿದು ಬಿದ್ದು ಅಪಾಯದ ಸ್ಥಿತಿಯಲ್ಲಿದೆ. ಈ ಬಾವಿಯ ಆವರಣ ಗೋಡೆಗೆ ತಾಗಿಕೊಂಡೇ ಇದ್ದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೊಳಪಟ್ಟ ಈ ಹಾಸ್ಟೆಲ್ ನ ಶೌಚಾಲಯದ ಗೋಡೆಯೂ ಬಿರುಕು ಬಿಟ್ಟಿದೆ.
ನಿರುಪಯುಕ್ತ ಬಾವಿ
25 ವರ್ಷಗಳ ಹಿಂದಿನ ಬಾವಿ ಇದಾಗಿದ್ದು, ಪುರಸಭೆಯ ಕೆಲ ವಾರ್ಡ್ಗಳಿಗೆ ಇಲ್ಲಿಂದ ನೀರು ಪೂರೈಸಲಾಗುತ್ತಿತ್ತು. ಕೆಲ ವರ್ಷಗಳ ಹಿಂದೆ ಪುರಸಭೆಗೆ ವಾರಾಹಿ ನೀರನ್ನು ತರಿಸಲು ಆರಂಭಿಸಿದ್ದರಿಂದ ಈ ಬಾವಿಯ ನೀರು ತೆಗೆಯುವುದನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಇದು ಅಪಾಯಕಾರಿ ಬಾವಿಯಾಗಿದ್ದರೂ, ಮುಚ್ಚದೇ ಹಾಗೇ ಬಿಟ್ಟಿರುವುದು ಯಾಕೆ ಎನ್ನುವುದು ಸ್ಥಳೀಯರ ಪ್ರಶ್ನೆಯಾಗಿದೆ.
ಪುರಸಭೆಯಿಂದ ಕಾರ್ಯಾರಂಭ
ಬಾವಿ ಕುಸಿದು ಬಿದ್ದ ಅನಂತರ ಪುರಸಭೆ ಎಚ್ಚೆತ್ತುಕೊಂಡಿದ್ದು, ಗುರುವಾರ ಬೆಳಗ್ಗಿನಿಂದಲೇ ಸಮರೋಪಾದಿ ಕಾರ್ಯ ನಡೆಯುತ್ತಿದೆ. ಸದ್ಯಕ್ಕೆ ಬಾವಿ ಕುಸಿದು ಬೀಳದಂತೆ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಪುರಸಭೆಯ ಮುಖ್ಯಾಧಿಕಾರಿ ಕೆ. ಗೋಪಾಲಕೃಷ್ಣ ‘ಉದಯವಾಣಿ’ಗೆ ತಿಳಿಸಿದ್ದಾರೆ. ಕುಂದಾಪುರ ತಹಶೀಲ್ದಾರ್ ರವಿ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಚಂದ್ರಶೇಖರ ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು. ಹಾಸ್ಟೆಲ್ ವಾರ್ಡನ್ ವಿ. ಲಕ್ಷ್ಮಿ, ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ಪ್ರಭಾಕರ್, ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.
ಎಸಿ ಭೇಟಿ
ಸುದ್ದಿ ತಿಳಿದ ತತ್ ಕ್ಷಣ ಗುರುವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಟಿ. ಭೂಬಾಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಕೂಡಲೇ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದರಲ್ಲದೆ, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಲು ಪುರಸಭೆ ಹಾಗೂ ತಾಲೂಕು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!