ಹೆಬ್ರಿ, ಬೈಂದೂರಿನಲ್ಲಿ ಶೀಘ್ರ ಸರಕಾರಿ ಗೋಶಾಲೆ

ಗೋ ಸಂರಕ್ಷಣೆಗೆ ಸರಕಾರ ವಿಶೇಷ ಕಾಳಜಿ

Team Udayavani, May 29, 2022, 9:50 AM IST

go-school

ಉಡುಪಿ:ಗೋ ಸಂರಕ್ಷಣೆಗೆ ಸರಕಾರ ವಿಶೇಷ ಕಾಳಜಿ ವಹಿಸುತ್ತಿದ್ದು, ಉಡುಪಿ ಜಿಲ್ಲೆಯ ಎರಡು ಕಡೆಗಳಲ್ಲಿ ಸರಕಾರಿ ಗೋಶಾಲೆಗಳ ನಿರ್ಮಾಣಕ್ಕೆ ಮುಂದಾಗಿದೆ.

ಈಗಾಗಲೇ ಜಿಲ್ಲೆಯಲ್ಲಿ 16 ಖಾಸಗಿ ಗೋಶಾಲೆ ಗಳು ಕಾರ್ಯಾಚರಣೆ ಮಾಡುತ್ತಿದ್ದು, ಸರಕಾರದ ನಿಯಮಾವಳಿ ಅನುಸಾರ ವೆಂಕಟರಮಣ ಗೋಶಾಲೆ, ನೀಲಾವರ ಗೋಶಾಲೆ ಹಾಗೂ ಅಮೃತಧಾರೆ ಗೋಶಾಲೆಗಳಿಗೆ ಅನುದಾನ ಬರುತ್ತಿದೆ. ಉಳಿದ ಗೋಶಾಲೆಗಳನ್ನು ಖಾಸಗಿಯವರೇ ನಿರ್ವಹಿಸುತ್ತಿ ದ್ದಾರೆ. ಕಾರ್ಕಳದ ವೆಂಕಟರಮಣ ಗೋಶಾಲೆಯವರು ಈ ಬಾರಿಯಿಂದ ಅನುದಾನವಿಲ್ಲದೆ ತಾವೇ ನಿರ್ವಹಿಸುವುದಾಗಿ ತಿಳಿಸಿದ್ದಾರೆ.

ಹೆಚ್ಚುವರಿ ನಿರ್ಮಾಣ ಎಲ್ಲಿ?

ಹೆಬ್ರಿ ತಾಲೂಕಿನ ಕೆರೆಬೆಟ್ಟುವಿನಲ್ಲಿ ಸುಮಾರು 13.24 ಎಕರೆ ಜಾಗದಲ್ಲಿ ಹಾಗೂ ಬೈಂದೂರು ಗೋಳಿಹೊಳೆಯಲ್ಲಿ 9.28 ಎಕರೆ ಪ್ರದೇಶದಲ್ಲಿ ನಿರ್ಮಾಣಕ್ಕೆ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದು, ಇದಕ್ಕೆ ಅನುಮೋದನೆ ಲಭಿಸಿದೆ. ಕೆರೆಬೆಟ್ಟುವಿನಲ್ಲಿ ಪ್ರಾರಂಭಿಕ ಹಂತದ ಕೆಲಸ ಕಾರ್ಯ ಗಳು ನಡೆಯುತ್ತಿವೆ. ಈಗಾಗಲೇ ಸರಕಾರ ದಿಂದ 53 ಲ.ರೂ. ಅನುದಾನ ಲಭಿಸಿದೆ.

ಗೋ ಸಾಗಾಟಕ್ಕೂ ಹಲವು ನಿಯಮ

ಹಸುಗಳನ್ನು ಕೃಷಿ, ಪಶುಸಂಗೋಪನೆ ಉದ್ದೇಶಕ್ಕಾಗಿ ಸಾಗಾಟ ಮಾಡುವವರಿಗೆ ಸಾರಿಗೆ ದೃಢೀಕರಣ ಪತ್ರ, ಮಾಲಕತ್ವ ದಾಖಲೆ ಹಾಗೂ ಪಶು ಪ್ರಥಮ ಚಿಕಿತ್ಸಾ ಪರಿಕರಗಳನ್ನು ಹೊಂದಿರಬೇಕು. 15 ಕಿ.ಮೀ. ವ್ಯಾಪ್ತಿಯೊಳಗೆ ಎರಡು ಹಸು ಅಥವಾ ಅವುಗಳ ಕರುಗಳ ಸಾಗಾಟಕ್ಕೆ ಯಾವುದೇ ಸಾರಿಗೆ ಅನುಮತಿ ಅಗತ್ಯವಿಲ್ಲ. ಹಸು ಸಾಗಾಟ ಮಾಡುವ ವಾಹನದ ಮೇಲೆ ಕೆಂಪು ಬಣ್ಣದ ದಪ್ಪ ಅಕ್ಷರಗಳಲ್ಲಿ ರವಾನಿಸುವವರು, ಸ್ವೀಕರಿಸುವವರ ಹೆಸರು, ವಿಳಾಸ ಹಾಗೂ ದೂರವಾಣಿ ‌ಂಖ್ಯೆ, ಸಾಗಾಟ ಮಾಡುವ ಹಸುಗಳ ಸಂಖ್ಯೆ, ತಳಿ ಹಾಗೂ ಪೂರೈಸಲಾದ ಆಹಾರ ಪ್ರಮಾಣವನ್ನು ಕಡ್ಡಾಯವಾಗಿ ಬರೆಯಬೇಕೆಂಬ ನಿಯಮಗಳಿವೆ. ಈ ಎಲ್ಲ ಅಂಶಗಳನ್ನು ಉಲ್ಲಂ ಸಿದ್ದೇ ಆದಲ್ಲಿ ಸ್ಥಳೀಯ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಬಹುದು.

ಒಂದು ಗೋವಿಗೆ ದಿನಕ್ಕೆ 17.50 ರೂ.

ಸರಕಾರಿ ಗೋಶಾಲೆ ಗಳಲ್ಲಿರುವ ಪ್ರತೀ ಗೋವಿಗೆ ದಿನಕ್ಕೆ 17.50 ರೂ.ನಂತೆ ನೀಡಲಾಗುತ್ತಿದೆ. ಈ ದರವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿದ್ದರೂ ಆ ಬೇಡಿಕೆ ಇನ್ನೂ ಈಡೇರಿಲ್ಲ. ಸರಕಾರದ ಅನುದಾನ ಲಭಿಸಲು ದರ್ಪಣ ಪೋರ್ಟಲ್‌ನಲ್ಲಿ ನೋಂದಣಿ ಮಾಡಬೇಕು. 3 ವರ್ಷ ಗಳಿಂದ ನಡೆಸುತ್ತಿರಬೇಕು. ಸಾವಿರಕ್ಕೂ ಅಧಿಕ ಗೋವುಗಳಿರಬೇಕು ಎಂಬೆಲ್ಲ ನಿಯಮಾವಳಿಗಳಿವೆ.

ಶೀಘ್ರ ಕಾಮಗಾರಿ

ಹೆಬ್ರಿ, ಬೈಂದೂರಿನಲ್ಲಿ ಗೋಶಾಲೆ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ. ಹೆಬ್ರಿಯಲ್ಲಿ ಈಗಾಗಲೇ ಕಾರ್ಯಾರಂಭವಾಗಿವೆ. ಬೈಂದೂರಿನಲ್ಲಿಯೂ ಶೀಘ್ರದಲ್ಲಿ ಕಾಮಗಾರಿಗಳನ್ನು ಶುರುಮಾಡಲಿದ್ದೇವೆ. ಡಾ| ಶಂಕರ್‌ ಶೆಟ್ಟಿ, ಉಪ ನಿರ್ದೇಶಕರು, ಪಶುಸಂಗೋಪನ ಇಲಾಖೆ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.