ಶತಮಾನೋತ್ತರ ಶಾಲೆಯಲ್ಲಿದೆ ಹಲವು ಕೊರತೆಗಳು

ಶಿರೂರು ಸ.ಮಾ.ಹಿ.ಪ್ರಾ. ಶಾಲೆ

Team Udayavani, Oct 2, 2021, 5:46 AM IST

ಶತಮಾನೋತ್ತರ ಶಾಲೆಯಲ್ಲಿದೆ ಹಲವು ಕೊರತೆಗಳು

ಬೈಂದೂರು: ಶಿರೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯು 1898ರಲ್ಲಿ ಆರಂಭಗೊಂಡಿತು. ಅತ್ಯಾಕರ್ಷಕ ವಿನ್ಯಾಸದ ಒಳಾಂಗಣ, ಮಳೆ ನೀರು ಶೇಖರಣೆ ವ್ಯವಸ್ಥೆಗಳಿಂದ ಶಿರೂರು ಶಾಲೆಯು ಇತರ ಶಾಲೆಗಳಿಗೂ ಮಾದರಿಯಾಗಿದೆ.

ಮಾದರಿ ಶಾಲೆ
ಶಾಲೆಯಲ್ಲಿ ಸುವರ್ಣ ಜಲ ಯೋಜನೆ, ಮಳೆ ನೀರು ಸಂಗ್ರ ಹಣೆ ಘಟಕ ನಿರ್ಮಿಸಲಾಗಿದೆ. ವಾಹನದ ವ್ಯವಸ್ಥೆ, ಉತ್ತಮ ಪೀಠೊಪಕರಣ, ಆಕರ್ಷಕ ಗೋಡೆ ಚಿತ್ತಾರ, ಸುಂದರ ಪ್ರಾಂಗಣ, ಸ್ಮಾರ್ಟ್‌ ಕ್ಲಾಸ್‌, ಶೌಚಾಲಯ, ಎಜುಸ್ಯಾಟ್‌, ಕಲಿಕಾ ಸಾಮಗ್ರಿಗಳ ಜತೆಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ.

ಶಾಲೆಗೆ ವಾಹನದ ವ್ಯವಸ್ಥೆ
ಈ ಶಾಲೆಗೆ ಶಿರೂರು ಕರಾವಳಿ ಮೇಲ್ಪಂಕ್ತಿಯವರೆಗಿನ ವಿದ್ಯಾರ್ಥಿಗಳು ಬರುವುದರಿಂದ ಶಿಕ್ಷಕರ ಮುತುವರ್ಜಿ ಹಾಗೂ ಶಿಕ್ಷಣಾಭಿಮಾನಿಗಳ ಪ್ರೋತ್ಸಾಹದಿಂದ 20 ಲಕ್ಷ ರೂ. ವೆಚ್ಚ ದಲ್ಲಿ ವಾಹನ ಖರೀದಿಸಲಾಗಿದೆ.

ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ
ಕಳೆದ ವರ್ಷ 1ರಿಂದ 8ರ ವರೆಗೆ 232 ಮತ್ತು ಎಲ್‌ ಕೆಜಿಯಲ್ಲಿ 50 ವಿದ್ಯಾರ್ಥಿಗಳಿದ್ದರು.2020-21ನೇ ಸಾಲಿನಲ್ಲಿ ಒಂದನೇ ತರಗತಿಯಲ್ಲಿ 36 ವಿದ್ಯಾರ್ಥಿಗಳು, ಎರಡನೇ ತರಗತಿಯಲ್ಲಿ 33 ವಿದ್ಯಾರ್ಥಿ ಗಳಿದ್ದಾರೆ. ಈ ವರ್ಷ 1ನೇ ತರಗತಿಯಲ್ಲಿ 59, 2ನೇ ತರಗತಿಯಲ್ಲಿ 45, 3ನೇ ತರಗತಿಯಲ್ಲಿ 40, 4ನೇ ತರಗತಿಯಲ್ಲಿ 33, 5 ನೇ ತರಗತಿಯಲ್ಲಿ 24, 6ನೇ ತರಗತಿಯಲ್ಲಿ 44, 7ನೇ ತರಗತಿ ಯಲ್ಲಿ 42, 8ನೇ ತರಗತಿಯಲ್ಲಿ 10 ವಿದ್ಯಾಥಿಗಳಿದ್ದಾರೆ. ಶಾಲೆ ಯಲ್ಲಿ 10ನೇ ತರಗತಿ ಯವರೆಗೆ ಶಿಕ್ಷಣ ನೀಡುತ್ತಿದ್ದು ಒಟ್ಟು 370 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ:ವಿಜಯಪುರದಲ್ಲಿ ಲಘು ಭೂಕಂಪ : ಭಯಪಡುವ ಅಗತ್ಯವಿಲ್ಲ

ಬೇಡಿಕೆ
ಶಾಲೆಯಲ್ಲಿ ಆರು ತರಗತಿ ಕೋಣೆಗಳ ಕೊರತೆ ಇದೆ. ಪ್ರಯೋಗಾಲಯ, ಗ್ರಂಥಾಲಯ ಬೇಡಿಕೆ ಇದೆ. ಮಕ್ಕಳಿಗೆ ಬಾಲವನ, ಒಳಾಂಗಣ ಕ್ರೀಡಾಂಗಣದ ಅಗತ್ಯವಿದೆ.

ಓರ್ವ ಶಿಕ್ಷಕರ ಕೊರತೆ
ಈ ಶಾಲೆಗೆ ಒಟ್ಟು ಹತ್ತು ಶಿಕ್ಷಕರ ಆವಶ್ಯಕತೆ ಇದ್ದು, ಪ್ರಸ್ತುತ ಎಂಟು ಖಾಯಂ ಹಾಗೂ ಒಬ್ಬರು ನಿಯೋಜಿತ ಅಧ್ಯಾಪಕರಿದ್ದಾರೆ. ಓರ್ವ ಶಿಕ್ಷಕರ ಕೊರತೆ ಇದೆ.

ತರಗತಿ ಕೋಣೆಗಳು ಅಗತ್ಯ
ಖಾಸಗಿ ಶಾಲೆಗಳ ಪೈಪೋಟಿಯ ನಡುವೆ ವಿದ್ಯಾರ್ಥಿಗಳನ್ನು ಆಕರ್ಷಿಸುವಂತಹ ಗುಣಮಟ್ಟದ ಶಿಕ್ಷಣ ಮತ್ತು ಶೈಕ್ಷಣಿಕ ಸೇವೆ ನೀಡಲಾಗುತ್ತಿದೆ. ಪ್ರಸ್ತುತ ಶಾಲೆಗೆ ತರಗತಿ ಕೋಣೆಗಳು ಅಗತ್ಯವಿದ್ದು ಅದನ್ನು ಒದಗಿಸಲು ಇಲಾಖೆ ಕ್ರಮ ವಹಿಸಬೇಕಿದೆ.
-ರ‌ವೀಂದ್ರ ಶೆಟ್ಟಿ ಹೊಸ್ಮನೆ, ಅಧ್ಯಕ್ಷರು ಹಳೆ ವಿದ್ಯಾರ್ಥಿಗಳ ಸಂಘ

ಗುಣಮಟ್ಟ ಹೆಚ್ಚಳ
ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘ, ಶಾಲಾಭಿವೃದ್ಧಿ ಸಮಿತಿ, ಎಸ್‌.ಎಂ.ಡಿ.ಸಿ. ಮತ್ತು ಪಾಲಕರು ಎಲ್ಲ ಕಾರ್ಯಕ್ರಮಗಳಿಗೂ ಸೂಕ್ತ ಸಲಹೆ ಹಾಗೂ ಪ್ರೋತ್ಸಾಹ ನೀಡಿರುವುದರಿಂದ ಶಾಲೆಯ ಗುಣಮಟ್ಟ ಹೆಚ್ಚಿಸಲು ಸಾಧ್ಯವಾಗಿದೆ. ಪ್ರಸ್ತುತ ಅಗತ್ಯ ಕೊಠಡಿಗಳು ಮಂಜೂರಾಗಬೇಕಿದೆ.
-ಶಂಕರ ಶಿರೂರು, ಮುಖ್ಯೋಪಾಧ್ಯಾಯರು

ಅನುದಾನ ಅಗತ್ಯ
ಶಾಲೆಯು ಹೆತ್ತ ವರು ಹಾಗೂ ಶಿಕ್ಷಣಾಭಿಮಾನಿಗಳ ಸಹಕಾರದಲ್ಲಿ ಉತ್ತಮ ಶೈಕ್ಷಣಿಕ ವ್ಯವಸ್ಥೆ ಹೊಂದಿದೆ. ಸರಕಾರ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿದರೆ ಶಾಲೆಗೆ ಅನುಕೂಲವಾಗುತ್ತದೆ.
-ಚಂದ್ರ ಶೇಖರ ಮೇಸ್ತ, ಎಸ್‌.ಡಿ.ಎಂ.ಸಿ. ಅಧ್ಯಕ್ಷ

– ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.