ಪದವೀಧರ ಶಿಕ್ಷಕರಿಗೆ ಪರೀಕ್ಷೆಯಿಲ್ಲದೆ ಭಡ್ತಿ : ಭಡ್ತಿ ಪ್ರಮಾಣ ಶೇ. 40ಕ್ಕೆ ಏರಿಕೆ


Team Udayavani, Apr 29, 2022, 7:08 AM IST

Untitled-1

ಉಡುಪಿ: ರಾಜ್ಯ ಸರಕಾರ ಹೊಸದಾಗಿ ಪದವೀಧರ ಶಿಕ್ಷಕರ ನೇಮಕ ಪ್ರಕ್ರಿಯೆ ಆರಂಭಿಸಿದೆ. ಜತೆಗೆ ಪದವೀಧರ ಶಿಕ್ಷಕರಿಗೆ ಭಡ್ತಿ ಭಾಗ್ಯವನ್ನೂ ಕರುಣಿಸಿದೆ.

ಹೊಸ ಶಿಕ್ಷಕರ ನೇಮಕದಿಂದ ಹಿಂಭಡ್ತಿ ಭೀತಿಯಲ್ಲಿದ್ದ ಶಿಕ್ಷಕರ ಸಮಸ್ಯೆಯ ಕುರಿತು “ಉದಯವಾಣಿ’ ಮಾ. 31ರಂದು “ಎನ್‌ಇಟಿ ಜಾರಿಯಿಂದ ಸೇವಾನಿರತ ಶಿಕ್ಷಕರಿಗೆ ಹಿಂಭಡ್ತಿ ಆತಂಕ’ ಎಂಬ ಶೀರ್ಷಿಕೆಯಡಿ ವಿಸ್ತೃತ ವರದಿ ಪ್ರಕಟಿಸಿತ್ತು. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರದ ಹಂತದಲ್ಲಿಯೂ ಈ ಬಗ್ಗೆ ಗಂಭೀರ ಚರ್ಚೆಗಳು ನಡೆದಿದ್ದವು. ಈಗ ಸರಕಾರ ಪರೀಕ್ಷೆ ಇಲ್ಲದೇ ಪದವೀಧರ ಶಿಕ್ಷಕರಿಗೆ ಭಡ್ತಿ ನೀಡಲು ನಿರ್ಧರಿಸಿ ಅದರ ಕರಡನ್ನು ಸಿದ್ಧಪಡಿಸಿದೆ.

ಭಡ್ತಿ ಪ್ರಮಾಣ ಹೆಚ್ಚಳ :

ಸರಕಾರಿ ಶಾಲೆಯ ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಶೇ. 25 ರಿಂದ ಶೇ. 33ರಷ್ಟು ಪ್ರಮಾಣದಲ್ಲಿ ಪರೀಕ್ಷೆ ಮೂಲಕ ಮುಂಭಡ್ತಿ ನೀಡುವ ಬದಲು ಶೇ. 40ರಷ್ಟು ಶಿಕ್ಷಕರನ್ನು ಪರೀಕ್ಷೆ ಇಲ್ಲದೇ ಮುಂಭಡ್ತಿ ನೀಡಲು ಕ್ರಮ ಆಗುತ್ತಿದೆ. ಇದಕ್ಕೆ ಸಂಬಂಧಿಸಿದ ಕರಡು ನಿಯಮಗಳು ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನಾ ಇಲಾಖೆಯಿಂದ ಅನುಮೋದನೆಗೊಂಡಿವೆ. ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಆರ್ಥಿಕ ಇಲಾಖೆಯಿಂದ ಅನುಮೋದನೆಗೊಂಡು ಸಚಿವ ಸಂಪುಟದ ಅನುಮೋದನೆ ಅನಂತರ ಕರಡು ನಿಯಮ ಪ್ರಕಟವಾಗಿ ಅದಕ್ಕೆ ಆಕ್ಷೇಪಣೆಗಳನ್ನು ಕರೆಯಲಾಗುತ್ತದೆ. ಆಕ್ಷೇಪಣೆಗಳ ಆಧಾರದಲ್ಲಿ ಅಂತಿಮ ವೃಂದ ಮತ್ತು ನೇಮಕಾತಿ ನಿಯಮಗಳು ಪ್ರಕಟಗೊಳ್ಳಲಿವೆ. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಲ್ಲಿ ಗಣಿತ, ವಿಜ್ಞಾನ, ಜೀವ ವಿಜ್ಞಾನ, ಸಮಾಜ ಮೊದಲಾದ ವಿಷಯಕ್ಕೆ ಸಂಬಂಧಿಸಿದ ವೃಂದಗಳು ಇರು ವುದರಿಂದ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು ಕೂಡ ವಿಷಯವಾರು ಮುಂಭಡ್ತಿ ಪಡೆಯಲು ಸ್ಪಷ್ಟತೆಯನ್ನು ಕರಡು ಪ್ರತಿಯಲ್ಲಿ ಆಡಳಿತ ಇಲಾಖೆಯಿಂದ ಕೋರಲಾಗಿದೆ.

ಎ. 28ರಿಂದ 30ರ ವರೆಗೆ ಭಡ್ತಿ ಪ್ರಕ್ರಿಯೆ ನಡೆಯಲಿದೆ. 5,000ಕ್ಕೂ ಹೆಚ್ಚು ಶಿಕ್ಷಕರು ಭಡ್ತಿ ಪಡೆಯುವ ಸಾಧ್ಯತೆಯಿದೆ. ಪರೀಕ್ಷೆ ಇಲ್ಲದೇ ಪದವೀಧರ ಶಿಕ್ಷಕರಿಗೂ ಭಡ್ತಿ ಸಿಗಲಿರುವುದರಿಂದ ಅಂತಿಮ ನಿಯಮ ಸಿದ್ಧವಾದ ಅನಂತರವಷ್ಟೇ ಆ ಪ್ರಕ್ರಿಯೆ ಆರಂಭವಾಗಲಿದೆ. ಪದವೀಧರ ಶಿಕ್ಷಕ ರಾಗಿದ್ದು(ಪದವಿಯ ಅನಂತರ ಬಿ.ಇಡಿ. ಮುಗಿಸಿರುವ) ಪ್ರಾಥಮಿಕ ಶಾಲೆಗೆ ಬೋಧನೆ ಮಾಡುತ್ತಿರುವ ಶಿಕ್ಷಕರಿಗೆ ಇದರಿಂದ ಅನುಕೂಲವಾಗಲಿದೆ.

ಈಗಾಗಲೇ 1ರಿಂದ 6ನೇ ತರಗತಿ ವರೆಗೆ  ಬೋಧಿಸುತ್ತಿರುವ ಶಿಕ್ಷಕರಿಗೆ 8ನೇ ತರಗತಿ  ವರೆಗೂ ಬೋಧಿಸಲು ಅವಕಾಶ ನೀಡಲಾಗು ತ್ತದೆ. ವಿಷಯವಾರು ಶಿಕ್ಷಕರ ಲಭ್ಯತೆ ಆಧಾರ ದಲ್ಲಿ ಭಡ್ತಿ ಪ್ರಕ್ರಿಯೆ ನಡೆಯಲಿದೆ.

ಪದವೀಧರ ಶಿಕ್ಷಕರಿಗೆ ಪರೀಕ್ಷೆ ಇಲ್ಲದೇ ಮುಂಭಡ್ತಿ ನೀಡುವ ಬಗ್ಗೆ ಅನೇಕ ವರ್ಷದಿಂದ ಸಂಘದಿಂದ ಹೋರಾಟ ಮಾಡುತ್ತಿದ್ದೆವು. ಸರಕಾರ ಈಗ ಪ್ರಕ್ರಿಯೆ ಆರಂಭಿಸಿದೆ. ಇದರ ಜತೆಗೆ ಶಿಕ್ಷಕರ ಸೇವಾ ಜೇಷ್ಠತೆಯನ್ನು ಪರಿಗಣಿಸಲು ಪ್ರತ್ಯೇಕ ಜೇಷ್ಠತ ವ್ಯವಸ್ಥೆ ಹಾಗೂ ಆರ್ಥಿಕ ಸೌಲಭ್ಯವನ್ನು ದೊರಕಿಸಿಕೊಡಲು ನಿರಂತರ ಹೋರಾಟ ಮಾಡಲಿದ್ದೇವೆ.ಶಂಭುಲಿಂಗನಗೌಡ ಪಾಟೀಲ (ಅಧ್ಯಕ್ಷ ), ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.