ಗ್ರಾಮ ಪಂಚಾಯತ್‌ ತೆರಿಗೆ ಸಂಗ್ರಹ: ಉಡುಪಿ ದ್ವಿತೀಯ, ದಕ್ಷಿಣ ಕನ್ನಡ ತೃತೀಯ


Team Udayavani, Jul 30, 2019, 5:09 AM IST

TAX

ಉಡುಪಿ: ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಅಳವಡಿಸಲಾದ ಪಂಚತಂತ್ರಾಂಶದ ಮೂಲಕ ಗ್ರಾ.ಪಂ. ತೆರಿಗೆ ವಸೂಲಾತಿಯಲ್ಲಿ 2018-19ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಉಡುಪಿ ಜಿ.ಪಂ. ದ್ವಿತೀಯ ಮತ್ತು ದಕ್ಷಿಣ ಕನ್ನಡ ಜಿ.ಪಂ. ತೃತೀಯ ಸ್ಥಾನ ಗಳಿಸಿವೆ.

ಉಡುಪಿ: 6 ಕೋ. ರೂ., ತೆರಿಗೆ ಹೆಚ್ಚಳ
ಕಳೆದ ವರ್ಷ 4ನೇ ಸ್ಥಾನದಲ್ಲಿದ್ದ ಉಡುಪಿ ಜಿ.ಪಂ. ಈ ಬಾರಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಯೋಜನೆಯಡಿ ಜಿಲ್ಲೆಯ 158 ಗ್ರಾ.ಪಂ.ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿವೆ. 2018ನೇ ಸಾಲಿನಲ್ಲಿ 21 ಕೋ.ರೂ. ಮತ್ತು 2017-18ರಲ್ಲಿ 15 ಕೋ.ರೂ. ತೆರಿಗೆ ಸಂಗ್ರಹವಾಗಿತ್ತು. ಒಂದೇ ವರ್ಷದ ಅವಧಿಯಲ್ಲಿ ತೆರಿಗೆ ಸಂಗ್ರಹ ಪ್ರಮಾಣ 6 ರೂ.ರೂ. ಹೆಚ್ಚಳವಾಗಿದೆ.

ದ.ಕ. 4ನೇ ಸ್ಥಾನ
ದಕ್ಷಿಣ ಕನ್ನಡ ಜಿಲ್ಲೆ ಕಳೆದ ವರ್ಷಕ್ಕಿಂತ ಒಂದು ಸ್ಥಾನ ಕುಸಿದರೂ ಇತರ ಜಿಲ್ಲೆಗೆ ಹೋಲಿಸಿ ದಲ್ಲಿ ಗಮ ನಾರ್ಹ ಸಾಧನೆ ಮಾಡಿದೆ. ಜಿಲ್ಲೆಯ 230 ಗ್ರಾ.ಪಂ.ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿವೆ. 2018-19ನೇ ಸಾಲಿನಲ್ಲಿ 29 ಕೋ.ರೂ. ಮತ್ತು 2017-18ರಲ್ಲಿ 27 ಕೊ.ರೂ. ತೆರಿಗೆ ಸಂಗ್ರಹವಾಗಿದೆ.

ಏನಿದು ಪಂಚತಂತ್ರಾಂಶ?
ರಾಜ್ಯ ಸರಕಾರ ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪಂಚತಂತ್ರ (ಪಂಚತಂತ್ರಾಂಶ)ವನ್ನು ಅಭಿವೃದ್ಧಿಪಡಿಸಿದೆ. ಇಲ್ಲಿ ಎಲ್ಲ ಗ್ರಾ.ಪಂ.ಗಳು ಸಂಗ್ರಹಿಸಿದ ತೆರಿಗೆ ವಿವರಗಳನ್ನು ಕಾಲಕಾಲಕ್ಕೆ ಇದೇ ತಂತ್ರಾಂಶದಲ್ಲಿ ದಾಖಲು ಮಾಡಬೇಕು. ಒಂದು ವೇಳೆ ಸಂಗ್ರಹಿಸಿ ತೆರಿಗೆ ಮಾಹಿತಿಯನ್ನು ತಂತ್ರಾಂಶದಲ್ಲಿ ದಾಖಲು ಮಾಡದೆ ಹೋದರೆ ತೆರಿಗೆ ಸಂಗ್ರಹ ಪಟ್ಟಿಯಲ್ಲಿ ಆ ಜಿಲ್ಲೆ ಶೂನ್ಯ ಪ್ರಗತಿ ದಾಖಲಿಸುತ್ತದೆ.

ತೆರಿಗೆ ಹೆಚ್ಚಳಕ್ಕೆ ಕಾರಣ
ಉಡುಪಿ ಜಿ.ಪಂ. ವ್ಯಾಪ್ತಿಯ ಎಲ್ಲ ಗ್ರಾ.ಪಂ.ಗಳು ಸಮರ್ಪಕವಾಗಿ ತೆರಿಗೆ ವಸೂಲಿ ಮಾಡಿದ್ದು, ಸಕಾಲ ದಲ್ಲಿ ಪಂಚತಂತ್ರಾಂಶದಲ್ಲಿ ವಿವರ ಅಪ್‌ಲೋಡ್‌ಮಾಡಿವೆ. 4 ವರ್ಷದ ಬಳಿಕ 2018-19ರಲ್ಲಿ ತೆರಿಗೆ ಪರಿಷ್ಕರಣೆಯಾಗಿದೆ.

ಈ ಸಂದರ್ಭ ಹಳೆಯ ತೆರಿಗೆಯ ಮೇಲೆ ಶೇ. 5ರಿಂದ ಶೇ. 10ರಷ್ಟು ಏರಿಕೆಯಾಗಿದೆ. ಇದರಿಂದಾಗಿ ಈ ಬಾರಿ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ.

ಸಚಿವರಿಂದ ಅಭಿನಂದನ ಪತ್ರ
ಉತ್ತಮ ತೆರಿಗೆ ಸಂಗ್ರಹಕ್ಕಾಗಿ ಉಡುಪಿ  ಜಿ.ಪಂ.ಗೆ ಹಿಂದಿನ ಸರಕಾರದ ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ ಅವರಿಂದ ಅಭಿನಂದನ ಪತ್ರ ದೊರಕಿದೆ.

ಕಾರ್ಕಳದಲ್ಲಿ ದಾಖಲೆ
ತೆರಿಗೆ ಸಂಗ್ರಹ
ಕಾರ್ಕಳ ತಾಲೂಕು ತೆರಿಗೆ ಸಂಗ್ರಹಣೆಯಲ್ಲಿ ಉತ್ತಮ ಸಾಧನೆ ಮಾಡಿದೆ. 34 ಗ್ರಾ.ಪಂ.ಗಳಿಂದ 3.17 ಕೋ. ರೂ. ತೆರಿಗೆ ಸಂಗ್ರಹ ಸಾಧಿಸುವ ಮೂಲಕ 10ರಲ್ಲಿ 8 ಅಂಕ ಪಡೆದಿದೆ.

ರಾಜ್ಯದಲ್ಲೂ ತೆರಿಗೆ ಹೆಚ್ಚಳ
ರಾಜ್ಯ ಮಟ್ಟದಲ್ಲಿ 2017-18ನೇ ಸಾಲಿನಲ್ಲಿ 322 ಕೋ.ರೂ. ತೆರಿಗೆ ಸಂಗ್ರಹವಾಗಿತ್ತು. 2018-19ನೇ ಸಾಲಿನಲ್ಲಿ 483 ಕೋ.ರೂ. ಸಂಗ್ರಹವಾಗಿದೆ.

ಗ್ರಾ.ಪಂ. ವ್ಯಾಪ್ತಿಯಲ್ಲಿ ಜನರು ನಿಗದಿ ಸಮಯದೊಳಗೆ ಪಾವತಿ ಮಾಡುತ್ತಿದ್ದಾರೆ. ಪಂಚತಂತ್ರಾಂಶದಲ್ಲಿ ಸಮರ್ಪಕ ಮಾಹಿತಿ ದಾಖಲಾತಿ ಸೇರ್ಪಡೆ ಮತ್ತು ನೂತನ ತೆರಿಗೆ ಪರಿಷ್ಕರಣೆಯಿಂದ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ.
-ಶ್ರೀನಿವಾಸ್‌ ರಾವ್‌
ಮುಖ್ಯಯೋಜನಾಧಿಕಾರಿ, ಉಡುಪಿ ಜಿ.ಪಂ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.