ಬಿತ್ತನೆಗೆ 12 ಲಕ್ಷ  ಬೀಜದುಂಡೆ ಸಿದ್ಧ 


Team Udayavani, May 26, 2018, 5:19 AM IST

seed-25-5.jpg

ಕೋಟ: ವಾತಾವರಣದ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸಸ್ಯ ಸಂಕುಲದ ನಾಶ ಇದಕ್ಕೆಲ್ಲ ಕಾರಣ ಎನ್ನುವುದು ನಿಸ್ಸಂಶಯ. ಪರಿಹಾರೋಪಾಯವೆಂದರೆ ಹೆಚ್ಚು ಹೆಚ್ಚು ಗಿಡಮರಗಳನ್ನು ಬೆಳೆಸುವುದು. ಇದಕ್ಕಾಗಿ ‘ಸಾಸ್ತಾನ ಮಿತ್ರರು’ ಸಂಘಟನೆ ಲಕ್ಷಾಂತರ ಬೀಜದುಂಡೆಗಳನ್ನು ತಯಾರಿಸಿದ್ದು, ಮಳೆಗಾಲದ ಆಗಮನಕ್ಕೆ ಕಾಯುತ್ತಿದೆ. ಸಮಾಜಮುಖೀ ಸೇವೆಗಳನ್ನು ಮಾಡುತ್ತಿರುವ ಈ ಸಂಘಟನೆ ಕಳೆದ ವರ್ಷ 15 ಸಾವಿರ ಬೀಜದುಂಡೆಗಳನ್ನು ತಯಾರಿಸಿ ನಾಟಿ ಮಾಡಿತ್ತು. ಈ ಬಾರಿ ಮಳೆಗಾಲಕ್ಕಾಗಿ ಕಳೆದ ಜೂನ್‌ ನಿಂದಲೇ ತಯಾರಿ ನಡೆಸಿದೆ. ಶಾಲೆ – ಕಾಲೇಜು, ಸ್ವಸಹಾಯ ಸಂಘ, ಸಾಮಾಜಿಕ ಸಂಘಟನೆಗಳ ಸದಸ್ಯರಿಗೆ ತರಬೇತಿ ನೀಡಿ ಅವರ ಮೂಲಕ 12 ಲಕ್ಷ ಸೀಡ್‌ ಬಾಲ್‌ ಗ‌ಳನ್ನು ತಯಾರಿಸಿದೆ. ಹುಣಸೆ, ರಾಮಫಲ, ಕದಂಬ, ಲಕ್ಷ್ಮಣ ಫಲ, ಹೊಂಗೆ, ತುಳಸಿ, ಅರಳಿ ಮುಂತಾದ ಬೀಜಗಳಿಂದ ಇವು ಸಿದ್ಧಗೊಂಡಿವೆ. ಇಷ್ಟೊಂದು ಸಂಖ್ಯೆಯಲ್ಲಿ ಸೀಡ್‌ ಬಾಲ್‌ ತಯಾರಿ ಪ್ರಾಯಃ ಪ್ರಥಮ.

ಹೆಚ್ಚಿನ ಬೇಡಿಕೆ
‘ಸಾಸ್ತಾನ ಮಿತ್ರ’ರ ಬೀಜದುಂಡೆ ಯೋಜನೆಯ ಕುರಿತು ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿದು ಪ್ರಭಾವಿತರಾದ ಸಾಗರ, ತೀರ್ಥಹಳ್ಳಿ, ತುಮಕೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ ಕಡೆಯ ಪರಿಸರ ಪ್ರೇಮಿಗಳು ಇವರಿಂದ ಸೀಡ್‌ ಬಾಲ್‌ ಗಳನ್ನು ಪಡೆಯುತ್ತಿದ್ದಾರೆ. ಶಿವಮೊಗ್ಗದ ಉತ್ತಿಷ್ಠ ಭಾರತ ಹಾಗೂ ಬಾಳ್ಕುದ್ರು ಮಠದವರು ‘ಸಾಸ್ತಾನ ಮಿತ್ರ’ರಿಗೆ ವಿವಿಧ ಗಿಡಮರಗಳ ಬೀಜಗಳನ್ನು ಸರಬರಾಜು ಮಾಡುತ್ತಾರೆ.

ಸೀಡ್‌ ಬಾಲ್‌ ತಯಾರಿ
ಮೂರು ಭಾಗ ಮಣ್ಣಿಗೆ ಒಂದು ಭಾಗ ಗೋಮೂತ್ರ, ಸೆಗಣಿ ಮಿಶ್ರಣ ಮಾಡಿ ಅದರೊಳಗೆ ಬೀಜ ಇರಿಸಿ ಉಂಡೆ ತಯಾರಿಸಲಾಗುತ್ತದೆ. ಇದು ಗಟ್ಟಿಯಾಗಲು ಸ್ವಲ್ಪ ಜೇಡಿಮಣ್ಣು ಬಳಸಲಾಗುತ್ತದೆ. ಇದನ್ನು ಒಂದೆರಡು ದಿನ ಬಿಸಿಲಲ್ಲಿ ಒಣಗಿಸಿದರೆ ಸೀಡ್‌ ಬಾಲ್‌ ಸಿದ್ಧಗೊಳ್ಳುತ್ತದೆ. ಮಳೆಗಾಲದಲ್ಲಿ ರಸ್ತೆಬದಿ, ಖಾಲಿ ಜಾಗ ಹಾಗೂ ಕಾಡಿನಲ್ಲಿ ಇದನ್ನು ಬಿತ್ತಲಾಗುತ್ತದೆ. ಈ ಬಾರಿಯ ಬಿತ್ತನೆ ಈಗಾಗಲೇ ಆರಂಭಗೊಂಡಿದೆ.

ಬೀಜದುಂಡೆ ಉಡುಗೊರೆ
ಶುಭ ಸಮಾರಂಭ ಹಾಗೂ ಸಾರ್ವಜನಿಕ ಸಮಾರಂಭಗಳಲ್ಲಿ ಅತಿಥಿಗಳಿಗೆ ಉಡುಗೊರೆಯಾಗಿ ಸೀಡ್‌ ಬಾಲ್‌ ನೀಡುವ ಸಂಪ್ರದಾಯವನ್ನು ಈ ಭಾಗದಲ್ಲಿ ‘ಸಾಸ್ತಾನ ಮಿತ್ರರು’ ಚಾಲ್ತಿಗೆ ತಂದಿದ್ದು, ಜನಪ್ರಿಯಗೊಂಡಿದೆ. ಲಕ್ಷಾಂತರ ಬೀಜದುಂಡೆಗಳು ಈಗಾಗಲೇ ಹೀಗೆ ವಿತರಣೆಯಾಗಿವೆ. 

ಹಸುರು ಬೆಳೆಸುವ ಜಾಗೃತಿ ಮೂಡಿಸುವುದಕ್ಕಾಗಿ ಈ ಅಭಿಯಾನ ಆರಂಭಿಸಿದೆವು. ಈಗಾಗಲೇ 12 ಲಕ್ಷ ಬೀಜದುಂಡೆ ತಯಾರಿಸಿದ್ದೇವೆ. ಆಸಕ್ತರಿಗೆ ಇದನ್ನು ನೀಡುತ್ತೇವೆ, ಉಳಿದವುಗಳನ್ನು ನಾವೇ ಬಿತ್ತನೆ ಮಾಡುತ್ತೇವೆ. ಬಿತ್ತುವುದು ಮಾತ್ರ ಅಲ್ಲ, ಎಷ್ಟು ಮೊಳಕೆ ಒಡೆದು, ಬೆಳೆದಿವೆ ಎನ್ನುವುದನ್ನು ಗಮನಿಸುತ್ತಿರುತ್ತೇವೆ.
– ವಿನಯ್‌ಚಂದ್ರ ಸಾಸ್ತಾನ, ಮುಖ್ಯಸ್ಥರು – ಸಾಸ್ತಾನ ಮಿತ್ರರು ಸಂಘಟನೆ

— ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.