ಗೋಸಂರಕ್ಷಣೆ-ಸೌಲಭ್ಯ ಸಮಾನತೆಗೆ ಸಾಧುಸಂತರ ಉದ್ಗಾರ


Team Udayavani, Nov 27, 2017, 9:41 AM IST

27-8.jpg

ಉಡುಪಿ: ದೇಶದಲ್ಲಿ ಅಲ್ಪಸಂಖ್ಯಾಕರಿಗೆ ದೊರಕುವ ಸರಕಾರಿ ಸೌಲಭ್ಯಗಳು ಧಾರ್ಮಿಕ ಬಹುಸಂಖ್ಯಾಕರಿಗೂ ಲಭಿಸಬೇಕು. ಸಮಾನತೆ ತರುವಂತೆ ಸಂವಿಧಾನದ ತಿದ್ದುಪಡಿಯಾಗಬೇಕು. ಈ ಕುರಿತು ಸಂಶೋಧನೆ ನಡೆಯಬೇಕು. ಸರಕಾರಿ ಸೌಲಭ್ಯಗಳಲ್ಲಿ ಪಕ್ಷಪಾತ ಮಾಡಿದರೆ ಹಿಂದೂ ಧರ್ಮಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಸಮಾನತೆ ಅತ್ಯಗತ್ಯ ಎಂದು ಪರ್ಯಾಯ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

ರವಿವಾರ ಧರ್ಮಸಂಸದ್‌ನ ಅಂತಿಮ ಗೋಷ್ಠಿಯಲ್ಲಿ ಅಲ್ಪಸಂಖ್ಯಾಕರು ಮತ್ತು ಬಹುಸಂಖ್ಯಾಕರಿಗೆ ಸರಕಾರದ ಸೌಲಭ್ಯ ಸಮಾನತೆ ಕಾಯ್ದುಕೊಳ್ಳಬೇಕು ಎನ್ನುವ ನಿರ್ಣಯದ ಕುರಿತು ಪ್ರಸ್ತಾವಿಸಿ ಅವರು ಮಾತನಾಡಿದರು. ದಲಿತ ವಿರೋಧವಲ್ಲ ಬಹುಸಂಖ್ಯಾಕರಿಗೂ ಸೌಲಭ್ಯಗಳು ದೊರೆಯ ಬೇಕು ಎನ್ನುವ ಮಾತ್ರಕ್ಕೆ ಅಲ್ಪಸಂಖ್ಯಾಕರಿಗೆ ಸೌಲಭ್ಯ ಸಿಗಬಾರದು ಎನ್ನುವ ಅರ್ಥ ಬರುವುದಿಲ್ಲ. ಇದರಲ್ಲಿ ಸಂವಿಧಾನವನ್ನು ಪ್ರಶ್ನಿಸುವಂತಹ ಪ್ರಶ್ನೆಯೂ ಇಲ್ಲ ಎಂದ ಪೇಜಾವರ ಶ್ರೀಗಳು ಹೀಗೆಂದ ಮಾತ್ರಕ್ಕೆ ದಲಿತ ವಿರೋಧಿ ಎನ್ನುತ್ತಾರೆ. ಸೌಲಭ್ಯ ಸಿಗಬೇಕೆಂಬುದೇ ಉದ್ದೇಶ ಎಂದರು. ಶ್ರೀ ಕೈವಲ್ಯಾನಂದ ಸ್ವಾಮೀಜಿ ನಿರ್ಣಯದ ಬಗ್ಗೆ ಸಹಮತ ವ್ಯಕ್ತಪಡಿಸಿ, ದೇಶದ ಸರ್ವರ ಹಿತದೃಷ್ಟಿ ಯಿಂದ ಸೌಲಭ್ಯ ದೊರೆಯಬೇಕು ಎಂದರು. ಇದಕ್ಕೆ ಸಂತರೂ ಸಹಮತ ವ್ಯಕ್ತಪಡಿಸಿದರು. 

ನೋಟ್‌ ಬ್ಯಾನ್‌ – ಗೋಹತ್ಯೆ ಬ್ಯಾನ್‌!
ಉಜ್ಜೆ„ನಿಯ ಶ್ರೀ ಮಹಾಮಂಡಲೇಶ್ವರ್‌ ಯೋಗಿರಾಜ್‌ ಶ್ರೀ ಮಹಂತ್‌ ರಾಮೇಶ್ವರದಾಸ್‌ ತನ್ನ ಅಭಿಪ್ರಾಯ ವ್ಯಕ್ತಪಡಿಸಿ, ಸನಾತನ ಧರ್ಮ, ಸಾಧು ಸಂತರು ಗೋಮಾತೆಯನ್ನು ಹೊಂದಿರುವ ಭರತ ಭೂಮಿ ನಮ್ಮದು. ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಘೋಷಣೆ ಮಾಡಬೇಕು ಎನ್ನುವ ಒತ್ತಾಯ ಡಾ| ರಾಜೇಂದ್ರ ಪ್ರಸಾದ್‌ ಅವರು ರಾಷ್ಟ್ರಪತಿಯಾಗಿದ್ದ ಕಾಲದಿಂದಲೂ ಇದೆ. ಆದರೆ ಅದು ಸಾಧ್ಯವಾಗಿಲ್ಲ. ಪ್ರಸ್ತುತ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ರಾತೋರಾತ್ರಿ ನೋಟು ಅಮಾನ್ಯದ ಕಠಿನ ನಿರ್ಧಾರ ಕೈಗೊಂಡಿದ್ದಾರೆ. ಅದೇ ರೀತಿಯಲ್ಲಿ ಕಾಮಧೇನುವನ್ನು  ರಾಷ್ಟ್ರ ಪ್ರಾಣಿಯಾಗಿ ಘೋಷಣೆ ಮಾಡಬೇಕು ಎಂದರು.

ಕಾನೂನು ಜಾರಿಯಾಗಲಿ
ಜೋಧ್‌ಪುರದ ಶ್ರೀ ಅಮೃತ್‌ ಮಹಾರಾಜ್‌ ಮಾತನಾಡಿ, ದೇಶದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಜಾರಿಯಾಗಬೇಕು. ಪ್ರಸ್ತುತ ಕೆಲವು ರಾಜ್ಯಗಳಲ್ಲಿ ಕಾಯಿದೆ ಜಾರಿಯಾಗಿದ್ದು, ಮುಂದೆ ಇಡೀ ದೇಶಕ್ಕೆ ಅನ್ವಯವಾಗುವಂತೆ ಒಂದೇ ಕಾನೂನು ರೂಪುಗೊಳ್ಳಬೇಕು. ಗೋಹತ್ಯೆಯನ್ನು ಕಾನೂನು ಮೂಲಕವೇ ತಡೆದರೆ ಸಮಾಜದಲ್ಲಿ ಶಾಂತಿ ಕಾಪಾಡಲು ಸಾಧ್ಯವಾಗುತ್ತದೆ. ದೇಶದಲ್ಲಿ ಗೋಹತ್ಯೆ ನಡೆಯುತ್ತಿರುವುದು ಅದೆಷ್ಟೋ ಕೋಟಿ ಹಿಂದೂಗಳ ದುಃಖದ ವಿಚಾರ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಯೋಧ್ಯೆಯ ಶ್ರೀ ಕಮಲ ಮೋಹನ್‌ದಾಸ್‌ ಸ್ವಾಮೀಜಿ  ಮಾತನಾಡಿ, ಹಿಂದೂ ಧರ್ಮದ ಏಳಿಗೆ ಬಗ್ಗೆ ಸಮಾನತೆ ತರುವಂತಹ ಕಾಯಿದೆ ಜಾರಿಯಾಗಬೇಕು. ಆದರೆ ರಾಜಕೀಯ ಉದ್ದೇಶಗಳಿಂದ ಅಂತಹ ಕಾಯಿದೆ ಜಾರಿಗೆ ತರಲಾಗುತ್ತಿಲ್ಲ. ಇದರಿಂದಾಗಿ ಹಿಂದೂ ಸಮಾಜಕ್ಕ ತೊಂದರೆಯಾಗುತ್ತಿದೆ. ಧರ್ಮಸಂಸದ್‌ನ ಪ್ರತಿಯೊಂದು ನಿರ್ಣಯಗಳು ಅನುಷ್ಠಾನಗೊಳಿಸಲು ಎಲ್ಲರೂ ಪಣತೊಡಬೇಕು ಎಂದರು.

ಗೋ ರಕ್ಷಣೆಯಿಂದ ದೇಶ ಉಳಿವು
ದೇಶದಲ್ಲಿ ಗೋಸಂರಕ್ಷಣೆಯ ಕುರಿತ  ನಿರ್ಣಯದ ಪ್ರಸ್ತಾವಕ್ಕೂ ವಿವಿಧ ಸಾಧು  ಸಂತರಿಂದ ಒಕ್ಕೊರಲ ಆಗ್ರಹ ಕೇಳಿ ಬಂತು. ಒಡಿಶಾದ ಶ್ರೀ ಭಾಸ್ಕರತೀರ್ಥ ಸ್ವಾಮೀಜಿ ಮಾತನಾಡಿ, ಕೋಟಿ ದೇವತೆಗಳನ್ನು ತನ್ನಲ್ಲಿರಿಸಿ ಕೊಂಡಿರುವ ಗೋಮಾತೆಯ ರಕ್ಷಣೆಯಾಗ ಬೇಕು. ಸಂಸಾರ ನೆಮ್ಮದಿಯಿಂದ ಸಾಗಬೇಕಾದರೆ ಗೋಸಂರಕ್ಷಣೆಯಾಗಬೇಕು. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಗೋರಕ್ಷಣೆಯಾದರೆ ಮಾತ್ರ ದೇಶ ಉಳಿಯಬಹುದು. ಗೋವಿನ ರಕ್ಷಣೆಯೇ ನಮ್ಮ ಸಂಕಲ್ಪ ಎಂದು ಹೇಳಿದರು.

ಜಿವೇಂದ್ರ ಶೆಟ್ಟಿ ಗರ್ಡಾಡಿ 

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.