ಜಿಎಸ್ಬಿ ಹಿತರಕ್ಷಣಾ ವೇದಿಕೆ: ಶೈಕ್ಷಣಿಕ ಪ್ರೇರಣೆಗೆ ಕಿಕ್ಕಿರಿದ ಜನಸಂದಣಿ
Team Udayavani, Jun 17, 2019, 5:52 AM IST
ಉಡುಪಿ: ಜಿಎಸ್ಬಿ ಸಮಾಜ ಹಿತರಕ್ಷಣಾ ವೇದಿಕೆ ವತಿಯಿಂದ ಸಮರ್ಪಣಾ ಚಾರಿಟೆಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವದಲ್ಲಿ ಅಜ್ಜರಕಾಡು ಪುರಭವನದಲ್ಲಿ ರವಿವಾರ ನಡೆದ ವಿದ್ಯಾಪೋಷಕ್ ವಿದ್ಯಾರ್ಥಿ ವೇತನ ವಿತರಣೆ, ಸಂಸ್ಕೃತ ಕಲಿತ ವಿದ್ಯಾರ್ಥಿಗಳಿಗೆ ದಿ| ಪಡುಬಿದ್ರಿ ದೇವದಾಸ ಶರ್ಮ ದತ್ತಿನಿಧಿ ವಿದ್ಯಾರ್ಥಿ ವೇತನ ವಿತರಣೆ ಮತ್ತು ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರಕ್ಕೆ ನಾಡಿನ ವಿವಿಧೆಡೆಗಳಿಂದ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು.
ಒಎನ್ಜಿಸಿ ನಿವೃತ್ತ ಡಿಜಿಎಂ ಕೃಷ್ಣ ಮೂರ್ತಿ ಭಟ್, ಸುಪ್ರೀಂ ಕೋರ್ಟ್ನ ನ್ಯಾಯವಾದಿ ಮುಂಬಯಿಯ ಎಂ.ವಿ. ಕಿಣಿ, ಮಣಿಪಾಲ ಮಧುವನ ಪ್ರಸಾದ್ ಇನ್ಫ್ರಾ ಪ್ರೈ.ಲಿ. ಎಂಡಿ ಎಚ್. ದಾಮೋದರ ನಾಯಕ್, ಕುಂದಾಪುರದ ನ್ಯಾಯವಾದಿ ಮುರುಡೇಶ್ವರ ರವಿಕಿರಣ್ ಶ್ಯಾನುಭೋಗ್, ಸಮರ್ಪಣಾ ಚಾರಿಟೆಬಲ್ ಟ್ರಸ್ಟ್ ಮುದರಂಗಡಿಯ ರತ್ನಾಕರ ಕಾಮತ್, ಡಾ| ಕೆ. ಸುರೇಶ್ ಶೆಣೈ, ವಿದ್ಯಾಪೋಷಕ್ ನಿಧಿ ವಿದ್ಯಾರ್ಥಿ ವೇತನ ಸಮಿತಿ ಸಂಚಾಲಕ ವಿಜಯ ಕುಮಾರ್ ಶೆಣೈ, ನಿವೃತ್ತ ಯೋಧರಾದ ಹಿಂಬಾಳೆ ಭಾಸ್ಕರ ಕಿಣಿ, ಗೋಪಾಲಕೃಷ್ಣ ಪ್ರಭು, ಭಾಗೀರಥಿ ಕಿಣಿ, ನಾರಾಯಣಿ ದೇವದಾಸ ಶರ್ಮ, ಕುಂಬ್ಳೆ ಶ್ರೀಮತಿ ನಾಯಕ್, ರಾಧಿಕಾ ಭಟ್, ಲಕ್ಷ್ಮೀ ಆರ್. ಕಾಮತ್, ವೇದಿಕೆಯ ಸಂಚಾಲಕ ಆರ್. ವಿವೇಕಾನಂದ ಶೆಣೈ, ಅಧ್ಯಕ್ಷ ಜಿ. ಸತೀಶ್ ಹೆಗ್ಡೆ ಕೋಟ, ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ಪ್ರಕಾಶ್ ಶೆಣೈ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಉದ್ಯಮಿ ಪುರುಷೋತ್ತಮ ಪಿ. ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಜಿಎಸ್ಬಿ ಸಂಸ್ಕೃತಿಯಂತೆ ಮಹಿಳಾ ಅತಿಥಿಗಳಿಗೆ ಅರಿಶಿನ ಕುಂಕುಮ ನೀಡಿ ಸ್ವಾಗತಿಸಲಾಯಿತು. ಕಾರ್ಯಕ್ರಮ ಆರಂಭದ ಮುನ್ನ ಉಡುಪಿ ಅನಂತ ವೈದಿಕ ಕೇಂದ್ರದ ವೇ|ಮೂ| ಚೇಂಪಿ ರಾಮಚಂದ್ರ ಭಟ್ರಿಂದ ವೇದಘೋಷ ನಡೆಯಿತು. ಉಡುಪಿ ಮತ್ತು ದ.ಕ. ಜಿಲ್ಲೆಯ ಸುಮಾರು 1 ಸಾವಿರಕ್ಕೂ ಮಿಕ್ಕಿ ಜಿಎಸ್ಬಿ ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು. ಸಮಾರಂಭದಲ್ಲಿ ಬೆಳಗ್ಗಿನ ಉಪಾಹಾರ, ಲಘು ಪಾನೀಯ, ಮಧ್ಯಾಹ್ನ ಭೋಜನದ ವ್ಯವಸ್ಥೆ, ಸಂಜೆ ಲಘು ಉಪಾಹಾರ ಅಚ್ಚುಕಟ್ಟಾಗಿತ್ತು.
ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ಸಭಾ ವೇದಿಕೆಯ ಹಿಂಭಾಗ ಮತ್ತು ಉಪಾಹಾರ ಕೊಠಡಿಯಲ್ಲಿ ಬೃಹತ್ ಗಾತ್ರದ ಎಲ್ಇಡಿ ಪರದೆ ಅಳವಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್