ಗುಜ್ಜಾಡಿ: ರಸ್ತೆ ಬದಿ ಕಸ ಎಸೆಯುವುದಕ್ಕೆ ಬಿದ್ದಿಲ್ಲ ಕಡಿವಾಣ
ಸಿಸಿ ಟಿವಿ ಅಳವಡಿಸಿದರೂ ಕ್ಯಾರೇ ಅನ್ನದ ಮಂದಿ ;ಕಾರು, ಬೈಕ್ಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆತ
Team Udayavani, Jan 21, 2020, 5:32 AM IST
ಗುಜ್ಜಾಡಿ: ಮುಳ್ಳಿಕಟ್ಟೆಯಿಂದ ಗುಜ್ಜಾಡಿಗೆ ಹೋಗುವ ಮುಖ್ಯ ರಸ್ತೆಯ ಇಕ್ಕೆಲಗಳ ಉದ್ದಕ್ಕೂ ತ್ಯಾಜ್ಯದ ರಾಶಿಯೇ ಕಂಡುಬರುತ್ತಿದೆ. ಕಸ ಎಸೆಯಬೇಡಿ ಎಂದು ಪಂಚಾಯತ್ ಎಚ್ಚರಿಕೆಯ ನಾಮಫಲಕ ಹಾಕಿದರೂ, ಬೈಕ್, ಕಾರು, ಮತ್ತಿತರ ವಾಹನಗಳಲ್ಲಿ ಬರುವ ಜನ ರಸ್ತೆ ಬದಿ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯವನ್ನು ಎಸೆದು ಹೋಗುತ್ತಾರೆ.
ಪಂಚಾಯತ್ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಸಮರ್ಪಕವಾದ ವ್ಯವಸ್ಥೆಯಿಲ್ಲದ ಕಾರಣ ಗ್ರಾಮಸ್ಥರು ಹಾಗೂ ಹೊರಗಿನಿಂದ ಬರುವ ಜನರು ಮುಳ್ಳಿಕಟ್ಟೆ- ನಾಯಕವಾಡಿ ರಸ್ತೆ, ತ್ರಾಸಿ – ನಾಯಕವಾಡಿ ರಸ್ತೆಗಳ ಎರಡೂ ಬದಿ, ಚರಂಡಿಗಳಿಗೆ ಕಸ ಎಸೆಯುತ್ತಿದ್ದಾರೆ. ಕೇವಲ ಗುಜ್ಜಾಡಿ ಗ್ರಾಮದ ಜನರು ಮಾತ್ರವಲ್ಲದೆ ಗಂಗೊಳ್ಳಿ ಹಾಗೂ ಇನ್ನಿತರ ಕಡೆಗಳಿಂದ ವಾಹನಗಳಲ್ಲಿ ರಾತ್ರಿ ವೇಳೆ ಬಂದು ಕಸ ಎಸೆದು ಹೋಗುತ್ತಿದ್ದಾರೆ ಎನ್ನುವುದು ಗುಜ್ಜಾಡಿ ಪಂಚಾಯತ್ ಅಧಿಕಾರಿಗಳ ಆರೋಪ.
ಪಂಚಾಯತ್ ಮನವಿ
ರಸ್ತೆ ಬದಿ ಕಸ ತಂದು ಎಸೆಯಬೇಡಿ ಎಂದು ಗುಜ್ಜಾಡಿ ಗ್ರಾಮ ಪಂಚಾಯತ್ ಅನೇಕ ಬಾರಿ ಸೂಚನಾ ಫಲಕ ಅಳವಡಿಸಿ, ಮನವಿ ಮಾಡಿಕೊಂಡಿದೆ. ಆದರೆ ಈ ಮನವಿಗೆ ಮನ್ನಣೆಯೇ ನೀಡದೇ ರಾತ್ರಿ ಹೊತ್ತಲ್ಲಿ ಬಂದು ಕಸ ಎಸೆದು ಹೋಗುತ್ತಿರುವುದು ಕಂಡು ಬರುತ್ತಿದೆ. ಒಂದು ಕಡೆ ಸಿಸಿಟಿವಿ ಕೂಡ ಅಳವಡಿಸಲಾಗಿದೆ. ಆದರೂ ಅದನ್ನು ಕ್ಯಾರೇ ಅನ್ನುತ್ತಿಲ್ಲ. ಕಸ ಎಸೆಯುವುದನ್ನು ನಿಯಂತ್ರಿಸುವುದೇ ಪಂಚಾಯತ್ಗೆ ಸವಾಲಿನ ಸಂಗತಿಯಾಗಿದೆ.
ವಿಲೇವಾರಿ ಘಟಕಕ್ಕೆ ಆಗ್ರಹ
ಉಡುಪಿ ಜಿಲ್ಲೆಯಲ್ಲಿ ಕಳೆದೊಂದು ವರ್ಷದಿಂದ ಅನೇಕ ಗ್ರಾ.ಪಂ.ಗಳು, ಜಿ.ಪಂ. ಅನುದಾನದ ನೆರವಿನಿಂದ ಕಸ ವಿಲೇವಾರಿ ಸಮಸ್ಯೆ ನಿವಾರಿಸುವ ಸಲುವಾಗಿ ಘನ ತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಿದೆ. ಕಸ ವಿಲೇವಾರಿ ಜತೆಗೆ, ಅದನ್ನು ಗೊಬ್ಬರವಾಗಿ ಪರಿವರ್ತಿಸಿದರೆ ಪಂಚಾಯತ್ಗೂ ಆದಾಯ ಬರುತ್ತದೆ. ಗುಜ್ಜಾಡಿಯಲ್ಲೂ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಿದರೆ, ಕಸದ ವಿಲೇವಾರಿ ಸಮಸ್ಯೆ ನಿವಾರಣೆಯಾಗಲಿದೆ ಎಂಬುದು ಇಲ್ಲಿನ ಗ್ರಾಮಸ್ಥರ ಆಗ್ರಹವಾಗಿದೆ.
ಉದಯವಾಣಿ ವರದಿ
ಗುಜ್ಜಾಡಿ ಗ್ರಾಮಕ್ಕೆ ಅನುದಾನ ಇದ್ದರೂ, ತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಲು ಜಾಗದ ಸಮಸ್ಯೆ ಕುರಿತು ಪತ್ರಿಕೆ ಡಿ. 2 ರಂದು ವಿಶೇಷ ವರದಿ ಮೂಲಕ ಗಮನಸೆಳೆದಿತ್ತು. ಗುಜ್ಜಾಡಿ ಗ್ರಾಮದಲ್ಲಿ ಮಂಕಿ, ಕಳಿಹಿತ್ಲು, ಜನತಾ ಕಾಲನಿ, ಸಂಗಮೇಶ್ವರ ದೇವಸ್ಥಾನ ವಾರ್ಡ್ , ಬೆಣೆYರೆ ಸೇರಿ ಒಟ್ಟು 5 ವಾರ್ಡ್, ಒಟ್ಟು 6,042 ಜನರಿದ್ದು, ಒಟ್ಟು 1,300ಕ್ಕೂ ಹೆಚ್ಚು ಕಟ್ಟಡಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ