ಸಿಎಂ – ಮಾಜಿ ಪಿಎಂಗೆ ಚಿಕಿತ್ಸೆ

ಮಾಧ್ಯಮದವರೊಂದಿಗೆ ಪೊಲೀಸರ ಜಟಾಪಟಿ!

Team Udayavani, May 2, 2019, 6:00 AM IST

CM-a

ಕಾಪು: ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮೂಳೂರು ಸಾಯಿರಾಧಾ ಹೆರಿಟೇಜ್‌ನಲ್ಲಿ ಆಯುರ್ವೇದ ಪಂಚಕರ್ಮ ಚಿಕಿತ್ಸೆಗೆ ದಾಖಲಾಗಿದ್ದರೆ ಆ ಕುರಿತು ವರದಿಗೆ ತೆರಳಿದ ಮಾಧ್ಯಮದವರು ಮತ್ತು ಪೊಲೀಸರ ನಡುವೆ ಬುಧವಾರ ಮತ್ತೆ ಮಾತಿನ ಚಕಮಕಿ, ತಳ್ಳಾಟ ನಡೆದಿದೆ.

ರೆಸಾರ್ಟ್‌ ಬಳಿ ರಸ್ತೆಯಲ್ಲಿ ನಿಂತು ಚಿತ್ರೀಕರಣ ನಡೆಸುತ್ತಿದ್ದಾಗ ಅವರ ಜತೆಗೆ ವಾಗ್ವಾದಕ್ಕಿಳಿದ ಪೋಲಿಸ್‌ ಅಧಿಕಾರಿ ಕೆಮರಾಮ್ಯಾನ್‌ನ್ನು ತಳ್ಳಿದ್ದು,ಮತ್ತೋರ್ವ ಅಧಿಕಾರಿ ಮಾಧ್ಯಮದವರನ್ನು ನಿಂದಿಸುತ್ತಿರುವುದು ಟ್ರೋಲ್‌ ಆಗಿದೆ.

ಚಿತ್ರೀಕರಣಕ್ಕೂ ನಿರ್ಬಂಧ
ಸಿಎಂ ಮತ್ತು ಮಾಜಿ ಪಿಎಂಗೆ ಚಿಕಿತ್ಸೆ ನೀಡುತ್ತಿರುವ ಹಿನ್ನೆಲೆಯಲ್ಲಿ ರೆಸಾರ್ಟ್‌ನೊಳಗೆ ಮಾಧ್ಯಮ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜತೆಗೆ ರೆಸಾರ್ಟ್‌ನ ಹೊರಗಿನ 100 ಮೀ. ವ್ಯಾಪ್ತಿಯೊಳಗೂ ಮಾಧ್ಯಮದವರು ವಿಡೀಯೋ ಚಿತ್ರೀಕರಣ ನಡೆಸದಂತೆ ಪೊಲೀಸರು ತಡೆಯೊಡ್ಡಿದ್ದಾರೆ.

ನಿವಾಸಿಗಳಿಗೂ ತೊಂದರೆ?
ರೆಸಾರ್ಟ್‌ ಬಳಿಯ ಮನೆ ಅಂಗಳದಲ್ಲಿ ನಿಂತು ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅಲ್ಲಿಗೆ ಆಗಮಿಸಿದ ಪೊಲೀಸರು ಮನೆಯವರಿಗೂ ಬೆದರಿಕೆ ಹಾಕಿದ್ದಾರೆಂದು ಹೇಳಲಾಗಿದೆ.
ಕೆಟ್ಟ ಪದ ಪ್ರಯೋಗ ಆರೋಪಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಶಿರ್ವ ಎಸ್‌ಐ ಅಬ್ದುಲ್‌ ಖಾದರ್‌ ಮತ್ತುಕಾಪು ಎಸ್‌ಐ ನವೀನ್‌ ನಾಯಕ್‌ ಮತ್ತಿತರ ಅಧಿಕಾರಿಗಳು ಮಾಧ್ಯಮದವರೊಂದಿಗೆ ಉಢಾಪೆಯಾಗಿ ಮಾತನಾಡಿದ್ದು, ಚಿತ್ರೀಕರಣ ನಡೆಸದಂತೆ ತಡೆದಿದ್ದಾರೆ. ಕೆಮರಾಮ್ಯಾನ್‌ ಓರ್ವರನ್ನು ದೂಡಿದ್ದಾರೆ. ಕೆಟ್ಟ ಪದ ಪ್ರಯೋಗ ಮಾಡಿದ್ದಾರೆ ಎಂದು ವರದಿಗಾರರು ಆರೋಪಿಸಿದ್ದಾರೆ.

ಎಸ್ಪಿಗೆ ದೂರು
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಉಡುಪಿ ಎಸ್ಪಿಗೆ ದೂರು ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಎಸ್ಪಿಕುಮಾರಚಂದ್ರ ಮತ್ತು ಎಎಸ್ಪಿ ಕೃಷ್ಣಕಾಂತ್‌ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸರು ಮತ್ತು ಮಾಧ್ಯಮದವ ರೊಂದಿಗೆ ಮಾತುಕತೆ ನಡೆಸಿದ್ದಾರೆ. ಪರಿಸ್ಥಿತಿ ತಿಳಿಗೊಳಿಸಿ ಮಾಧ್ಯಮದವ ರೊಂದಿಗೆ ಅನುಚಿತವಾಗಿ ವರ್ತನೆ ಗೈದ ಅಧಿಕಾರಿಗಳ ವಿರುದ್ಧ ಲಿಖೀತ ದೂರು ಬಂದರೆ ಪರಿಶೀಲಿಸುವು ದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.ಮುಂದುವರಿದ ಚಿಕಿತ್ಸೆರೆಸಾರ್ಟ್‌ ಹೊರಗೆ ರವಿವಾರ ದಿಂದಲೂ ಹಲವು ರೀತಿಯ ಗೊಂದಲಗಳಿದ್ದರೂ ಕುಮಾರಸ್ವಾಮಿ ಮತ್ತು ದೇವೇಗೌಡ ಅವರು ತಮ್ಮಷ್ಟಕ್ಕೆ ಆಯುರ್ವೇದ ಪಂಚಕರ್ಮ ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ.

ಬ್ರಹ್ಮಕಲಶದ ಭೋಜನ
ಸವಿದ ದೇವೇಗೌಡ
ದೇವೇಗೌಡ ಅವರಿಗೆ ಮಂಗಳ ವಾರ ಮಧ್ಯಾಹ್ನ ಜಲಂಚಾರು ಶ್ರೀ ಮಹಾಲಿಂಗೇಶ್ವರ – ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶದ ಊಟ ಕಳುಹಿಸಲಾಗಿತ್ತು. ಭರ್ಜರಿ ಭೋಜನ ಸವಿದ ಅವರು ದೇಗುಲದ ಕಥೆಯನ್ನು ಕೇಳಿದ್ದು, ದೇಗುಲಕ್ಕೆ ಭೇಟಿ ನೀಡುವ ಭರವಸೆಯನ್ನೂ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.