ಕೃಷಿ, ಹೈನುಗಾರಿಕೆಯಲ್ಲಿ ಯಶ ಕಂಡ ಹದ್ದೂರು ರಾಜೀವ ಶೆಟ್ಟಿ

ಗುಡ್ಡ ಅಗೆದು ಹಸಿರು ಬೆಳೆದ ಗ್ರಾಮೀಣ ರೈತ

Team Udayavani, Dec 28, 2019, 7:52 AM IST

68

ಹೆಸರು: ರಾಜೀವ ಶೆಟ್ಟಿ ಹದ್ದೂರು
ಏನೇನು ಕೃಷಿ: ಅಡಿಕೆ, ತೆಂಗು, ಬಾಳೆ, ರಬ್ಬರ್‌, ತಾಳೆ, ಕಾಳುಮೆಣಸು
ಎಷ್ಟು ವರ್ಷ ಕೃಷಿ: 35
ಪ್ರದೇಶ :15 ಎಕ್ರೆಗೂ ಅಧಿಕ
ಸಂಪರ್ಕ: 9448625503

ನಾವು ಅದೆಷ್ಟು ಆಧುನಿಕಗೊಂಡರೂ ಉಣ್ಣುವ ಅನ್ನವನ್ನು ಸೃಷ್ಟಿಸಲಾರೆವು; ಅದನ್ನು ಬಿತ್ತಿ ಬೆಳೆದೇ ಆಗಬೇಕು. ಕೃಷಿಗೆ ಮಹತ್ವದ ಸ್ಥಾನವಿದೆ. ಇದೇ ಹಿನ್ನೆಲೆಯಲ್ಲಿ ಉದಯವಾಣಿಯು ರೈತರ ಸಾಧನೆಯ ಚಿತ್ರಣ ನೀಡುವ “ಕೃಷಿ ಕಥನ’ವನ್ನು ಆರಂಭಿಸಿದೆ. ಈ ಹೊಸ ಸರಣಿಯು ಇನ್ನಷ್ಟು ಮಂದಿಗೆ ಪ್ರೇರಣೆಯಾಗಲೆಂದು ಸರಕಾರದಿಂದ ಪ್ರಶಸ್ತಿ ಪುರಸ್ಕಾರಗಳಿಂದ ಗುರುತಿಸಲ್ಪಟ್ಟ ರೈತರನ್ನು ಪರಿಚಯಿಸುವ ಪ್ರಯತ್ನ.

ಸಿದ್ದಾಪುರ: ಕಠಿನ ಪರಿಶ್ರಮದಿಂದ ಕೃಷಿ ಹಾಗೂ ಹೈನುಗಾರಿಕೆಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ತೋರಿಸಿದ ಹೆಗ್ಗಳಿಕೆ ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮದ ಬೈಲೂರು ಸಮೀಪದ ಹದ್ದೂರು ರಾಜೀವ ಶೆಟ್ಟಿ (59) ಅವರದ್ದಾಗಿದೆ. ರಾಜೀವ ಶೆಟ್ಟಿ ಅವರು ತಮ್ಮ 15 ಎಕರೆ ಭೂಮಿಯ 11 ಎಕರೆ ಗುಡ್ಡ ಪ್ರದೇಶವನ್ನು ಕೃಷಿಭೂಮಿಯಾಗಿ ಪರಿವರ್ತಿಸಿ, ಬರಡು ಭೂಮಿಗೆ ಜೀವಕಳೆ ತುಂಬಿದರು. ಮೂಲತ ಕೃಷಿ ಮನೆತನದ ಇವರು 35 ವರ್ಷಗಳಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮೊದಲು 4 ಎಕರೆ ಪ್ರದೇಶದಲ್ಲಿ ಭತ್ತ ಬೆಳೆಯುತ್ತಿದ್ದ ಅವರು ಕ್ರಮೇಣ ಭತ್ತ ಬಿಟ್ಟು ವಾಣಿಜ್ಯ ಬೆಳೆಯತ್ತ ಸಾಗಿದರು. ಈಗ ಕೃಷಿಯೊಂದಿಗೆ ಅಂತರಬೆಳೆ ಮತ್ತು ಹೈನುಗಾರಿಕೆ ಮಾಡುವ ಮೂಲಕ ಸಾಧಕ ಕೃಷಿಕರಾಗಿದ್ದಾರೆ. ಆ ಕಾಲದಲ್ಲಿ ರಾಜೀವ ಶೆಟ್ಟಿ ಅವರು ಬಿ.ಕಾಂ. ಪದವೀಧರರಾಗಿದ್ದರೂ, ಉದ್ಯೋಗ ಅರಸಿ ಹೋಗದೆ ಊರಲ್ಲಿ ಇದ್ದುಕೊಂಡು ಸಾಧನೆ ಮಾಡಬೇಕೆಂಬ ಹಂಬಲದಲ್ಲಿ ಹಿರಿಯರು ಮಾಡುತ್ತಿದ್ದ ಕೃಷಿಯನ್ನು ಮುಂದುವರಿಸಿದರು.

ಅಂತರಬೆಳೆ, ಉಪಬೆಳೆ ಹದ್ದೂರು ರಾಜೀವ ಶೆಟ್ಟಿ ಅವರು ಮೊದಲು 4 ಎಕರೆ ಪ್ರದೇಶದಲ್ಲಿ ಭತ್ತ ಬೆಳೆಯುತ್ತಿದ್ದರು. ಕ್ರಮೇಣ ವಾಣಿಜ್ಯ ಬೆಳೆಯತ್ತ ಚಿತ್ತ ಹರಿಸಿ ಅಡಿಕೆ, ತೆಂಗು, ಬಾಳೆ, ರಬ್ಬರ್‌, ತಾಳೆ, ಅಂತರಬೆಳೆಯಾಗಿ ಕಾಳುಮೆಣಸು ಸಹಿತ ಅನೇಕ ಉಪಬೆಳೆಗಳನ್ನು ಬೆಳೆಯುತ್ತಿದ್ದಾರೆ. ಮಾರುಕಟ್ಟೆಯ ಬಗ್ಗೆ ಸ್ಪಷ್ಟ ಅರಿವಿದ್ದರೆ ರೈತನಿಗೆ ಯಾವತ್ತೂ ನಷ್ಟವಾಗುವುದಿಲ್ಲ ಎಂಬಂತೆ ಆದ್ಯತೆಯ ಕೃಷಿಯಲ್ಲಿ ಯಶಸ್ಸು ಸಾಧಿಸಿದ ಹೆಗ್ಗಳಿಕೆ ಇವರದ್ದು.

ಹೈನುಗಾರಿಕೆ: ನಿತ್ಯ ಆದಾಯ
ಹೈನುಗಾರಿಕೆಯ ಬಗ್ಗೆ ಅನೇಕ ಯುವ ರೈತರಿಗೆ ಮಾರ್ಗದರ್ಶಕರಾವಿರುವ ಇವರು ಗುಣಮಟ್ಟದ ಹಟ್ಟಿಯನ್ನು ಹೊಂದಿದ್ದು, ಅವರಲ್ಲಿ ಉತ್ತಮ ತಳಿಯ 9 ಹಸುಗಳಿವೆ. ಸ್ವತಃ ಹಸುಗಳ ಹಾಲು ಕರೆದು, ಪ್ರತಿನಿತ್ಯ ಸುಮಾರು 60 ಲೀ. ಹಾಲನ್ನು ಡೈರಿಗೆ ನೀಡುತ್ತಿದ್ದಾರೆ. ಹಸುಗಳಿಗಾಗಿ ಹುಲ್ಲು ಬೆಳೆಸಿದ್ದು, ನಿರಂತರ ಆದಾಯಕ್ಕೆ ಹೈನುಗಾರಿಕೆಯು ಮೂಲವಾಗಿದೆ. ಹೈನುಗಾರಿಕೆಯಲ್ಲಿ ಕೃಷಿ ಚಟುವಟಿಕೆಗೆ ಪೂರಕವಾದ ಸಾವಯವ ಗೊಬ್ಬರ ಸಿಗುತ್ತಿದ್ದು, ಅದನ್ನೇ ತೋಟಕ್ಕೆ ಬಳಸಿ ಉತ್ತಮ ಇಳುವರಿ ಸಾಧ್ಯವಾಗಿದೆ ಎನ್ನುತ್ತಾರೆ ರಾಜೀವ ಶೆಟ್ರಾ.

ಯಂತ್ರೋಪಕರಣ ಬಳಕೆ
ರಾಜೀವ ಶೆಟ್ಟಿ ಅವರು ಕೃಷಿ ಹಾಗೂ ಹೈನುಗಾರಿಕೆ ಎರಡರಲ್ಲಿಯೂ ಯಂತ್ರೋಪಕರಣಗಳನ್ನು ಬಳಸಿಕೊಂಡು ಯಶಸ್ಸು ಕಾಣುತ್ತಿದ್ದಾರೆ. ಈ ಮೂಲಕ ಸಾಕಷ್ಟು ಆಳುಗಳ ಸಂಖ್ಯೆಯನ್ನು ಕಡಿಮೆ ಮಾಡಕೊಂಡಿದ್ದಾರೆ.
ಕೆ.ಎಂ.ಎಫ್‌. ನಿರ್ದೇಶಕ

ರಾಜೀವ ಶೆಟ್ಟಿ ಅವರು ಬೈಲೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಕೆ.ಎಂ.ಎಫ್‌. ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಂಕರ ನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಿರ್ದೇಶಕರಾಗಿ, ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಂಕರನಾರಾಯಣ ಗ್ರಾ.ಪಂ. ಅಧ್ಯಕ್ಷರಾಗಿ, ಕುಂದಾಪುರ ತಾ. ಪಂ. ಸದಸ್ಯರಾಗಿ, ಪ್ರಸ್ತುತ ಶಂಕರನಾರಾಯಣ ಗ್ರಾ.ಪಂ. ಸದಸ್ಯರಾಗಿದ್ದಾರೆ. ಬಿಜೆಪಿ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದಾರೆ.

ಪ್ರಶಸ್ತಿಗಳು
ಆದರ್ಶ ಕೃಷಿಕ ಹದ್ದೂರು ರಾಜೀವ ಶೆಟ್ಟಿ ಅವರಿಗೆ ಅನೇಕ ಸಂಘ, ಸಂಸ್ಥೆಗಳಿಂದ ಸಮ್ಮಾನಗಳು ಸಂದಿವೆ. ಕುಂದಾಪುರ ತಾಲೂಕು ಉತ್ತಮ ಕೃಷಿಕ ಪ್ರಶಸ್ತಿ, ಸಬ್ಲಾಡಿ ಸೀನಪ್ಪ ಶೆಟ್ಟಿ ಕೃಷಿ ಸಾಧಕ ಪ್ರಶಸ್ತಿಗಳು ಲಭಿಸಿವೆ.

ಕೃಷಿಯಲ್ಲಿ ಸಂತೃಪ್ತಿ
ಬಿ.ಕಾಂ. ಪದವಿ ಪಡೆದರೂ ಉದ್ಯೋಗ ಅರಸಿ ಹೋಗದೆ, ಊರಲ್ಲಿಯೇ ಇದ್ದುಕೊಂಡು ಸಾಧನೆ ಮಾಡಬೇಕೆಂಬ ಹಂಬಲ ಇದ್ದಿದ್ದರಿಂದ ಕೃಷಿಯಲ್ಲಿ ತೊಡಗಿಸಿಕೊಂಡಿದ್ದೇನೆ. ಹಿರಿಯರ ಮಾರ್ಗದರ್ಶನದಂತೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಸಂತೃಪ್ತಿ ಕಾಣುತ್ತಿದ್ದೇನೆ. ಕೃಷಿಯಲ್ಲಿ ಅಂತರ ಬೆಳೆಯಿಂದ ಯಶಸ್ಸು ಕಾಣಲು ಸಾಧ್ಯವಿದೆ. ಯುವಕರು ಕೃಷಿ ಕ್ಷೇತ್ರದತ್ತ ಬರಬೇಕು. ಕೃಷಿ ಹಾಗೂ ಹೈನುಗಾರಿಕೆಯನ್ನು ಉದ್ಯಮವಾಗಿ ಬೆಳೆಸಿದಾಗ ಯಶಸ್ಸು ಸಿಗುತ್ತದೆ. ಹೈನುಗಾರಿಕೆ ಮಾಡುವ ಹಂಬಲ ಇದ್ದರೆ ಮೊದಲು ಎಷ್ಟು ಅಗತ್ಯವೋ ಅಷ್ಟು ಹಸಿ ಹುಲ್ಲು ಬೆಳೆಸಬೇಕು. ಹೈನುಗಾರಿಕೆಯಲ್ಲಿ ಸ್ವತಃ
ದುಡಿಮೆ ಮುಖ್ಯ. ಹೈನುಗಾರಿಕೆಯನ್ನು ಕೃಷಿಗೆ ಪೂರಕವಾಗಿ ಮಾಡಿದಾಗ ಯಶಸ್ಸು ಸಿಗುವುದರಲ್ಲಿ ಸಂಶಯವಿಲ್ಲ.
-ರಾಜೀವ ಶೆಟ್ಟಿ, ಹದ್ದೂರು

ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.