ಹಾಲಾಡಿ ಭತ್ತಗುಳಿಯ ಬಂಜರು ಭೂಮಿಯಲ್ಲಿ ಕೃಷಿ ಕ್ರಾಂತಿ

26 ಕೊರಗ ಕುಟುಂಬಗಳಿಂದ ತಲಾ ಒಂದು ಎಕರೆ ಜಮೀನಿನಲ್ಲಿ ಸಮುದಾಯ ಕೃಷಿ

Team Udayavani, Jan 11, 2023, 7:25 AM IST

ಹಾಲಾಡಿ ಭತ್ತಗುಳಿಯ ಬಂಜರು ಭೂಮಿಯಲ್ಲಿ ಕೃಷಿ ಕ್ರಾಂತಿ

ಕುಂದಾಪುರ: ಕೃಷಿಯಿಂದ ಜನ ವಿಮುಖರಾಗುತ್ತಿದ್ದಾರೆ ಅನ್ನುವು ದಕ್ಕೆ ಅಪವಾದವೆಂಬಂತೆ ಇಲ್ಲೊಂದು ಊರಿನ ಕೊರಗ ಜನಾಂಗದ 26 ಕುಟುಂಬಗಳು ಒಟ್ಟು ಸೇರಿ ಬಂಜರು ಭೂಮಿಯನ್ನು ಸಮೃದ್ಧ ಫಸಲಿನ ಕೃಷಿ ಭೂಮಿಯನ್ನಾಗಿಸಿ, ಅಡಿಕೆ, ಹಣ್ಣಿನ ಗಿಡಗಳು, ಹೈನುಗಾರಿಕೆ, ಕೋಳಿ ಸಾಕಣೆ ಸಹಿತ ಬಹು ವಿಧದ ಬೆಳೆ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ.
ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ 26 ಕೊರಗ ಕುಟುಂಬಗಳು ಸರಕಾರದ ಸಮುದಾಯ ಕೃಷಿ ಯೋಜನೆಯಡಿ ವಿವಿಧ ಸವಲತ್ತುಗಳನ್ನು ಪಡೆದುಕೊಂಡು 4-5 ವರ್ಷಗಳಿಂದ ಶ್ರಮಿಸಿ ಭತ್ತಗುಳಿ ಎಂಬ ಬರಡು ಭೂಮಿಯ 26 ಎಕರೆಯನ್ನು ಕೃಷಿಯೋಗ್ಯವಾಗಿಸಿದ್ದಾರೆ. ಅಡಿಕೆ, ಹಣ್ಣಿನ ಮರಗಳಲ್ಲಿ ಈಗ ಫಸಲು ಬರುತ್ತಿದೆ.

ಸಶಕ್ತರನ್ನಾಗಿಸುವ ಉದ್ದೇಶ
ಕೊರಗ ಸಮುದಾಯದ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿರುವುದನ್ನು ಮನಗಂಡು ಅಧ್ಯಯನ ನಡೆಸಿದಾಗ ಜೀವನಶೈಲಿ, ಅನಕ್ಷರತೆ, ಅಪೌಷ್ಟಿಕತೆ ಕಾರಣವೆಂದು ತಿಳಿಯಿತು. ಇದಕ್ಕಾಗಿ ಕೊರಗ ಅಭಿವೃದ್ಧಿ ಸಂಘಟನೆಗಳು 2010ರಲ್ಲಿ ಕೊರಗರ ಉಳಿವಿಗಾಗಿ ಚಳವಳಿ ಹಮ್ಮಿಕೊಂಡಿದ್ದವು. ಪರಿಣಾಮವೆಂಬಂತೆ ಸರಕಾರವು ಡಾ| ಮಹಮ್ಮದ್‌ ಫೀರ್‌ ನೇತೃತ್ವದಲ್ಲಿ ಜನಾಂಗದವರ ಕುಂದು ಕೊರತೆ ಮತ್ತು ಶ್ರೇಯೋಭಿವೃದ್ಧಿಗಾಗಿ ಸಮಿತಿ ರಚಿಸಿತು. ಆರ್ಥಿಕವಾಗಿ ಸಶಕ್ತರನ್ನಾಗಿಸಲು ಕನಿಷ್ಠ 2.5 ಎಕರೆ ಜಮೀನನ್ನು ಸರಕಾರದಿಂದ ಮಂಜೂರು ಮಾಡಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹಿಸಿ, ಆರ್ಥಿಕ ಅಭಿವೃದ್ಧಿಗಾಗಿ ಕ್ರಮ ಕೈಗೊಳ್ಳುವಂತೆ ಸಮಿತಿ ವರದಿ ನೀಡಿತ್ತು.

26 ಎಕರೆ ಮಂಜೂರು
ಹಾಲಾಡಿಯಲ್ಲಿ 26 ಕುಟುಂಬಗಳಿಗೆ ತಲಾ 1 ಎಕರೆ ಮಂಜೂರಾಗಿದ್ದು, ಕುಮಾರದಾಸ್‌ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಪ್ರತೀ ದಿನ ಶ್ರಮದಾನದ ಮೂಲಕ ದಟ್ಟ ಅರಣ್ಯ ಪ್ರದೇಶವನ್ನು ಹದಗೊಳಿಸಿ ಕೃಷಿಗೆ ಪೂರಕವಾಗಿಸಿದರು. ಅನಂತರ ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ, ತೋಟಗಾರಿಕೆ ಇಲಾಖೆ, ಗ್ರಾ.ಪಂ. ಹಾಲಾಡಿ, ಕೃಷಿ ಇಲಾಖೆ ಮತ್ತು ಶಾಸಕರ ಸಹಕಾರದೊಂದಿಗೆ ಈ ಜಾಗದಲ್ಲಿ ಸರಕಾರದ ವಿವಿಧ ಯೋಜನೆಗಳನ್ನು ಹಂತ ಹಂತವಾಗಿ ಅಳವಡಿಸಿಕೊಂಡು ತರಹೇವಾರಿ ಕೃಷಿ ಮಾಡಿದ್ದಾರೆ. ನರೇಗಾ, ತೋಟಗಾರಿಕೆ ಇಲಾಖೆ ಸಹಾಯಧನದೊಂದಿಗೆ ಅಡಿಕೆ ತೋಟ ನಿರ್ಮಿಸಿದ್ದಾರೆ.

ಮಿಶ್ರ ಬೆಳೆ, ಉಪಕಸುಬು
ಭತ್ತಗುಳಿಯ ರೈತರು ತಮ್ಮ 1 ಎಕರೆ ಜಮೀನಿನ ಪೈಕಿ ಅರ್ಧ ಎಕರೆಯಲ್ಲಿ ಅಡಿಕೆ ತೋಟ ರಚಿಸಿ, ಉಳಿದ ಭಾಗದಲ್ಲಿ ಬಾಳೆ, ಹಣ್ಣಿನ ಗಿಡಗಳು, ಜೇನು ಕೃಷಿಯಂತಹ ಮಿಶ್ರ ಬೆಳೆಯೊಂದಿಗೆ ಕೋಳಿ ಸಾಕಣೆ, ಹೈನುಗಾರಿಕೆ, ಎರೆಹುಳ ಘಟಕ ಅಳವಡಿಸಿಕೊಂಡಿದ್ದಾರೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಂಡು ನೀರಿನ ಮಿತವ್ಯಯ ಸಾಧಿಸಿದ್ದಾರೆ.

ಹಾಲಾಡಿ, ಕೊಕ್ಕರ್ಣೆ, ಪೆರ್ಡೂರು, ಶಿರ್ವ ಸೇರಿದಂತೆ ಜಿಲ್ಲೆಯ ವಿವಿಧೆಡೆ 430 ಕೊರಗ ಕುಟುಂಬಗಳಿಗೆ 450 ಎಕರೆ ಜಮೀನು ನೀಡಲಾಗಿದೆ. ಈ ಪೈಕಿ ಹಾಲಾಡಿಯಲ್ಲಿ ಮಾದರಿಯಾಗಿ ಕೃಷಿ ಮಾಡಿದ್ದಾರೆ.
– ದೂದ್‌ ಪೀರ್‌, ಯೋಜನಾ ಸಮನ್ವಯಾಧಿಕಾರಿ, ಐಟಿಡಿಪಿ ಇಲಾಖೆ

ಸಮುದಾಯವಾಗಿ ಶ್ರಮಿಸಿದಾಗ ಏನನ್ನೂ ಸಾಧಿಸಬಹುದು. ಅದಕ್ಕೆ ಹಾಲಾಡಿಯ ಕೊರಗ ಕುಟುಂಬದವರು ಸಾಕ್ಷಿ. ಇದು ಎಲ್ಲರಿಗೂ ಮಾದರಿ.
– ಕುಮಾರದಾಸ್‌, ಭತ್ತಗುಳಿ ನಿವಾಸಿ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.