ಕೋಟ ಮೂರ್ಕೈಯಲ್ಲಿ ಪಾದಚಾರಿ ಮೇಲ್ಸೇತುವೆಗೆ ಸಂಸದರಿಗೆ ಶಾಸಕ ಹಾಲಾಡಿ ಪತ್ರ
Team Udayavani, Jun 23, 2021, 7:10 PM IST
ಕೋಟ : ಜನಸಂಚಾರ ಹೆಚ್ಚಿರುವ ಹಾಗೂ ಪ್ರಮುಖ ವಿದ್ಯಾಸಂಸ್ಥೆಗಳಿರುವ ಕೋಟ ಮೂರ್ಕೈಯಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣವಾಗಬೇಕು ಎನ್ನುವ ಬೇಡಿಕೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದು, ಈ ಬಗ್ಗೆ ಇಂದು(ಜೂ. 23, ಬುಧವಾರ) ಉದಯವಾಣಿ ವಿಸ್ಕೃತ ವರದಿ ಪ್ರಕಟಿಸಿತ್ತು. ಈ ಬೆನ್ನಿಗೆ ಇದೀಗ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಕೂಡ ಮೇಲ್ಸೇತುವೆಗೆ ಕ್ರಮಕೈಗೊಳ್ಳುವಂತೆ ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಉತ್ತರ ಪ್ರದೇಶದ ಕಾಂಗ್ರೆಸ್ ಗೆ ಪ್ರಿಯಾಂಕ ಅವರದ್ಧೇ ನೇತೃತ್ವ : ಸಲ್ಮಾನ್ ಖುರ್ಷಿದ್
ಇಲ್ಲಿನ ವಿವೇಕ ವಿದ್ಯಾಸಂಸ್ಥೆಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಾರೆ ಮತ್ತು ಸಾಕಷ್ಟು ಶಿಕ್ಷಕರು, ಸಿಬಂದಿಗಳು, ಸಾರ್ವಜನಿಕರು ಇಲ್ಲಿ ರಸ್ತೆ ದಾಟುತ್ತಾರೆ. ಈ ಪ್ರದೇಶದಲ್ಲಿ ಆಗಾಗ ವಾಹನ ಅಪಘಾತಗಳು ಸಂಭವಿಸಿದ ಉದಾಹರಣೆಗಳು ಕೂಡ ಇದೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಇಲ್ಲಿಗೆ ಪಾದಚಾರಿ ಮೇಲ್ಸೇತುವೆ ಅಗತ್ಯವಿದ್ದು, ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ವಿವೇಕ ವಿದ್ಯಾಸಂಸ್ಥೆಯವರು ನೀಡಿದ ಮನವಿಯನ್ನು ಉಲ್ಲೇಖಿಸಿ ಸಂಸದರಿಗೆ ಪತ್ರ ಮೂಲಕ ವಿನಂತಿಸಿದ್ದಾರೆ.
ಇದನ್ನೂ ಓದಿ : ವ್ಯಾಕ್ಸಿನ್ ನೆರವಿಗಾಗಿ ನನ್ನನ್ನು ಸಂಪರ್ಕಿಸಿ : ಕೆಪಿಸಿಸಿಅಧ್ಯಕ್ಷಡಿ.ಕೆ.ಶಿವಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ