ಕಾಪುದಪ್ಪೆಗ್ ಆಟಿದ ಮಾರಿಪೂಜೆ: ಕಾಲಾವಧಿ ಆಟಿ ಮಾರಿಪೂಜೆ ಗೌಜಿ


Team Udayavani, Jul 27, 2022, 2:35 PM IST

ಕಾಪುದಪ್ಪೆಗ್ ಆಟಿದ ಮಾರಿಪೂಜೆ: ಕಾಲಾವಧಿ ಆಟಿ ಮಾರಿಪೂಜೆ ಗೌಜಿ

ಕಾಪು‌: ತುಳುನಾಡಿನಲ್ಲಿ ವೈಭವೋಪೇತವಾಗಿ ನಡೆಯುವ ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಕಾಪುವಿನ ಮಾರಿಪೂಜೆಯೂ ಒಂದಾಗಿದ್ದು ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಮೂರನೇ (ಕಲ್ಯ) ಮಾರಿಯಮ್ಮ ದೇವಸ್ಥಾನದಲ್ಲಿ ಜು. 26 ಮತ್ತು 27 ರಂದು ಕಾಲಾವಧಿ ಆಟಿ ಮಾರಿಪೂಜೆ ನಡೆಯಿತು.

ಮಂಗಳವಾರ ಸಂಜೆ ಪ್ರಾರಂಭಗೊಂಡು ಬುಧವಾರ ಸಂಜೆಯವರೆಗೆ ಎರಡು ದಿನಗಳ ಕಾಲ ಜರಗುವ ಮಾರಿಪೂಜೆಯ ಸಂದರ್ಭದಲ್ಲಿ ವಿವಿಧೆಡೆಗಳಿಂದ ಬರುವ ಭಕ್ತಾಧಿಗಳು ಮೂರೂ ಮಾರಿಗುಡಿಗಳೂ ತೆರಳು ಮಾರಿಯಮ್ಮ ದೇವಿಗೆ ವಿವಿಧ ಹರಕೆ – ಕಾಣಿಕೆ – ಸೇವೆಗಳನ್ನು ಸಮರ್ಪಿಸುತ್ತಾರೆ. ಭಕ್ತರು ದೇವಿಯ ಗಣಗಳಿಗೆ ಸ್ವಯಂ ಪ್ರೇರಣೆಯಿಂದ ರಕ್ತಾಹಾರ ರೂಪದ ಸೇವೆಯನ್ನು ಸಮರ್ಪಿಸುವ ಮೂಲಕ ತಮ್ಮ ನಂಬಿಕೆಯನ್ನು ಅನಾವರಣಗೊಳಿಸುತ್ತಾರೆ.

ಆಟಿ ಮಾರಿಪೂಜೆಯ ಪ್ರಯುಕ್ತ ಮಂಗಳವಾರ ರಾತ್ರಿ ಶ್ರೀ ಹಳೇ ಮಾರಿಗುಡಿಗೆ ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಮೂರನೇ ಮಾರಿಗುಡಿ ದೇವಸ್ಥಾನಕ್ಕೆ ಕಾಪು ಶ್ರೀ ಜನಾರ್ದನ ದೇವಸ್ಥಾನದಿಂದ ಮಾರಿಯಮ್ಮ ದೇವಿಯ ಬಿಂಬ ಮತ್ತು ಚಿನ್ನಾಭರಣಗಳನ್ನು ಮೆರವಣಿಗೆಯ ಮೂಲಕ ತಂದು ಪ್ರತಿಷ್ಠಾಪಿಸಲಾಗುತ್ತದೆ. ಆ ಬಳಿಕ ಮೂರು ಮಾರಿಗುಡಿಗಳ ಗದ್ದುಗೆಯಲ್ಲಿ ಮಾರಿಯಮ್ಮ ದೇವಿಯ ಬಿಂಬವನ್ನು ಪ್ರತಿಷ್ಟಾಪಿಸಿ ಅಲಂಕಾರ ಮಾಡಿ, ರಾತ್ರಿ ದರ್ಶನ ಸೇವೆ ನಡೆಯುತ್ತದೆ.

ಇದನ್ನೂ ಓದಿ: ಪ್ರವೀಣ್ ಅಂತಿಮ ಯಾತ್ರೆ : ಸಚಿವರು, ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ

ಬುಧವಾರ ಸಂಜೆ ಮೂರೂ ಮಾರಿಗುಡಿಗಳಲ್ಲಿಯೂ ಮಾರಿಯಮ್ಮ ದೇವಿಯ ದರ್ಶನ ಸೇವೆ ನಡೆದು, ದರ್ಶನಾವೇಶದೊಂದಿಗೆ ಮಾರಿಯಮ್ಮ ದೇವಿಯನ್ನು ಗದ್ದುಗೆಯಿಂದ ಕೆಳಗಿಳಿಸಲಾಗುತ್ತದೆ. ಗದ್ದುಗೆಯಿಂದ ಕೆಳಗಿಳಿಸಿದ ಬಿಂಬವನ್ನು ಮಲ್ಲಾರಿನ ನಿರ್ದಿಷ್ಟ ಪ್ರದೇಶಕ್ಕೆ ಕೊಂಡೊಯ್ದು ವಿಸರ್ಜಿಸುವ ಮೂಲಕ ಕಾಲಾವಧಿ ಸುಗ್ಗಿ ಮಾರಿ ಪೂಜಾ ಮಹೋತ್ಸವಕ್ಕೆ ತೆರೆ ಎಳೆಯಲಾಗುತ್ತದೆ.

ಕಾಪು ಶ್ರೀ ಹಳೇ ಮಾರಿಗುಡಿಯ ಆಡಳಿತ ಮೊಕ್ತೇಸರ ಪ್ರಸಾದ್ ಜಿ. ಶೆಣೈ, ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಮತ್ತು ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮೂರನೇ ಮಾರಿಗುಡಿಯ ಕಾರ್ಯ ನಿರ್ವಹಣಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ ಮಾರ್ಗದರ್ಶನದಲ್ಲಿ ಮಾರಿಗುಡಿಗೆ ಆಗಮಿಸುವ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಿಕೊಡಲಾಗಿತ್ತು

ಸುಗ್ಗಿ, ಆಟಿ, ಜಾರ್ದೆ ಮಾರಿಪೂಜೆ : ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಶ್ರೀ ಮೂರನೇ (ಕಲ್ಯ) ಮಾರಿಯಮ್ಮ ದೇವಸ್ಥಾನದ ಗದ್ದುಗೆಯಲ್ಲಿ ಅಲಂಕೃತಗೊಂಡು ಆರಾಧನೆಗೊಳ್ಳುತ್ತಿರುವ ಕಾಪುದಪ್ಪೆ  ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ಮಾರಿಪೂಜೆ ಸೇವೆಯು ಅತೀ ದೊಡ್ಡ ಮತ್ತು ಪ್ರಧಾನ ಸೇವೆಯಾಗಿದೆ. ವಾರ್ಷಿಕವಾಗಿ ಸುಗ್ಗಿ, ಆಟಿ ಮತ್ತು ಜಾರ್ದೆ ತಿಂಗಳಲ್ಲಿ ಮೂರು ಮಾರಿಪೂಜೆಗಳು ನಡೆಯುತ್ತವೆ. ಅದರೊಂದಿಗೆ ವರ್ಷಪೂರ್ತಿ ಆಯ್ದ ದಿನಗಳಲ್ಲಿ ಭಕ್ತರು ಮಾರಿಪೂಜೆಯ ಸೇವೆಯನ್ನು ಹರಕೆಯ ರೂಪದಲ್ಲಿ ಮಾರಿಯಮ್ಮ ದೇವಿಯ ಸನ್ನಿಧಾನದಲ್ಲಿ ಸಮರ್ಪಿಸುತ್ತಾರೆ.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.