ಪ್ರಖರ ದೀಪ ತೆರವಿಗೆ ಸಾರಿಗೆ ಇಲಾಖೆ ಕ್ರಮ


Team Udayavani, Oct 29, 2018, 10:00 AM IST

acar.jpg

ಕುಂದಾಪುರ: ಹೆದ್ದಾರಿಗಳಲ್ಲಿ ರಾತ್ರಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಎಲ್ಲ ವಾಹನಗಳಲ್ಲಿ ಪ್ರಖರ ಬೆಳಕು ಸೂಸುವ ಹೆಲೋಜಿನ್‌ ದೀಪಗಳ ತೆರವಿಗೆ ಉಡುಪಿಯ ಪ್ರಾದೇಶಿಕ ಸಾರಿಗೆ ಇಲಾಖೆ ಮುಂದಾಗಿದೆ. ಎದುರು ವಾಹನಗಳಿಗೆ ತೊಡಕಾಗುವ ಪ್ರಖರ ಹೆಲೋಜಿನ್‌ ದೀಪಗಳನ್ನು ಅಳವಡಿಸಬಾರದು ಎನ್ನುವ ಕಾನೂನು ಇದ್ದರೂ ಯಾರೂ ಪಾಲಿಸುತ್ತಿಲ್ಲ. ತಡವಾಗಿಯಾದರೂ ಇಲಾಖೆ ಎಚ್ಚೆತ್ತುಕೊಂಡಿದೆ. 

ಸ್ವಇಚ್ಛೆಯಿಂದ ತೆರವು
ಬೇರೆ ವಾಹನಗಳಿಗೆ ತೊಂದರೆ ಮಾಡುವಂತಹ ದೀಪಗಳನ್ನು ವಾಹನ ಮಾಲಕರು ಸ್ವಇಚ್ಛೆಯಿಂದ ತೆರವು ಮಾಡಿ ಎನ್ನುವುದಾಗಿ ಸಾರಿಗೆ ಇಲಾಖೆ ಮನವಿ ಮಾಡಿದೆ. 

ವಾರದ ಗಡುವು
ಅಪಾಯಕಾರಿ ಲೈಟ್‌ ತೆರವಿಗೆ ವಾಹನ ಸವಾರರಿಗೆ ಒಂದು ವಾರದ ಗಡುವು ನೀಡಲಾಗಿದೆ. ಆ ಬಳಿಕವೂ ತೆರವು ಮಾಡದಿದ್ದಲ್ಲಿ, ನಿರಂತರ ಕಾರ್ಯಾಚರಣೆ ನಡೆಸಿ, ಕಾನೂನಿನಂತೆ ತಲಾ 1 ಸಾವಿರ ರೂ. ದಂಡ ವಿಧಿಸಲಾಗುವುದು. ಇದನ್ನು ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಪೊಲೀಸ್‌ ಇಲಾಖೆಯ ಸಹಕಾರದೊಂದಿಗೆ ಜಾರಿಗೆ ತರಲು ಚಿಂತಿಸಲಾಗಿದೆ ಎಂದು ಉಡುಪಿಯ ಪ್ರಾದೇಶಿಕ ಸಾರಿಗೆ ಇಲಾಖೆಯ ಆಯುಕ್ತ ರಮೇಶ್‌ ವರ್ಣೇಕರ್‌ “ಉದಯವಾಣಿ’ಗೆ ತಿಳಿಸಿದ್ದಾರೆ. 

2 ವರ್ಷದಿಂದ ಇಲ್ಲ ಸಭೆ
ರಸ್ತೆ ಅಪಘಾತ ನಿಯಂತ್ರಿಸುವಲ್ಲಿ ರಸ್ತೆ ಸುರಕ್ಷತಾ ಸಮಿತಿಯ ಪಾತ್ರ ಮಹತ್ವದ್ದಾಗಿದೆ. ಆದರೆ ದ.ಕ. ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಡಿಸಿ, ಎಸ್ಪಿ, ಆರ್‌ಟಿಒ ಅಧಿಕಾರಿಗಳನ್ನು ಒಳಗೊಂಡ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯೇ ನಡೆದಿಲ್ಲ. ಉಡುಪಿ ಜಿಲ್ಲೆಯಲ್ಲಿ ಕಳೆದ ತಿಂಗಳು ಸಮಿತಿ ಸಭೆ ನಡೆದಿತ್ತು.

 ಸಮಿತಿ ಕ್ರಿಯಾಶೀಲವಾಗಬೇಕು
ಇತ್ತೀಚೆಗಿನ ಮಾಡೆಲ್‌ಗ‌ಳ ಕಾರುಗಳಲ್ಲಿ ಪ್ರಖರ ಬೆಳಕು ಸೂಸುವ ದೀಪ ಇರುವುದು ಸಾಬೀತಾಗಿದೆ. ರಾತ್ರಿ ವೇಳೆ ಸಂಭವಿಸುವ ಹೆಚ್ಚಿನ ರಸ್ತೆ ಅಪಘಾತ ಪ್ರಕರಣಗಳಿಗೆ ಹೆಲೋಜಿನ್‌ ಲೈಟ್‌ಗಳೇ ಕಾರಣ. ಇವುಗಳ ತೆರವು ಸಾರಿಗೆ ಇಲಾಖೆ ಯಿಂದ ಮಾತ್ರ ಅಸಾಧ್ಯ. ಮೋಟಾರು ಕಾಯ್ದೆ ಉಲ್ಲಂಘನೆ ಸಂಬಂಧ ಡಿಸಿ, ಎಸ್ಪಿ , ಆರ್‌ಟಿಒ ಆಯುಕ್ತರನ್ನೊಳಗೊಂಡ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಗೆ ಹೆಚ್ಚಿನ ಅಧಿಕಾರವಿದೆ. ಇದು ಕ್ರಿಯಾಶೀಲವಾದರೆ ಅಪಘಾತ ಕಡಿಮೆಯಾಗಬಹುದು.

ಗಂಭೀರವಾಗಿ ಪರಿಗಣಿಸಿದ್ದೇವೆ
ಹೆದ್ದಾರಿಯಲ್ಲಿ ಇತ್ತೀಚೆಗೆ ಸಂಭವಿಸಿರುವ ಕೆಲವು ಅಪಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಉಡುಪಿ ಜಿಲ್ಲೆಯಾದ್ಯಂತ ವಾಹನಗಳ ಹೆಲೋಜಿನ್‌ ದೀಪ ತೆರವು ಮಾಡಲು ಮುಂದಾಗಿದ್ದೇವೆ. ವಾಹನ ಸವಾರರಿಗೆ ಒಂದು ವಾರ ಸಮಯ ನೀಡಲಾಗಿದೆ, ತಪ್ಪಿದಲ್ಲಿ ದಂಡ ವಿಧಿಸಲಾಗುವುದು. ಮುಂದಿನ ದಿನಗಳಲ್ಲಿ ಎಲ್ಲ ಕಡೆಗಳಲ್ಲಿ ರಾತ್ರಿ ವೇಳೆ ಕಾರ್ಯಾಚರಣೆ ನಡೆಸಲಾಗುವುದು. 
 ರಮೇಶ್‌ ವರ್ಣೇಕರ್‌, ಪ್ರಾದೇಶಿಕ ಸಾರಿಗೆ ಆಯುಕ್ತರು, ಉಡುಪಿ

ಸಿಬಂದಿ ಕೊರತೆ
ಅಪಘಾತ ತಡೆಯಲು ಹೆಲೋಜಿನ್‌ ಲೈಟ್‌ಗಳಿಗೆ ಕಡಿವಾಣ ಹಾಕಬೇಕಾದುದು ತೀರಾ ಅಗತ್ಯ. ಆದರೆ ಇದರ ಕಾರ್ಯಾಚರಣೆಗೆ ಬಂಟ್ವಾಳ ಹಾಗೂ ಪುತ್ತೂರು ವ್ಯಾಪ್ತಿಯಲ್ಲಿ  ಸಾರಿಗೆ ಇಲಾಖೆಯಲ್ಲಿ ಸಿಬಂದಿ ಕೊರತೆ ಅಡ್ಡಿ ಯಾಗಿದೆ. ಪೊಲೀಸ್‌ ಇಲಾಖೆಯೊಂದಿಗೆ ಜಂಟಿಯಾಗಿ ಮುಂದಿನ ದಿನಗಳಲ್ಲಿ ಈ ಸಂಬಂಧ ಕಾರ್ಯಾಚರಣೆ ನಡೆಸಲು ಚಿಂತನೆ ನಡೆಸಲಾಗುವುದು. 
 ಜಿ.ಎಸ್‌. ಹೆಗ್ಡೆ , ಸಾರಿಗೆ ಆಯುಕ್ತರು (ಪ್ರಭಾರ) ಪುತ್ತೂರು ಹಾಗೂ ಸಹಾಯಕ ಆಯುಕ್ತರು, ಬಂಟ್ವಾಳ

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.