ಶ್ರೀಕೃಷ್ಣಮಠ: ಹರಿವಾಣ ನೃತ್ಯ ಸೇವೆ
Team Udayavani, Jul 25, 2018, 2:40 AM IST
ಉಡುಪಿ: ಈ ಹಾಡನ್ನು ಭಾಗವತರು ಹಾಡುತ್ತಿದ್ದಂತೆ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ ಮತ್ತು ಶ್ರೀ ಅದಮಾರು ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿಯವರು ಭಕ್ತಿಯಿಂದ ಹೆಜ್ಜೆ ಹಾಕಿದರು. ಆಷಾಢ ಶುದ್ಧ ಏಕಾದಶಿ ನಿಮಿತ್ತ ಸೋಮವಾರ ರಾತ್ರಿ ಶ್ರೀಕೃಷ್ಣಮಠದಲ್ಲಿ ಈ ವಿಶಿಷ್ಟ ಹರಿವಾಣ ನೃತ್ಯ ಸೇವೆ ನಡೆಯಿತು.
ರಾತ್ರಿ ಪೂಜೆಯಾದ ಬಳಿಕ ಸ್ವಾಮೀಜಿಯವರು ಕೃಷ್ಣನ ಗರ್ಭಗುಡಿ ಹೊರಗಿನ ಚಂದ್ರಶಾಲೆಯಲ್ಲಿ ಕುಳಿತಿರುತ್ತಾರೆ. ಆಗ ನಾಲ್ಕು ಬಗೆಯ ವಾದ್ಯೋಪಕರಣಗಳನ್ನು ನುಡಿಸಲಾಗುತ್ತದೆ. ಅನಂತರ ಸಂಕೀರ್ತನೆ ನಡೆಯುತ್ತದೆ. ಭಾಗವತರು ನಾಲ್ಕು ಪದ್ಯಗಳನ್ನು ಹಾಡುತ್ತಾರೆ. ಸಾಂಕೇತಿಕ ಪುರಾಣ ಪ್ರವಚನ ನಡೆಯುತ್ತದೆ. ತೀರ್ಥಮಂಟಪದೆದುರು ಸ್ವಾಮೀಜಿ ಮಂಗಳಾರತಿ ಮಾಡುತ್ತಾರೆ. ಆಗ ಭಾಗವತರು ಹಾಡು ಹಾಡುತ್ತಾರೆ. ದೇವರಿಗೆ ಸಮರ್ಪಿಸಿದ ತುಳಸಿ ಮತ್ತು ಹೂವುಗಳನ್ನು ಹರಿವಾಣದಲ್ಲಿರಿಸಿ, ತಲೆ ಮೇಲೆ ಹೊತ್ತು ಸ್ವಾಮೀಜಿ ನರ್ತಿಸುತ್ತಾರೆ. ಬಳಿಕ ತುಳಸಿ ಮತ್ತು ಹೂವನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಏಕಾದಶಿ ದಿನ ನಿರ್ಜಲ ಉಪವಾಸದಲ್ಲಿದ್ದು ರಾತ್ರಿ ಪೂಜೆಯಾದ ಬಳಿಕ ನೃತ್ಯ ನಡೆಯುತ್ತದೆ. ಆಷಾಢಮಾಸದ ಶುಕ್ಲ ಏಕಾದಶಿಯಿಂದ ಕಾರ್ತೀಕ ಮಾಸದ ಶುಕ್ಲ ಏಕಾದಶಿವರೆಗೆ ನಾಲ್ಕೂ ತಿಂಗಳಲ್ಲಿ ಬರುವ 8 ಏಕಾದಶಿಗಳಂದು ಉಡುಪಿ ಸಂಪ್ರದಾಯದ ಎಲ್ಲಾ ಸ್ವಾಮೀಜಿಯವರು ಎಲ್ಲಿ ಮೊಕ್ಕಾಂ ಇರುತ್ತಾರೋ ಅಲ್ಲಿ ಈ ತೆರನಾದ ಆಚರಣೆ ನಡೆಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್