ದ್ವೇಷ ಭಾವನೆ, ಸುಳ್ಳು ಮಾಹಿತಿ; ಮಲ್ಪೆ ಪೊಲೀಸ್ ಠಾಣೆಗೆ ದೂರು
Team Udayavani, Jan 28, 2023, 1:35 AM IST
ಮಲ್ಪೆ: ಈ ಹಿಂದೆ ಉಡುಪಿಯಲ್ಲಿ ನಡೆದ ಎಸ್ಡಿಪಿಐ ಘಟನೆ ಮತ್ತು ಸೈಂಟ್ಮೇರಿಸ್ನಲ್ಲಿರುವ ಕೆಲಸಗಾರರ ಜತೆ ನನಗೆ ಯಾವುದೇ ಸಂಬಂಧ ಇಲ್ಲದಿದ್ದರೂ ಹಿಂದೂ-ಮುಸ್ಲಿಂ ಧರ್ಮದ ಜನರ ಮಧ್ಯೆ ದೇÌಷ ಭಾವನೆ ಹುಟ್ಟುವಂತೆ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಸುಳ್ಳು ಮಾಹಿತಿಯನ್ನು ಪ್ರಕಾಶ್ ಮಲ್ಪೆ ಅವರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ನನ್ನ ತೆಜೋವಧೆಗೆ ಪ್ರಯತ್ನಿದ್ದಾರೆ ಎಂದು ಮಂಜುನಾಥ ವಿ. ಸಾಲ್ಯಾನ್ ಅವರು ಮಲ್ಪೆ ಠಾಣೆಗೆ ದೂರು ನೀಡಿದ್ದಾರೆ.
ಈ ಹಿಂದೆ ಎಸ್ಡಿಪಿಐ ಸಂಘಟನೆ ನಡೆಸಿದ ಕಾನೂನು ವಿರೋಧಿ ಪ್ರತಿಭಟನೆಯ ವಿಡಿಯೋ ಮತ್ತು ಸೈಂಟ್ಮೇರಿಸ್ ದ್ವೀಪದಲ್ಲಿ ನಡೆದ ಘಟನೆಯ ವಿಡಿಯೋವನ್ನು ಎಡಿಟ್ ಮಾಡಲಾಗಿದೆ. ಈ ಬಗ್ಗೆ ಮಲ್ಪೆ ಕೊಳದಲ್ಲಿ ಪ್ರಕಾಶ್ ಮಲ್ಪೆ ಅವರಲ್ಲಿ ಈ ಬಗ್ಗೆ ಪ್ರಶ್ನೆ ಮಾಡಿದಾಗ ವಿಡಿಯೋ ಮಾಡಿರುವುದು ನನ್ನ ಮೊಬೈಲ್ನಲ್ಲಿ, ಇದು ನನ್ನ ಇಷ್ಟ. ಮಲ್ಪೆ ಪರಿಸರದಲ್ಲಿ ಜೀವ ಸಹಿತ ಬಿಡುವುದಿಲ್ಲ ಬೆದರಿಕೆ ಹಾಕಿದ್ದಾರೆ. ಅವರ ಬಗ್ಗೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಎದೆ ನೋವು: ಸಾವು
ಮಲ್ಪೆ: ಎದೆನೋವು ಕಾಣಿಸಿ ಕೊಂಡು ಕೇರಳದ ಕೊಲ್ಲಂನ ಸುರೇಶ್ (45) ಅವರು ಮೃತಪಟ್ಟಿದ್ದಾರೆ. ಕಲ್ಮಾಡಿಯಲ್ಲಿ ಬಾವಿ ರಿಂಗಿನ ಕೆಲಸ ಮಾಡಿಕೊಂಡಿದ್ದರು. ವಾರದ ಹಿಂದೆ ಅವರಿಗೆ ಎದೆನೋವು ಕಾಣಿಸಿ ಕೊಂಡಿದೆನ್ನಲಾಗಿದೆ. ಜ. 25ರಂದು ರಾತ್ರಿ ರಕ್ತವಾಂತಿ ಮಾಡುತ್ತಿದ್ದು, ತತ್ಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪರೀಕ್ಷಿಸಿದ ವೈದರು ಸುರೇಶ್ ಅದಾಗಲೇ ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.
ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ; ಗಂಭೀರ
ಸಿದ್ದಾಪುರ: ಹೊಸಂಗಡಿ ಗ್ರಾಮದ ಶ್ರೀ ವೀರಾಂಜನೆಯ ದೇವಸ್ಥಾನದ ಎದುರಿನ ರಾ. ಹೆದ್ದಾರಿಯಲ್ಲಿ ಅರುಣ್ಕುಮಾರ್ ಅವರು ಅತೀ ವೇಗವಾಗಿ ಚಲಾಯಿಸಿ, ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆಸಿದ್ದಾರೆ. ಅನಂತರ ಮಲ್ಯ ಕಾಂಪೌಂಡಿಗೆ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆಂಗಿನ ಮರದಿಂದ ಬಿದ್ದು ಸಾವು
ಸಿದ್ದಾಪುರ: ಕೊಂಜಾಡಿ ರಾಜೀವ ಶೆಟ್ಟಿ ಅವರ ಮನೆಯ ತೆಂಗಿನ ತೋಟದಲ್ಲಿ ಮರದಿಂದ ಕಾಯಿ ಕೊಯ್ಯುತ್ತಿರುವಾಗ ಮರದಿಂದ ಬಿದ್ದು ಕುಚ್ಚಾರು ಕಾನ್ವೆಟ್ಟು ಚನ್ನಕೇಶವ (43) ಅವರು ಜ. 26ರಂದು ಮೃತಪಟ್ಟಿದ್ದಾರೆ. ಅವರನ್ನು ಕೂಡಲೆ ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೆಬ್ರಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ