ಹಟ್ಟಿಯಂಗಡಿ ಕ್ರಾಸ್‌-ಜಾಡಿ ರಸ್ತೆ: ದ್ವಿಪಥಕ್ಕೆ ಹೆಚ್ಚಿದ ಬೇಡಿಕೆ


Team Udayavani, Nov 28, 2018, 1:50 AM IST

hattiyangadi-27-11.jpg

ತಲ್ಲೂರು: ಕುಂದಾಪುರದಿಂದ ತಲ್ಲೂರು ಮಾರ್ಗವಾಗಿ ಕೊಲ್ಲೂರು ಸಂಪರ್ಕಿಸುವ ಹತ್ತಿರದ ಹಟ್ಟಿಯಂಗಡಿ ಕ್ರಾಸ್‌ನಿಂದ ಜಾಡಿಯವರೆಗಿನ ಸುಮಾರು 3 ಕಿ.ಮೀ. ದೂರದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಇದನ್ನು ದ್ವಿಪಥಗೊಳಿಸಬೇಕು ಎನ್ನುವ ಬೇಡಿಕೆ ಹೆಚ್ಚಾಗುತ್ತಿದೆ. ಈಗ ಕೊಲ್ಲೂರಿಗೆ ಕುಂದಾಪುರದಿಂದ ಹೆಮ್ಮಾಡಿ ಮಾರ್ಗ ಅಥವಾ ತಲ್ಲೂರು, ಮಾವಿನಕಟ್ಟೆ, ನೇರಳಕಟ್ಟೆ ಮೂಲಕ ರಸ್ತೆಯಿದೆ. ಆದರೆ ಇದಕ್ಕೂ ಮೊದಲು ಕೊಲ್ಲೂರಿಗೆ ಸಂಚರಿಸಬೇಕಾದರೆ ಈ ಹಟ್ಟಿಯಂಗಡಿ ಕ್ರಾಸ್‌ – ಜಾಡಿ ರಸ್ತೆಯನ್ನೇ ಹೆಚ್ಚಿನವರು ಅವಲಂಬಿಸಿದ್ದರು. ಆದರೆ ಈಗ ಈ ರಸ್ತೆ ಸಂಪೂರ್ಣ ಹೊಂಡ – ಗುಂಡಿಗಳು ಹಾಗೂ ಕಿರಿದಾದ ರಸ್ತೆಯಾಗಿರುವುದರಿಂದ ವಾಹನ ಸಂಚಾರವೇ ಕಷ್ಟಕರವಾಗಿದೆ.

ದ್ವಿಪಥಕ್ಕೆ ಆಗ್ರಹ
ಈ ಹಟ್ಟಿಯಂಗಡಿ ಕ್ರಾಸ್‌ – ಜಾಡಿಯವರೆಗಿನ 3 ಕಿ.ಮೀ. ಉದ್ದದ ರಸ್ತೆಯನ್ನು ದ್ವಿಪಥಗೊಳಿಸಿದರೆ ಇದೇ ರಸ್ತೆಯಲ್ಲಿ ನಿತ್ಯ ಸಂಚರಿಸುವ ನೂರಾರು ಮಂದಿಗೆ ಪ್ರಯೋಜನವಾಗಲಿದೆ. ಅದಲ್ಲದೆ ಪ್ರಮುಖ ಯಾತ್ರ ಸ್ಥಳವಾದ ಕೊಲ್ಲೂರಿಗೂ ಸಂಪರ್ಕ ಕಲ್ಪಿಸಲು ಅನುಕೂಲವಾಗಿದೆ. ಇದೇ ಮಾರ್ಗವಾಗಿ ವಂಡ್ಸೆ, ಕೆಂಚನೂರು ಕಡೆಗೂ ಸಂಚರಿಸಬಹುದು. ಕೊಲ್ಲೂರಿಗೆ ಬರುವ ಯಾತ್ರಾರ್ಥಿಗಳು ಹಟ್ಟಿಯಂಗಡಿ ದೇವಸ್ಥಾನಕ್ಕೂ ತೆರಳಲು ಕೂಡ ಸಹಕಾರಿಯಾಗಲಿದೆ. ಕೊಲ್ಲೂರಿಗೆ ತೆರಳಲು ಇರುವ ಬೇರೆ ಮಾರ್ಗಗಗಳಲ್ಲಿ ವಾಹನ ದಟ್ಟಣೆ ಕಡಿಮೆಯಾಗಲಿದೆ. ರಸ್ತೆ ದ್ವಿಪಥದ ಜತೆಗೆ ಜಾಡಿಯ ಸಮೀಪದ ಸೇತುವೆಯನ್ನು ಕೂಡ ಅಗಲೀಕರಣ ಮಾಡಬೇಕು ಎನ್ನುವ ಕೂಗು ಕೇಳಿ ಬಂದಿದೆ. ಈ ರಸ್ತೆ ದ್ವಿಪಥವಾದರೆ ಇದೇ ಮಾರ್ಗವಾಗಿ ಬಸ್‌ ಸಂಚಾರವನ್ನು ಕೂಡ ಆರಂಭಿಸಬಹುದು. 

ದ್ವಿಪಥಕ್ಕೆ 8 ಕೋ.ರೂ. ಪ್ರಸ್ತಾವನೆ
ಜಾಡಿಯಿಂದ ಹಟ್ಟಿಯಂಗಡಿ ರಸ್ತೆಯ ಅಭಿವೃದ್ಧಿಗೆ ಈಗಾಗಲೇ ರಾಜ್ಯ ಲೋಕೋಪಯೋಗಿ ಇಲಾಖೆಯಿಂದ 4 ಕೋ.ರೂ. ಅನುದಾನ ನೀಡುತ್ತೇವೆ ಎಂದಿದ್ದಾರೆ. ಆದರೆ ನಾವು ಆ ರಸ್ತೆಯನ್ನು ದ್ವಿಪಥ ಮಾಡುವ ಸಲುವಾಗಿ ಇನ್ನು 4 ಕೋ.ರೂ. ಒಟ್ಟು 8 ಕೋ.ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ನೀಡುವ ವಿಶ್ವಾಸವಿದೆ.  
–  ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

ಎಲ್ಲ ದೃಷ್ಟಿಯಿಂದಲೂ ಪ್ರಯೋಜನ
1962 ರಷ್ಟು ಹಳೆಯದಾದ ರಸ್ತೆ ಇದಾಗಿದ್ದು, ಕುಂದಾಪುರ, ತಲ್ಲೂರಿನಿಂದ ಕೊಲ್ಲೂರಿಗೆ ತೆರಳಲು ಹಿಂದೆ ಇದೇ ಮಾರ್ಗವನ್ನು ಬಳಸಲಾಗುತ್ತಿತ್ತು. ದ್ವಿಪಥ ಮಾಡಬೇಕು ಎನ್ನುವ ಬೇಡಿಕೆ ಬಹಳ ಹಿಂದಿನಿಂದಲೇ ಇತ್ತು. ಸುಮಾರು 15 ವರ್ಷಗಳ ಹಿಂದೊಮ್ಮೆ ಡಾಮರೀಕರಣ ಆಗಿತ್ತು. ಆ ಬಳಿಕ 2 ಸಲ ತೇಪೆ ಕಾರ್ಯ ಅಷ್ಟೇ ಆಗಿದೆ. ಈಗ ಇದನ್ನು ದ್ವಿಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಿದರೆ ಎಲ್ಲ ದೃಷ್ಟಿಯಿಂದಲೂ ಪ್ರಯೋಜನವಾಗಲಿದೆ. 
– ಕೆಂಚನೂರು ಸೋಮಶೇಖರ ಶೆಟ್ಟಿ, ಸ್ಥಳೀಯರು

— ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.