ಹಟ್ಟಿಯಂಗಡಿ: ಬೇಸಗೆ ಬಂದರೆ ನೀರಿಗಾಗಿ ಟ್ಯಾಂಕರ್‌ ಮೊರೆ


Team Udayavani, Feb 12, 2019, 1:00 AM IST

hattiyangady.jpg

ಕುಂದಾಪುರ: ಹಟ್ಟಿಯಂಗಡಿ ಪ್ರಸಿದ್ಧವಾಗಿರುವುದು ಗಣಪತಿ ಕ್ಷೇತ್ರವಾಗಿ. ಅಂತೆಯೇ ರಾಜರ ಆಳ್ವಿಕೆ ಕಾಲದಿಂದಲೂ ಹಟ್ಟಿಯಂಗಡಿಗೆ ಅದರದ್ದೇ ಆದ ಮಹತ್ವವಿತ್ತು. ವಾರಾಹಿ ನದಿದಂಡೆಯ ಮೇಲೆ ಇರುವ ಈ ಗ್ರಾಮದಲ್ಲಿ ಹೊಳೆ, ಬಾವಿ, ಕೆರೆಗೆಳಿಂದ ಸಮೃದ್ಧ ಜಲಾಗಾರವಾಗಿದ್ದರೂ ಹಟ್ಟಿಯಂಗಡಿಯಲ್ಲಿ ಈಚೆಗೆ ಮೂರು ವರ್ಷಗಳಿಂದ ನೀರಿನ ಅಭಾವ ಕಾಣಿಸಿ ಕೊಳ್ಳತೊಡಗಿದೆ. ಹಾಗಾಗಿ ಇಲ್ಲಿನ ಆಡಳಿತ ಬೇಸಗೆ ಬಂದರೆ ಟ್ಯಾಂಕರ್‌ ಮೊರೆ ಹೊಗುತ್ತದೆ. 

ಖಾಸಗಿ ನೀರು
ಈ ಪಂಚಾಯತ್‌ಗೆ ಕೆಂಚನೂರು, ಕನ್ಯಾನ, ಹಟ್ಟಿಯಂಗಡಿ ಮೂರು ಗ್ರಾಮಗಳಿದ್ದು 114 ಕೆರೆಗಳು, 559 ಬಾವಿಗಳು ಇವೆ. ಹಟ್ಟಿಯಂಗಡಿಯಲ್ಲಿ 338 ಕುಟುಂಬಗಳು, 1897 ಜನಸಂಖ್ಯೆಯಿದೆ. 120ರಷ್ಟು ನಳ್ಳಿನೀರಿನ ಸಂಪರ್ಕಗಳಿದ್ದು ತೀರಾ ಈಚಿನವರೆಗೆ ನೀರಿನ ಸಮಸ್ಯೆ ಇರಲಿಲ್ಲ. ಪಂಚಾಯತ್‌ ನೀರಿಗಿಂತ ಖಾಸಗಿ ನೀರು ನಂಬಿದವರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಹಾಗಿದ್ದರೂ ಬೇಸಗೆಯಲ್ಲಿ ಅಂತರ್ಜಲ ಮಟ್ಟ ಕುಸಿದು ಕೆರೆ, ಬಾವಿಗಳಲ್ಲಿ ನೀರು ಆಳಕ್ಕಿಳಿದು ಕುಡಿಯಲು ಕೂಡ ತತ್ವಾರ ಉಂಟಾಗುತ್ತಿದೆ.

ಹೊಸ ಯೋಜನೆ
ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಸೌಕೂರು ಸಿದ್ದಾಪುರ ಏತನೀರಾವರಿಗೆ , ವಾರಾಹಿ ನೀರಿಗಾಗಿ 60 ಕೋ.ರೂ. ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಈಗಿನ ಸಮ್ಮಿಶ್ರ ಸರಕಾರ ಮಂಡಿಸಿದ ಬಜೆಟ್‌ನಲ್ಲಿ 50 ಕೋ.ರೂ. ಈ ಯೋಜನೆಗಾಗಿ ಅನುದಾನ ಮೀಸಲಿಟ್ಟಿದೆ. ಈ ಕಾಮಗಾರಿ ನಡೆದರೆ ಹಟ್ಟಿಯಂಗಡಿ ಪರಿಸರದ ಅಂತರ್ಜಲಮಟ್ಟ ಹೆಚ್ಚಾಗಲಿದ್ದು ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ಆಶಿಸಲಾಗಿದೆ. 

ಎಲ್ಲೆಲ್ಲಿ?
ಕೆಂಚನೂರು, ಕದರಿಗುಡ್ಡ, ನೆಂಪು, ಗುಡ್ರಿ, ಎಲ್ಕೋಡು, ಬಟ್ರಾಡಿ, ಜಾಡುಕಟ್ಟು, ಮಾವಿನಕಟ್ಟೆ, ಕಾಂಜೂರುೆ, ಜನತಾ ಕಾಲನಿಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗುತ್ತದೆ. 850 ಅಡಿ ಕೊರೆದು ಎರಡು ಕೊಳವೆ ಬಾವಿ ತೆಗೆದರೂ ನೀರು ಸಿಕ್ಕಿಲ್ಲ. ಒಟ್ಟು 6 ಕೊಳವೆ ಬಾವಿಗಳಿದ್ದರೂ ಉಪಯೋಗಕ್ಕೆ ಸಿಕ್ಕಿರುವುದು 2 ಮಾತ್ರ. ಪಂಚಾಯತ್‌ನದ್ದು 4 ತೆರೆದ ಬಾವಿಗಳಿದ್ದು  ಕುಡಿಯುವ ನೀರಿಗೆ ಆಶ್ರಯವಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಾರ್ವಜನಿಕರ ಕುಡಿಯುವ ನೀರಿನ ಉಪಯೋಗಕ್ಕಾಗಿ ಸರಕಾರಿ ಬಾವಿ ತೆಗೆಯಬಹುದು. ಆದರೆ ಕಾರ್ಮಿಕರು ದೊರೆಯುತ್ತಿಲ್ಲ ಎಂಬ ಅಳಲು ಇದೆ. ಅದೇ ಯೋಜನೆಯಲ್ಲಿ ಖಾಸಗಿ ಬಾವಿ ಕೂಡ ತೆಗೆಸಬಹುದು. ಅದಕ್ಕಾದರೂ ಒಂದಷ್ಟು ಮಂದಿ ಉತ್ಸಾಹ ತೋರಿದ್ದರು ಎನ್ನುತ್ತಾರೆ ಪಂಚಾಯತ್‌ನವರು. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವಾಗ ತೀವ್ರತರ ಸಮಸ್ಯೆ ಇರುವ ಪ್ರದೇಶಗಳ ಜತೆಗೆ ಬೇಸಗೆಯ ಬಿಸಿ ಏರುತ್ತಿದ್ದಂತೆ ಖಾಸಗಿಯಾಗಿ ನೀರಿನಾಶ್ರಯ ಇರುವವರಿಗೂ ಕೊಡಬೇಕಾಗುತ್ತದೆ. ಏಕೆಂದರೆ ಅಲ್ಲಿ ಕೂಡ ಜಲಮೂಲದ ಸೆಲೆ ಕಡಿಮೆಯಾಗಿರುತ್ತದೆ. 

ಶಾಸಕರಿಗೆ ಮನವಿ
ಕಡೆRರೆಗುಡ್ಡ, ಕಡಿರೆ ಮೊದಲಾದ ಕಾಲನಿಗಳಲ್ಲಿ ತೀವ್ರವಾದ ನೀರಿನ ಸಮಸ್ಯೆ ಉಂಟಾಗುತ್ತದೆ. ಈ ಬಾರಿ ಬೇಗನೇ ನೀರು ಕಡಿಮೆಯಾಗಿದ್ದು , ಪಂಚಾಯತ್‌ ವತಿಯಿಂದ ಕೊಳವೆಬಾವಿ ಕೊರೆಸಿದಾಗ  ನೀರು ದೊರೆಯಲಿಲ್ಲ. ಆದ್ದರಿಂದ ತೆರೆದ ಬಾವಿ ತೆಗೆಯಲು ಅನುದಾನ ನೀಡುವಂತೆ ಶಾಸಕರಿಗೆ ಮನವಿ ನೀಡಲಾಗಿದೆ. ಬಜೆಟ್‌ನಲ್ಲಿ ಘೋಷಣೆಯಾದ ಸೌಕೂರು ಸಿದ್ದಾಪುರ ಏತ ನೀರಾವರಿ ಯೋಜನೆಯಿಂದ ಈ ಭಾಗಕ್ಕೂ ಪ್ರಯೋಜನ ದೊರೆಯಲಿದೆ.
– ಕೆ. ರಾಜೀವ ಶೆಟ್ಟಿ, ಗ್ರಾ.ಪಂ. ಅಧ್ಯಕ್ಷರು

ಕಾಲನಿಗಳಿಗೆ ಸಮಸ್ಯೆ
ಬೇಸಗೆಯಲ್ಲಿ ಜನತಾಕಾಲನಿಗಳಿಗೆ ನೀರಿನ ಸಮಸ್ಯೆ ಉಂಟಾಗುತ್ತದೆ. ಟ್ಯಾಂಕರ್‌ ಮೂಲಕ ನೀರಿನ ಸರಬರಾಜು ಮಾಡಲಾಗುತ್ತದೆ. ಸಮಸ್ಯೆ ಬಂದಲ್ಲಿ ತತ್‌ಕ್ಷಣ ಸ್ಪಂದನೆ ನೀಡಲಾಗುತ್ತದೆ.
– ರಿಯಾಜ್‌ ಅಹ್ಮದ್‌, ಪಂ. ಅಭಿವೃದ್ಧಿ ಅಧಿಕಾರಿ

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.