ಧೂಳುಮಯ ಶಿರ್ವ ಬಂಗ್ಲೆ  ಮೈದಾನ ರಸ್ತೆಗೆ ಡಾಮರು ಕಾಮಗಾರಿ ಎಂದು…?


Team Udayavani, Feb 7, 2019, 1:00 AM IST

dhoolumaya.jpg

ಶಿರ್ವ: ಮುದರಂಗಡಿ-ಶಿರ್ವ ರಸ್ತೆಯಿಂದ ಶಿರ್ವ ತೊಟ್ಲಗುರಿ ಬಂಗ್ಲೆ ಮೈದಾನಕ್ಕೆ ಹೋಗುವ ರಸ್ತೆ ಸಂಪೂರ್ಣ ಧೂಳುಮಯವಾಗಿದ್ದು ಸಂಚಾರ ದುಸ್ತರವಾಗಿದೆ. ಸುಮಾರು 5 ದಶಕಗಳ ಹಿಂದೆ ನಿರ್ಮಾಣಗೊಂಡಿದ್ದ ಈ ರಸ್ತೆ ಡಾಮರು ಕಾಣದೆ ಮಣ್ಣಿನ ರಸ್ತೆಯಾಗಿಯೇ ಉಳಿದಿದೆ.  

ಸಂಪರ್ಕ ರಸ್ತೆ 
ಶಿರ್ವ ಗ್ರಾ.ಪಂ. ವ್ಯಾಪ್ತಿಯ ತೊಟ್ಲಗುರಿ ವಾರ್ಡ್‌ನ ಬಂಗ್ಲೆ ಗುಡ್ಡೆ ಮೈದಾನದ ಸುಮಾರು 5ಎಕರೆ ಪ್ರದೇಶದಲ್ಲಿ ಅಂಗನವಾಡಿ ಕೇಂದ್ರ, ಪಶು ವೈದ್ಯಕೀಯ ಆಸ್ಪತ್ರೆ, ನಿರ್ವಹಣೆಯಿಲ್ಲದ ಪ್ರವಾಸಿ ಮಂದಿರ, ಜೇನು ಸಂಸ್ಕರಣಾ ಕೇಂದ್ರ ಹಾಗೂ ಜಿ.ಪಂ. ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾಕ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯವಿದೆ. ದಶಕಗಳ ಹಿಂದೆ ಈ ಬಂಗ್ಲೆ ಮೈದಾನದಲ್ಲಿ ಪೊಲೀಸ್‌ ಪರೇಡ್‌ ಕೂಡ ನಡೆಯುತ್ತಿತ್ತು.

ಧೂಳುಮಯ 
ಈ ಪ್ರದೇಶದಲ್ಲಿ ಸುಮಾರು 75ಕ್ಕೂ ಹೆಚ್ಚು ಮನೆಗಳಿವೆ. ರಸ್ತೆ ತುಂಬಾ ಹದಗೆಟ್ಟಿರುವುದರಿಂದ ರಿಕ್ಷಾ ಚಾಲಕರು ಕೂಡ ಬಾಡಿಗೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ರಸ್ತೆಯು ಮಳೆಗಾಲದಲ್ಲಿ ಸಂಪೂರ್ಣ ಕೆಸರುಮಯವಾಗಿ ಬೇಸಗೆಯಲ್ಲಿ ಧೂಳುಮಯವಾಗಿ ಜನರು ರಸ್ತೆಯಲ್ಲಿ ನಡೆ ದಾಡಲೂ ಪರದಾಡುತ್ತಿದ್ದಾರೆ.  

ನೆನೆಗುದಿಗೆ 
ಕಾಪು ತಾಲೂಕಾಗಿ ಪರಿವರ್ತನೆ ಹೊಂದಿದ ಹಿನ್ನೆಲೆ ಯಲ್ಲಿ  ಬಂಗ್ಲೆ ಮೈದಾನದ ಪ್ರದೇಶದಲ್ಲಿ ಸರಕಾರಿ ಕಚೇರಿಗಳೊಂದಿಗೆ ನಾಡ ಕಚೇರಿಯೂ ಬಂದರೆ  ರಸ್ತೆ ದುರಸ್ತಿಯಾಗುವ ಭರವಸೆ ಪರಿಸರದ ನಾಗರಿಕರಲ್ಲಿತ್ತು. ತಾಲೂಕಾಗಿ ವರ್ಷ ಕಳೆದರೂ ಯಾವುದೇ ಕಚೇರಿಗಳು ಬಂದಿಲ್ಲ.  ಶಿರ್ವ ಗ್ರಾ.ಪಂ. ವ್ಯಾಪ್ತಿಯ ಬಹುತೇಕ ಎಲ್ಲ ಪ್ರದೇಶದ ರಸ್ತೆಗಳು ಡಾಮರೀಕರಣಗೊಂಡರೂ ಅರ್ಧ ಶತಮಾನದ ಇತಿಹಾಸವಿರುವ ಈ ರಸ್ತೆ ಮಾತ್ರ ಡಾಮರು ಕಂಡಿಲ್ಲ.  

ಚುನಾವಣೆ ಬಹಿಷ್ಕಾರ?
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಸ್ತೆ ದುರಸ್ತಿ ಪಡಿಸದಿದ್ದರೆ ಮತದಾರರು ಚುನಾವಣೆ ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದರು. ಕೊನೆ ಗಳಿಗೆಯಲ್ಲಿ ಜನಪ್ರತಿನಿಧಿಗಳ ಆಶ್ವಾಸನೆಯಿಂದ ಅದನ್ನು ಹಿಂತೆಗೆದುಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದರೂ ಅಭಿವೃದ್ಧಿಯಾಗಿಲ್ಲ. ಇದರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸುವುದಾಗಿ ಸ್ಥಳೀಯರಾದ ಡೆನ್ನಿಸ್‌ ಲೋಬೋ ಹೇಳುತ್ತಾರೆ. 

ಶೀಘ್ರ ಡಾಮರು ಕಾಮಗಾರಿಯಾಗಲಿ
ರಸ್ತೆಯು ಧೂಳುಮಯವಾಗಿದ್ದು  ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗುತ್ತದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬಂಗ್ಲೆ ಮೈದಾನದ ಡಾಮರೀಕರಣ ಅಗತ್ಯ ಆಗಬೇಕಿದೆ. 
-ಹರೀಶ್‌ ಆಚಾರ್ಯ, ಸ್ಥಳೀಯ ನಿವಾಸಿ

ಗುಣಮಟ್ಟದ ರಸ್ತೆಗೆ ಪ್ರಯತ್ನ
ಕಾಪು ತಾಲೂಕು ಕೇಂದ್ರವಾದ ಹಿನ್ನೆಲೆಯಲ್ಲಿ ನಾಡ ಕಚೇರಿ ಹಾಗೂ ಸರಕಾರಿ ಕಚೇರಿಗಳು ಈ ಪ್ರದೇಶಕ್ಕೆ ಬರುವ ಪ್ರಸ್ತಾವನೆಯಿದ್ದು ಸರಕಾರದ ಬದಲಾವಣೆಯಿಂದ ವಿಳಂಬಗೊಂಡಿದೆ. ಕ್ರಿಯಾ ಯೋಜನೆಯಲ್ಲಿ ಮೈದಾನ ಅಭಿವೃದ್ಧಿಗೆ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ 5.ಲ.ರೂ ಮೀಸಲಿಡಲಾಗಿದೆ. ಗುಣಮಟ್ಟದ ರಸ್ತೆ ನಿರ್ಮಿಸಲು ಪ್ರಯತ್ನಿಸುತ್ತಿದ್ದೇನೆ.  
-ಸುನೀಲ್‌ ಕಬ್ರಾಲ್‌, ಸ್ಥಳೀಯ ವಾರ್ಡ್‌ ಸದಸ್ಯ

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.