ಮೆಸ್ಕಾಂ 2.93 ಕೋ.ರೂ., ತೋಟಗಾರಿಕೆ 90 ಲ.ರೂ., ಕೃಷಿ 34 ಲ.ರೂ. ಹಾನಿ


Team Udayavani, Jul 20, 2018, 2:50 AM IST

electricity-distribution-900.jpg

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಎರಡು ಬಾರಿ ದೊಡ್ಡ ಮಟ್ಟದಲ್ಲಿ ಮಳೆಹಾನಿ ಸಂಭವಿಸಿದೆ. ಒಂದು ವಾರದ ಹಿಂದೆ ಮತ್ತು ಜೂನ್‌ ತಿಂಗಳಲ್ಲಿ ನಡೆದ ಭಾರೀ ಪ್ರಮಾಣದ ಮಳೆಗೆ ಜಿಲ್ಲೆಯಲ್ಲಿ ಒಟ್ಟು 2.93 ಕೋ.ರೂ. ಮೆಸ್ಕಾಂಗೆ, 90 ಲ.ರೂ. ತೋಟಗಾರಿಕೆ ಬೆಳೆ, 34 ಲ.ರೂ. ಕೃಷಿ ಬೆಳೆ ನಷ್ಟವಾಗಿದೆ. ಮೆಸ್ಕಾಂ ನಷ್ಟದಲ್ಲಿ ಉಡುಪಿ ವಿಭಾಗದ (ಉಡುಪಿ ಮತ್ತು ಕಾರ್ಕಳ ತಾಲೂಕು) ನಷ್ಟ 2.04 ಕೋ.ರೂ., ಕುಂದಾಪುರ ವಿಭಾಗದ (ಕುಂದಾಪುರ ತಾಲೂಕು) 89.4 ಲ.ರೂ. ಉಡುಪಿ ವಿಭಾಗದಲ್ಲಿ 687 ಮತ್ತು ಕುಂದಾಪುರ ವಿಭಾಗದಲ್ಲಿ 408 ಗ್ರಾಮಗಳಲ್ಲಿ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟು 2,485 ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಇದರಲ್ಲಿ ಉಡುಪಿ ವಿಭಾಗದಲ್ಲಿ 1,674, ಕುಂದಾಪುರ ವಿಭಾಗದಲ್ಲಿ 811 ಕಂಬಗಳು ಇವೆ. ಜಿಲ್ಲೆಯಲ್ಲಿ ಒಟ್ಟು 345 ಟ್ರಾನ್ಸ್‌ಫಾರ್ಮರ್‌ ಗಳು ಹಾಳಾಗಿವೆ. ಇದರಲ್ಲಿ ಉಡುಪಿ ವಿಭಾಗದಲ್ಲಿ 246, ಕುಂದಾಪುರ ವಿಭಾಗದಲ್ಲಿ 99 ಟ್ರಾನ್ಸ್‌ಫಾರ್ಮರ್‌ ಗಳು ಇವೆ. 

ಒಟ್ಟು 54.32 ಕಿ.ಮೀ. ಮಾರ್ಗಗಳು (ಉಡುಪಿ ವಿಭಾಗ 38.72 ಕಿ.ಮೀ., ಕುಂದಾಪುರ ವಿಭಾಗ 15.59 ಕಿ.ಮೀ.) ಹಾನಿಗೊಳಗಾಗಿದ್ದು ಇವುಗಳನ್ನೂ ಸರಿಪಡಿಸಲಾಗಿದೆ. ಹಾನಿಗೊಳಗಾದ ಕಂಬಗಳಲ್ಲಿ ಐದು, ಟ್ರಾನ್ಸ್‌ಫಾರ್ಮರ್‌ ಗಳಲ್ಲಿ ಎರಡನ್ನು ಹೊರತುಪಡಿಸಿ ಉಳಿದೆಲ್ಲವನ್ನೂ ದುರಸ್ತಿಪಡಿಸಲಾಗಿದೆ. ಹಿಂದಿನ ವರ್ಷದಲ್ಲಿ ಆದ ಒಟ್ಟು ಹಾನಿ 3.81 ಕೋ.ರೂ. ಇದಕ್ಕೆ ಹೋಲಿಸಿದರೆ ಈ ವರ್ಷ ಇದುವರೆಗೆ ಆದ ಹಾನಿ ಜಾಸ್ತಿ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಸಿದ ಒಟ್ಟು 127 ರೈತರ 18.28 ಹೆಕ್ಟೇರ್‌ ಪ್ರದೇಶಕ್ಕೆ ಹಾನಿಯಾಗಿದೆ. 89.99 ಲಕ್ಷ ರೂ. ನಷ್ಟವಾಗಿದ್ದು 4.19 ಲ.ರೂ. ಪರಿಹಾರ ಪಾವತಿಸಲಾಗಿದೆ. ಉಡುಪಿ ತಾಲೂಕಿನಲ್ಲಿ  ಮೂರು ರೈತರ 0.20 ಹೆ., ಕುಂದಾಪುರ ತಾಲೂಕಿನಲ್ಲಿ 72 ಕೃಷಿಕರ 9.74 ಹೆ., ಕಾರ್ಕಳ ತಾಲೂಕಿನ 52 ರೈತರ 8.30 ಹೆ. ಭೂಮಿಯ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಅತಿ ಹೆಚ್ಚು ಹಾನಿಗೊಳಗಾದ ಬೆಳೆ ಅಡಿಕೆ. ಒಟ್ಟು 13 ಹೆ. ಅಡಿಕೆ ಬೆಳೆ ನಾಶವಾಗಿದೆ. ಅನಂತರ ತೆಂಗು, ಬಾಳೆ, ಗೇರು, ಹಲಸು, ಮಾವು, ಕಾಳು ಮೆಣಸಿನ ಬೆಳೆ ಹಾನಿಗೊಂಡಿವೆ.

ಉಡುಪಿ ಜಿಲ್ಲೆಯಲ್ಲಿ 103 ಕೃಷಿಕರ 49 ಹೆಕ್ಟೇರ್‌ ಪ್ರದೇಶದ ಭತ್ತದ ಕೃಷಿಗೆ ಹಾನಿಯಾಗಿದೆ. ಉಡುಪಿ ತಾಲೂಕಿನ ಐವರು ಕೃಷಿಕರ 27.6 ಹೆ., ಕುಂದಾಪುರ ತಾಲೂಕಿನ 21 ಕೃಷಿಕರ 12 ಹೆ., ಕಾರ್ಕಳ ತಾಲೂಕಿನ 25 ಕೃಷಿಕರ 10 ಹೆ. ಭತ್ತದ ಬೆಳೆ ನಷ್ಟವಾಗಿದೆ. ಬೆಂಬಲ ಬೆಲೆ ಪ್ರಕಾರ ಆದ ಬೆಳೆ ನಷ್ಟ 34.30 ಲ.ರೂ., ಸರಕಾರಿ ನಿಯಮದ ಪ್ರಕಾರ ಹೆಕ್ಟೇರ್‌ ಗೆ 6,800 ರೂ.ನಂತೆ ಒಟ್ಟು 3.33 ಲ.ರೂ. ಪರಿಹಾರ ಧನ ವಿತರಿಸಲಾಗುತ್ತದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.