ಬೈಂದೂರು: ಗಾಳಿ ಮಳೆಗೆ ಭಾರಿ ಹಾನಿ, 5 ಸಾವಿರ ಕೋಳಿ ಸಾವು, ಮನೆಗೆ ನುಗ್ಗಿದ ಗುಡ್ಡದ ನೀರು!
Team Udayavani, Sep 7, 2020, 11:27 AM IST
ಬೈಂದೂರು: ಕಳೆದ ರಾತ್ರಿ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಉಡುಪಿ ಜಿಲ್ಲೆಯ ಬೈಂದೂರು ಪರಿಸರದಲ್ಲಿ ಅಪಾರ ಪ್ರಮಾಣದ ನಷ್ಟವಾಗಿದೆ. ಉಪ್ಪುಂದದಲ್ಲಿ ಮನೆಗೆ ಸಿಡಿಲು ಬಡಿದು ನಷ್ಟವಾಗಿದ್ದರೆ, ಚಕತ್ತಿಲ್ ನಲ್ಲಿ ಕೋಳಿ ಫಾರ್ಮ್ ಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟವಾಗಿದೆ.
ಕಳೆದ ರಾತ್ರಿ ಭಾರಿ ಗಾಳಿ ಮಳೆಯಿಂದ ಚಕತ್ತಿಲ್ ನಲ್ಲಿ ಬಿಜೆ ಬೆನ್ನಿ ಎಂಬವರ ಕೋಳಿ ಫಾರ್ಮ್ ಗೆ ನೀರು ನುಗ್ಗಿದೆ. ಪರಿಣಾಮ ಸುಮಾರು 5 ಸಾವಿ ಕೋಳಿಗಳು ಸಾವನ್ನಪ್ಪಿದೆ ಎಂದು ವರದಿಯಾಗಿದೆ.
ಉಪ್ಪುಂದ ಗಿರಿಜಾ ಮಡವಾಳ ಎಂಬವರ ಮನೆಗೆ ಸಿಡಿಲು ಬಡಿದು ನಷ್ಟ ಸಂಭವಿಸಿದೆ. ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ವಸ್ತುಗಳು ಚೆಲ್ಲಾಪಿಲ್ಲಿಯಾಗಿದೆ. ಘಟನೆಯಲ್ಲಿ ಒಂದು ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಯಳಜಿತ್ ಎಂಬಲ್ಲಿ ದೇವಪ್ಪ ಪೂಜಾರಿ ಎಂಬವರ ಮನೆಗೆ ಗುಡ್ಡದ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಗುಡ್ಡದ ನೀರು ನುಗ್ಗಿದ್ದರಿಂದ ಭತ್ತದ ಬೆಳೆ, ಬಾಳೆ ತೋಟಗಳಿಗೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ