ಕರಾವಳಿ: ಉತ್ತಮ ಮಳೆ; ಗುಡ್ಡ  ಕುಸಿತ, ಮನೆ ಕುಸಿದು ಮಹಿಳೆಗೆ ಗಾಯ


Team Udayavani, Jun 28, 2018, 10:18 AM IST

rain.png

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿ ಗೆದರಿವೆ. ಇನ್ನೆರಡು ದಿನ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಜಿಲ್ಲೆಯ ಅನೇಕ ಕಡೆಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಸುಬ್ರಹ್ಮಣ್ಯ ಪರಿಸರದಲ್ಲಿ ಬೆಳಗ್ಗಿನಿಂದಲೇ ಸುರಿದ ಭಾರೀ ಮಳೆಗೆ ಕುಮಾರಧಾರಾ ನದಿ ತುಂಬಿ ಹರಿದು ನೆರೆಯಿಂದಾಗಿ ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆಗೊಂಡಿದೆ.

ಮಂಗಳೂರು, ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ವೇಣೂರು, ಪುಂಜಾಲಕಟ್ಟೆ, ವಿಟ್ಲ, ಮಡಂತ್ಯಾರು, ಕಿನ್ನಿಗೋಳಿ, ಹಳೆ ಯಂಗಡಿ, ಸುರತ್ಕಲ್‌, ಮೂಲ್ಕಿ, ಉಡುಪಿ, ಮಣಿಪಾಲ, ಕುಂದಾ ಪುರ, ಬೈಂದೂರು, ಕಾಪು, ಪಡುಬಿದ್ರಿ, ಶಿರ್ವ, ಉಪ್ಪುಂದ, ತೆಕ್ಕಟ್ಟೆ ಯಲ್ಲಿ ಉತ್ತಮ ಮಳೆಯಾಗಿದೆ. 

ಬುಧವಾರ ರಾತ್ರಿ ಕೆರೆಬೈಲು ಗುಡ್ಡೆಯಲ್ಲಿ ಮನೆ ಕುಸಿದು ಶಾರದಾ (50) ಗಾಯಗೊಂಡಿದ್ದಾರೆ. ಅವರನ್ನು ದೇರಳಕಟ್ಟೆ ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ ಕುಸಿದು ಪಕ್ಕದ ಸಿರಾಜ್‌ ಅವರ ಮನೆಗೂ ಭಾಗಶಃ ಹಾನಿಯಾಗಿದೆ.

ಭಾರೀ ಗಾಳಿ – ಹಾನಿ
ಬುಧವಾರ ಸಂಜೆ ಭಾರೀ ಗಾಳಿಗೆ ಬೆಳ್ತಂಗಡಿ ತಾಲೂಕಿನ ಹೊಕ್ಕಾಡಿ ಗೋಳಿ
ಬಸ್‌ ತಂಗುದಾಣದ ಛಾವಣಿಯ ಶೀಟ್‌ಗಳು  ಹಾರಿ ಹೋಗಿದ್ದು, ದಿನೇಶ್‌ ಗಾಯಗೊಂಡಿದ್ದಾರೆ. ದ್ವಿಚಕ್ರ ವಾಹನವೊಂದಕ್ಕೆ ಹಾನಿಯಾಗಿದೆ.

ಕುಂದಾಪುರ ರಸ್ತೆಗುರುಳಿದ ಮರ, ವಿದ್ಯುತ್‌ ಕಂಬಗಳು
ಕುಂದಾಪುರ: ತಾಲೂಕಿನೆಲ್ಲೆಡೆ ಬುಧವಾರ ದಿನವಿಡೀ ನಿರಂತರವಾಗಿ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಗಾಳಿ- ಮಳೆಯಿಂದಾಗಿ ಹಾನಿಯಾಗಿದೆ.

ಹಕ್ಲಾಡಿಯಲ್ಲಿ ಬುಧವಾರ ಸಂಜೆ ಮನೆಯೊಂದಕ್ಕೆ ಸಿಡಿಲು ಬಡಿದು ಇಬ್ಬರು ಗಾಯಗೊಂಡಿದ್ದಾರೆ. ನೂಜಾಡಿಯಲ್ಲಿ ಸಿಡಿಲು ಬಡಿದು ಕರುವೊಂದು ಸಾವನ್ನಪ್ಪಿದೆ. ರಾಷ್ಟ್ರೀಯ ಹೆದ್ದಾರಿ 66ರ ವಿನಾಯಕ ಚಿತ್ರಮಂದಿರದ ಬಳಿಯಿಂದ ತ್ರಾಸಿ ವರೆಗೆ ಹಲವು ಕಡೆಗಳ ಹೊಂಡಗಳಲ್ಲಿ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸಿದರು.

ಮರ ಬಿದ್ದು  ಸಂಚಾರ ಸ್ಥಗಿತ
ಕುಂದಾಪುರ – ಶಿವಮೊಗ್ಗ ರಾಜ್ಯ ಹೆದ್ದಾರಿಯ ಬಸ್ರೂರ್  ಸಮೀಪದ ಪಾನಕದಕಟ್ಟೆ ಬಳಿ ಭಾರೀ ಗಾಳಿ-ಮಳೆ ಯಿಂದಾಗಿ ಬುಧವಾರ ಸಂಜೆ ಬೃಹತ್‌ ಗಾತ್ರದ ಮರವೊಂದು ರಸ್ತೆಗೆ ಬಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು. ಇದರಿಂದ ಕೆಲ ಕಾಲ ವಾಹನಗಳ ದಟ್ಟಣೆಯಾಯಿತು. ಸ್ಥಳೀಯರು ಸೇರಿ, ಮರದ ಗೆಲ್ಲುಗಳನ್ನು ತೆರವು ಮಾಡಿದ ಬಳಿಕ ಸಂಚಾರ ಪ್ರಾರಂಭಗೊಂಡಿತು.

ಧರೆಗುರುಳಿದ ವಿದ್ಯುತ್‌ ಕಂಬಗಳು
ಕೋಟೇಶ್ವರ – ಶಿವಮೊಗ್ಗ ರಾಜ್ಯ ಹೆದ್ದಾರಿಯ ಸಳ್ವಾಡಿಯಲ್ಲಿ 6- 7 ವಿದ್ಯುತ್‌ ಕಂಬಗಳು ಮುರಿದು ಬಿದ್ದು, ವಿದ್ಯುತ್‌ ತಂತಿಗಳು ನೆಲದಲ್ಲಿ ಜೋತು ಬಿದ್ದಿವೆ. ಅಲ್ಲೇ ಸಮೀಪ ಗಾಳಿ ಮರ ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಮನೆ ಮೇಲೆ ಬಿದ್ದ ಮರ
ಶಂಕರನಾರಾಯಣ ಗ್ರಾಮದ ಮೋಹನ ಕೊರಗ ಅವರ ಮನೆ ಮೇಲೆ ಮರ ಬಿದ್ದು, 10 ಸಾವಿರ ರೂ. ನಷ್ಟ ಉಂಟಾಗಿದೆ.
 ಮುಖ್ಯರಸ್ತೆ ಜಲಾವೃತ
ಗಂಗೊಳ್ಳಿ ಪೇಟೆಯ ಮುಖ್ಯ ರಸ್ತೆ ಹಾಗೂ ಮ್ಯಾಂಗನೀಸ್‌ ರಸ್ತೆಯಲ್ಲಿ ಮಳೆ ನೀರು ಹರಿಯಲು ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ನೀರೆಲ್ಲ ರಸ್ತೆಯಲ್ಲೇ ಹರಿದು ಹೊಳೆ ಸದೃಶ ವಾತಾವರಣ ಸೃಷ್ಟಿಯಾಗಿತ್ತು. ವಿದ್ಯಾರ್ಥಿಗಳು, ವಾಹನ ಸವಾರರು ತೊಂದರೆ ಅನುಭವಿಸಿದರು.

ಸಿಡಿಲು ಬಡಿದು ಗಾಯ
ಹಕ್ಲಾಡಿ ಗ್ರಾ.ಪಂ. ವ್ಯಾಪ್ತಿಯ ಹೊಳ್ಮಗೆ ನಿವಾಸಿ ಗುರುವ ಪೂಜಾರಿ ಅವರ ಮನೆಗೆ ಬುಧವಾರ ಸಂಜೆ ಸಿಡಿಲು ಬಡಿದು ಮನೆಯ ವಿದ್ಯುತ್‌ ಪರಿಕರಗಳೆಲ್ಲ ಸುಟ್ಟು ಕರಕಲಾಗಿದ್ದು, ಮನೆಯ ಗೋಡೆ ಬಿರುಕುಬಿಟ್ಟಿದೆ. ಸಿಡಿಲಿನ ಆಘಾತದಿಂದ ಗುರುವ ಅವರ ಪತ್ನಿ ಹಾಗೂ ಪುತ್ರಿಗೆ ಗಾಯವಾಗಿದೆ. ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬಂಟ್ವಾಳ: ಗುಡ್ಡ  ಕುಸಿತ; 16 ಮನೆಗಳಿಗೆ ನುಗ್ಗಿದ ನೀರು
ಬಂಟ್ವಾಳ: ಭಾರೀ ಮಳೆಯಿಂದಾಗಿ ಬಿ. ಮೂಡ ಗ್ರಾಮದ ಅಗ್ರಾರ್‌ ನೇರಂಬೋಲುನ‌ಲ್ಲಿ ಗುಡ್ಡ ಕುಸಿದು ರಸ್ತೆಯ ಒಂದು ಪಾರ್ಶ್ವದಲ್ಲಿ ಮಣ್ಣು ರಾಶಿಯಾಗಿದ್ದು ಮರಗಳು ಅಡ್ಡಬಿದ್ದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಆಗಿದೆ. ಲೊರೆಟ್ಟೊ ಕಮಾಲ್‌ ಕಟ್ಟೆಯಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದು ಸ್ಥಳೀಯರು ಮಣ್ಣು , ಮರವನ್ನು ತೆರವು ಮಾಡಿದ್ದಾರೆ.
ಭಂಡಾರಿಬೆಟ್ಟು ತಗ್ಗು ಪ್ರದೇಶದ ವಸತಿ ಸಮುಚ್ಚಯದ 16 ಮನೆಗಳಿಗೆ ನೀರು ನುಗ್ಗಿದ್ದು  ಮಾಹಿತಿ ಪಡೆದ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ ಮತ್ತು ಸದಸ್ಯರು ಅಗ್ನಿಶಾಮಕ ದಳದ ನೆರವು ಪಡೆದು, ಜೆಸಿಬಿ ಬಳಸಿ ತೋಡು ಮಾಡುವ ಮೂಲಕ ಅದನ್ನು ತೆರವು ಮಾಡಿದ್ದಾಗಿ ತಿಳಿಸಿದ್ದಾರೆ. ನೇತ್ರಾವತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು 6 ಮೀಟರ್‌ ನಲ್ಲಿ ಹರಿಯುತ್ತಿದೆ. ಇಲ್ಲಿ 9 ಮೀಟರ್‌ ಅಪಾಯ ಮಟ್ಟವಾಗಿದೆ.

ಭಾರೀ ಮಳೆಯ ಕಾರಣ ಯಾವುದೇ ಅಪಾಯ ಸಂದರ್ಭ ಎದುರಾದರೆ ಪರಿಹಾರ ಕ್ರಮಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಂಪರ್ಕದಲ್ಲಿ ಇರುವಂತೆ ಸೂಚನೆ ನೀಡಿದ್ದಾಗಿ ತಹಶೀಲ್ದಾರ್‌ ಕಚೇರಿ ಮಾಹಿತಿ ತಿಳಿಸಿದೆ.

ಶೆಡ್‌ಗಳಿಗೆ ಹಾನಿ: ಕೊಡ್ಮಣ್‌ ಗ್ರಾಮದ ಕೊಟ್ಟಿಂಜದಲ್ಲಿ ಭಾರೀ ಮಳೆಗೆ ಜೂ. 27ರಂದು ಗುಡ್ಡದ ಮಣ್ಣು ಜರಿದು ವಾಸ್ತವ್ಯ ರಹಿತ ಮೂರು ಶೆಡ್‌ಗಳು ಧ್ವಂಸವಾಗಿವೆ. ಅಮ್ಮೆಮಾರ್‌ – ಮಲ್ಲೂರು ರಸ್ತೆ ಸಂಚಾರಕ್ಕೆ ಇದರಿಂದ ಸ್ವಲ್ಪ ಹೊತ್ತು ಅಡಚಣೆ ಉಂಟಾಗಿತ್ತು. ಗ್ರಾ.ಪಂ.ನಿಂದ ಜೆಸಿಬಿ ಬಳಸಿ ರಸ್ತೆಗೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಮೂಲಕ ಸಂಚಾರ ಅಡಚಣೆ ನಿವಾರಿಸಲಾಗಿದೆ.

ಕೊಲ್ಲೂರಿನಲ್ಲಿ  ಭಾರೀ ಮಳೆ
ಕೊಲ್ಲೂರು: ಕೊಲ್ಲೂರಿನಲ್ಲಿ ಬುಧವಾರ ಭಾರೀ ಮಳೆಯಾಗಿದ್ದು , ಸೌಪರ್ಣಿಕಾ ಹಾಗೂ ಕಾಶಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಜಡ್ಕಲ್‌, ಮುದೂರು ಸಹಿತ ವಂಡ್ಸೆ ಆಸುಪಾಸಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಕಡೆ ಕೃಷಿ ಭೂಮಿ ಜಲಾವೃತಗೊಂಡಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.