ಮಳೆ ಬಿರುಸು: ನೆರೆ ಭೀತಿ…ಮತ್ತಷ್ಟು ಹದಗೆಟ್ಟ ರಸ್ತೆಗಳು
Team Udayavani, Aug 14, 2018, 6:00 AM IST
ಉಡುಪಿ: ಉಡುಪಿ ನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ರವಿವಾರ ಸಂಜೆಯಿಂದ ಉತ್ತಮ ಮಳೆಯಾಗಿದ್ದು ಸೋಮವಾರವೂ ಮಧ್ಯಾಹ್ನದವರೆಗೆ ಆಗಾಗ್ಗೆ ಉತ್ತಮ ಮಳೆಯಾಯಿತು. ಮಧ್ಯಾಹ್ನದ ಅನಂತರ ನಿರಂತರ ಮಳೆ ಸುರಿಯಿತು. ಪರಿಣಾಮವಾಗಿ ಮೂಡನಿಡಂಬೂರು, ನಿಟ್ಟೂರು, ಮಠದಬೆಟ್ಟು, ಬೈಲಕೆರೆ ಮೊದಲಾದೆಡೆ ಮಳೆನೀರು ಹರಿಯುವ ತೋಡುಗಳು ಭರ್ತಿಯಾಗಿ ಹರಿಯುತ್ತಿದ್ದು ನೀರು ತೋಡಿನಿಂದ ವಸತಿ ಪ್ರದೇಶಗಳಿಗೆ ನುಗ್ಗುವ ಆತಂಕ ಉಂಟಾಗಿದೆ.
ಮೂಡನಿಡಂಬೂರು ಗರೋಡಿ ಆವರಣಕ್ಕೆ ನೀರು ನುಗ್ಗಿದೆ. ಮೂಡನಿಡಂಬೂರು-ನಿಟ್ಟೂರು ರಸ್ತೆಯಲ್ಲಿಯೂ ನೀರು ಆವರಿಸಿತ್ತು. ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕಲ್ಸಂಕ ತೋಡು ತುಂಬಿ ಹರಿಯುತ್ತಿದ್ದು ಮತ್ತಷ್ಟು ಮಳೆಯಾದರೆ ಉಕ್ಕಿ ಹರಿಯುವ ಭೀತಿ ಇದೆ.
ಸಂಚಾರ ಸಂಚಕಾರ
ಉಡುಪಿ ನಗರದ ಹಳೆ ಡಯಾನ ಸರ್ಕಲ್, ಬನ್ನಂಜೆ-ಬ್ರಹ್ಮಗಿರಿ ರಸ್ತೆಗಳು, ಮಣಿಪಾಲದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ಮತ್ತಷ್ಟು ಹೆಚ್ಚಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ವಿದ್ಯುತ್ ವ್ಯತ್ಯಯ
ರವಿವಾರ ರಾತ್ರಿ ಬಲವಾದ ಗಾಳಿ ಬೀಸಿದ ಪರಿಣಾಮ ಉಡುಪಿ ಪರಿಸರದಲ್ಲಿ 4 ವಿದ್ಯುತ್ ಕಂಬಗಳಿಗೆ ಹಾನಿಯಾಗಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಿತ್ತು. ಉಡುಪಿ ಅಬಕಾರಿ ಭವನ ಮತ್ತು ಮಲ್ಪೆಯಲ್ಲಿ ಮರ ಬಿದ್ದು ವಿದ್ಯುತ್ ವ್ಯತ್ಯಯವಾಗಿತ್ತು. ಸೋಮವಾರ ಬಹುತೇಕ ವಿದ್ಯುತ್ ಸಂಪರ್ಕವನ್ನು ಸರಿಪಡಿಸಲಾಗಿದೆ.
ಕಾಲೇಜುಗಳಿಗೂ ರಜೆ
ಶಾಲೆ, ಪ.ಪೂ.ಕಾಲೇಜುಗಳಿಗೆ ಸೋಮವಾರ ರಜೆ ಎಂಬುದಾಗಿ ರವಿವಾರದಂದೆ ಜಿಲ್ಲಾಧಿಕಾರಿಯವರು ಘೋಷಿಸಿದ್ದರು. ಸೋಮವಾರ ನಗರದ ಹಲವು ಪದವಿ ಕಾಲೇಜುಗಳು ಕೂಡ ರಜೆ ಸಾರಿದವು. ಸೋಮವಾರದ ಮಳೆ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು