ಮೃಗಶಿರಾ ಮಳೆಯ ಆರ್ಭಟ : ಕುಂಜೂರು ಬೈಲ್ ನಲ್ಲಿ ನೆರೆ
Team Udayavani, Jun 20, 2021, 11:24 AM IST
ಕಾಪು: ಕರಾವಳಿಯಲ್ಲಿ ಮೃಗಶಿರಾ ಮಳೆಯ ಆರ್ಭಟ ತೀವ್ರಗೊಂಡಿದ್ದು, ವಿವಿಧೆಡೆ ನೆರೆಯ ಭೀತಿ ಎದುರಾಗಿದೆ.
ಶನಿವಾರ ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗುಪ್ರದೇಶಗಳೆಲ್ಲಾ ಜಲಾವೃತಗೊಂಡಿವೆ. ನೆರೆ ನೀರು ರಭಸವಾಗಿ ಹರಿದು ಬರುತ್ತಿದ್ದು ಭತ್ತದ ಗದ್ದೆಗಳು ಸಂಪೂರ್ಣ ಮುಳುಗಿ ಬಿಟ್ಟಿವೆ.
ಕಾಪು ತಾಲ್ಲೂಕಿನ ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಮುಂಭಾಗದ ಬೈಲು ಪ್ರದೇಶವು ಸಂಪೂರ್ಣ ನೆರೆ ನೀರಿನಿಂದಾವೃತಗೊಂಡಿದ್ದು, ದೇವಸ್ಥಾನದ ಅಂಗಣಕ್ಕೆ ನೀರು ಹರಿಯುತ್ತಿದೆ.
ಇದನ್ನೂ ಓದಿ: ತೀರ್ಥಹಳ್ಳಿ: ಅಪ್ರಾಪ್ತೆ ಮದುವೆಯಾಗಿ ಅತ್ಯಾಚಾರ! : ಯುವಕ ಅಂದರ್
ಕಾಪು ತಾಲೂಕಿನ ಬೆಳಪು, ಅದಮಾರು, ಎರ್ಮಾಳು, ಮಜೂರು, ಕುತ್ಯಾರು, ಇನ್ನಂಜೆ ಸಹಿತ ವಿವಿಧೆಡೆಗಳಲ್ಲಿನ ಹೊಳೆ ತೀರದಲ್ಲಿ ಬರುವ ತಗ್ಗು ಪ್ರದೇಶಗಳಲ್ಲಿ ಮತ್ತು ಬೈಲು ಪ್ರದೇಶಗಳಲ್ಲಿ ಮತ್ತಷ್ಟು ನೆರೆಯ ಭೀತಿ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…