ಮೂಳೂರು: 40 ಮನೆಗಳಿಗೆ ಕೃತಕ ನೆರೆ ನೀರು


Team Udayavani, Jun 24, 2018, 6:00 AM IST

ss-38.jpg

ಕಾಪು: ಮೂರ್‍ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶುಕ್ರವಾರ ರಾತ್ರಿ ಮೂಳೂರು ಮಹಾಲಕ್ಷ್ಮೀ ನಗರ ಕಾಲನಿಯ 35 -40 ಮನೆಗಳ ಒಳಗೆ ಕೃತಕ ನೆರೆ ನೀರು ನುಗ್ಗಿದೆ.

ಕಾಪು ಪುರಸಭೆ ವ್ಯಾಪ್ತಿಯ ಮೂಳೂರು ಮಹಾಲಕ್ಷ್ಮೀ ನಗರ ಪಕ್ಕದಲ್ಲಿ ಹಲವು ಹೊಂಡಗಳನ್ನು ತೋಡಿ ಗ್ಲಾಸ್‌ ಹೊಗೆ (ಮರಳು) ತೆಗೆಯಲಾಗಿದ್ದು, ಹೊಂಡಗಳನ್ನು ಮುಚ್ಚದ ಕಾರಣ ಮಳೆ ನೀರು ಸಂಗ್ರಹಗೊಳ್ಳುತ್ತಿದೆ. ಚರಂಡಿಗಳು ಇಲ್ಲದೆ ಕೃತಕ ನೆರೆಯಾಗಿ ತಗ್ಗು ಪ್ರದೇಶ ದಲ್ಲಿರುವ ಕಾಲನಿಯ ಮನೆಗಳತ್ತ ನುಗ್ಗಿ ಭೀತಿ ಮೂಡಿಸುತ್ತದೆ. ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳೂ ಇವೆ. ಹಲವು ವರ್ಷಗಳಿಂದ ಈ ಹೊಂಡಗಳಿದ್ದರೂ ನೀರು ಹರಿಯಲು ವ್ಯವಸ್ಥೆ ಇದ್ದ ಕಾರಣ  ಸಮಸ್ಯೆಯಾಗಿರಲಿಲ್ಲ. ಈಗ ಕಾಲನಿಯ ಹೊರಭಾಗದಲ್ಲಿ ವಸತಿ ಹೆಚ್ಚುತ್ತಿದ್ದು, ನೀರು ಹರಿಯುವ ದಾರಿಗಳೆಲ್ಲ ಬಂದ್‌ ಆಗಿವೆ. ಇನ್ನೂ ಎರಡು ದಿನ ಮಳೆ ಸುರಿದರೆ ಕುಡಿಯುವ ನೀರಿಗೂ ತೊಂದರೆಯಾಗುವ ಸಾಧ್ಯತೆಗಳಿವೆ ಎನ್ನುತ್ತಾರೆ ಕಾಲನಿ ನಿವಾಸಿಗಳು.

ಸ್ಪಂದನೆಯೇ ಇಲ್ಲ
ಕಾಲನಿಯ ಸರಕಾರಿ ಭೂಮಿಯಲ್ಲಿ ಮನೆ ಕಟ್ಟಿ ವಾಸಿಸುತ್ತಿರುವವರ ಬದುಕು ದುಸ್ತರವಾಗಿದೆ. ಕೃತಕ ನೆರೆಯಿಂದಾಗಿ ಪ್ರತೀ ವರ್ಷ ಮನೆಗಳು ಜಲಾವೃತಗೊಳ್ಳುತ್ತಿವೆ. ದೂರು ಕೊಟ್ಟರೂ ಯಾರೂ ಸ್ಪಂದಿಸಿಲ್ಲ. ಕಾಲನಿ ಅಭಿವೃದ್ಧಿಗಾಗಿ ಬಿಡುಗಡೆಗೊಳ್ಳುತ್ತಿರುವ ಸರಕಾರದ ಅನುದಾನವೂ ಪೋಲಾಗುತ್ತಿದೆ ಎಂದು ಪ್ರಭಾತ್‌ ಶೆಟ್ಟಿ ಆರೋಪಿಸಿದ್ದಾರೆ.

ಮುಖ್ಯಾಧಿಕಾರಿ ಭೇಟಿ
ಕಾಲನಿ ನಿವಾಸಿಗಳ ದೂರಿನ ಹಿನ್ನೆಲೆಯಲ್ಲಿ ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಶನಿವಾರ ಭೇಟಿ ಕೊಟ್ಟು, ಜಮೀನು ಮಾಲಕರ ಜತೆ ಚರ್ಚಿಸಿದರು. ತಾತ್ಕಾಲಿಕವಾಗಿ ನೀರಿಗೆ ದಾರಿ ಮಾಡಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ.

ಭಯದಲ್ಲೇ ಜೀವನ
35 ವರ್ಷಗಳಿಂದ 45 ಕುಟುಂಬದ ವರು ಇಲ್ಲಿ ವಾಸಿಸುತ್ತಿದ್ದೇವೆ. ಮಳೆಗಾಲದಲ್ಲಿ ಭಯದಲ್ಲೇ ದಿನ ಕಳೆಯುತ್ತಿದ್ದೇವೆ. ಹೊಗೆ ತೆಗೆದ ಗುಂಡಿ ಮುಚ್ಚಿಲ್ಲ. ಗುಂಡಿಗೆ ಮಗು ಬಿದ್ದು ಮೃತಪಟ್ಟ ಮೇಲೆ ನಾವು ಮಕ್ಕಳ ಬಗ್ಗೆ ತುಂಬಾ ಎಚ್ಚರ ವಹಿಸುತ್ತಿದ್ದೇವೆ.
ಲಕ್ಷ್ಮೀ ಬಂಗೇರ, ಕಾಲನಿ ನಿವಾಸಿ

ತಾತ್ಕಾಲಿಕ ಪರಿಹಾರ
ಪುರಸಭೆಯ ಮೂರನೇ ವಾರ್ಡ್‌ನ ಮಹಾಲಕ್ಷ್ಮೀ ನಗರ ಕಾಲನಿಯ ಜನತೆ ಪ್ರತೀ ಮಳೆಗಾಲದಲ್ಲೂ ಕೃತಕ ನೆರೆಯ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಖಾಸಗಿ ಜಮೀನುದಾರರು ನೀರು ಹರಿದು ಹೋಗಲು ಪೂರಕ ವ್ಯವಸ್ಥೆ ಮಾಡಿಕೊಟ್ಟಿದ್ದರೂ ಶಾಶ್ವತ ಪರಿಹಾರ ಆಗಿಲ್ಲ. ಸ್ಥಳೀಯರು, ಖಾಸಗಿ ಜಮೀನುದಾರರು ಮತ್ತು ಪುರಸಭೆ ಅಧಿಕಾರಿಗಳ ತುರ್ತು ಸಭೆ ನಡೆಸಲಾಗಿದ್ದು, ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಗಿದೆ.
ಶಾಂಭವಿ ಕುಲಾಲ್‌, ಪುರಸಭಾ ಸದಸ್ಯೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.