ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ
Team Udayavani, Jul 6, 2022, 1:38 AM IST
ಉಡುಪಿ: ಜಿಲ್ಲಾದ್ಯಂತ ಸೋಮವಾರ ರಾತ್ರಿಯಿಂದ ಮಂಗಳವಾರ ನಿರಂತರ ಮಳೆ ಸುರಿದಿದೆ. ಕುಂದಾಪುರ, ಕಾರ್ಕಳ, ಉಡುಪಿ, ಕಾಪು, ಬ್ರಹ್ಮಾವರ, ಹೆಬ್ರಿ ಭಾಗದಲ್ಲಿ ಬೆಳಗ್ಗೆ ಮತ್ತು ಸಂಜೆ ಅವಧಿಯಲ್ಲಿ ಭಾರೀ ಮಳೆ ಸುರಿದಿದೆ. ಕಡಲು ಕೊರೆತ ತೀವ್ರಗೊಂಡಿದೆ. ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಉಡುಪಿ ನಗರ ಭಾಗದ ಬನ್ನಂಜೆ ಗರಡಿ ರಸ್ತೆಯಲ್ಲಿ 30ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿತ್ತು.
ವಿವಿಧೆಡೆ ವಿದ್ಯುತ್ ಕಂಬಗಳು, ಟ್ರಾನ್ಸಾಫಾರ್ಮರ್, ತಂತಿಗಳಿಗೆ ಹಾನಿ ಉಂಟಾಗಿದ್ದು ಒಟ್ಟು 68.69 ಲ.ರೂ. ನಷ್ಟವಾಗಿದೆ. 24 ಟ್ರಾನ್ಸ್ಫಾರ್ಮರ್, 248 ಕಂಬಗಳು, 5.98 ಮೀಟರ್ ತಂತಿಗಳಿಗೆ ಹಾನಿಯಾಗಿದೆ.
ಮಾಹಿತಿ ನೀಡಲು ಸೂಚನೆ: ಟ್ರಾನ್ಸ್ಫಾರ್ಮರ್ ಬಿದ್ದಾಗ, ದುರಸ್ತಿಗೆ ಸಾಕಷ್ಟು ಸಮಯ ಬೇಕಾಗುತ್ತದೆ. ಉಳಿದಂತೆ ತಂತಿಗಳು, ಕಂಬಗಳಿಗೆ ಹಾನಿ ಯಾದಾಗ 2 ಗಂಟೆಯೊಳಗೆ ದುರಸ್ತಿ ಮಾಡಲಾಗುತ್ತದೆ ಎಂದು ಮೆಸ್ಕಾಂ ಎಂಜಿನಿಯರ್ ತಿಳಿಸಿದ್ದಾರೆ. ದೀರ್ಘಾವಧಿ ವಿದ್ಯುತ್ ಕಡಿತ ಅಥವಾ ವಿದ್ಯುತ್ ಕಂಬಗಳಲ್ಲಿ ತೊಂದರೆ ಇದ್ದಾಗಲೂ ಸಮಸ್ಯೆ ಉದ್ಭವಿಸುತ್ತದೆ. ಟೋಲ್ ಫ್ರೀ ಸಂಖ್ಯೆ 1912ಗೆ ಕರೆ ಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರ್ಕಳದಲ್ಲಿ 3 ಗಂಟೆ ಟ್ರಾಫಿಕ್ ಜಾಮ್
ಪರ್ಕಳ ರಾಷ್ಟ್ರೀಯ ಹೆದ್ದಾರಿಯ ಕೆಳ ಪರ್ಕಳ ತಿರುವಿನಲ್ಲಿ ಮಗುಚಿ ಬಿದ್ದ ಕಂಟೈನರ್ ಲಾರಿಯನ್ನು ಮೇಲೆತ್ತಲು ಹರಸಹಾಸ ಪಡಬೇಕಾಯಿತು. ಸತತ ಪ್ರಯತ್ನಗಳ ಹೊರತಾಗಿಯೂ ಕಂಟೈನರನ್ನು ಮೇಲಕ್ಕೆ ಎತ್ತಲು ಸಾಧ್ಯವಾಗಿಲ್ಲ. ಪರಿಣಾಮ 3 ಗಂಟೆ ಟ್ರಾಫಿಕ್ ಜಾಮ್ನಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಅನಂತರ 80ಬಡಗಬೆಟ್ಟು ಇಂಡಸ್ಟ್ರಿಯಲ್ ಏರಿಯಾ ಮೂಲಕ ಮಣಿಪಾಲ ಉಡುಪಿ ಕಡೆಗೆ ವಾಹನಗಳು ಸಂಚರಿಸಿದವು. ಕಂಟೈನರ್ ಮೇಲಕ್ಕೆತ್ತುವ ಕಾರ್ಯಾಚರಣೆ ಬುಧವಾರ ನಡೆಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ