ಧಾರಾಕಾರ ಮಳೆ: ತಗ್ಗು ಪ್ರದೇಶಗಳಲ್ಲಿ ನೀರು


Team Udayavani, May 20, 2022, 11:26 AM IST

udupi1

ಉಡುಪಿ: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಹಲವಾರು ಭಾಗ ಜಲಾವೃತಗೊಂಡು ಕೃತಕ ನೆರೆ ಸೃಷ್ಟಿಯಾಗಿದೆ. ಕಾಪು ವ್ಯಾಪ್ತಿಯಲ್ಲಿ ಅತ್ಯಧಿಕ ಮಳೆ ಸುರಿದಿದೆ.

ಬುಧವಾರ ತಡರಾತ್ರಿ ಗುರುವಾರ ಇಡೀ ದಿನ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿದಿದೆ. ತಗ್ಗು ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಗುರುವಾರ ಬೆಳಗ್ಗೆ 8.30ರ ಹಿಂದೆ 24 ತಾಸುಗಳಲ್ಲಿ ಉಡುಪಿ – 48.6, ಬ್ರಹ್ಮಾವರ – 26.5, ಕಾಪು – 57.1 ಮಿ. ಮೀ. ಸರಾಸರಿ ಮಳೆಯಾಗಿದೆ. ಕಾಪು ತಾಲೂಕಿನ ಪಲಿಮಾರು ಗ್ರಾಮದ ಪುರುಷೋತ್ತಮ ಆಚಾರ್ಯರ ಮನೆಯ ಗೋಡೆಗೆ ಭಾಗಶಃ ಹಾನಿ ಸಂಭವಿಸಿದೆ.

ಉಡುಪಿ ನಗರ ವ್ಯಾಪ್ತಿಯಲ್ಲಿ ಮಲ್ಪೆ, ಬೈಲಕೆರೆ, ಮಠದಬೆಟ್ಟು, ಬನ್ನಂಜೆ, ನಿಟ್ಟೂರು, ಗುಂಡಿಬೈಲು, ಕಲ್ಮಾಡಿ, ಅಂಬಲಪಾಡಿ ಭಾಗದಲ್ಲಿ ಗದ್ದೆ ಪ್ರದೇಶಗಳಲ್ಲಿ ನೀರು ತುಂಬಿಕೊಂಡಿತ್ತು. ಉಡುಪಿ, ಮಣಿಪಾಲ, ಮಲ್ಪೆ ಪೇಟೆಯಲ್ಲಿ ಚರಂಡಿ ಭರ್ತಿಯಾಗಿ ರಸ್ತೆ, ಅಂಗಡಿ ಮುಂಭಾಗದ ರಸ್ತೆ ಮೇಲೆ ಮಳೆ ನೀರು ಹರಿಯಿತು. ಕರಾವಳಿ ಬೈಪಾಸ್‌ನಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೀರ ಅಡಚಣೆ ಉಂಟಾಯಿತು. ಚರಂಡಿಯಿಂದ ಉಕ್ಕೇರಿದ ಮಳೆ ನೀರು ಸರ್ವಿಸ್‌ ರೋಡ್‌ ಮತ್ತು ಫ್ಲೈಓವರ್‌ ಕೆಳಗೆ ಸಾಕಷ್ಟು ಪ್ರಮಾಣದಲ್ಲಿ ಕೃತಕ ನೆರೆಯಂತೆ ಸೃಷ್ಟಿಯಾಗಿ ಅವಾಂತರ ಸೃಷ್ಟಿಯಾಯಿತು.

ಟ್ರಾಫಿಕ್‌ ಜಾಮ್‌

ನಿರಂತರ ಮಳೆಯಿಂದ ನಗರದ ಹಲವೆಡೆ ಟ್ರಾಫಿಕ್‌ ಜಾಮ್‌ ಸಂಭವಿಸಿದ್ದು, ಕೆಎಂ ಮಾರ್ಗ, ಕಲ್ಸಂಕ ವೃತ್ತ ದಲ್ಲಿ ಸಂಚಾರ ದಟ್ಟಣೆಯನ್ನು ಪೊಲೀಸರು ನಿಯಂತ್ರಿಸಿ ದರು. ಉಡುಪಿ ಮೆಸ್ಕಾಂ ಡಿವಿಜನ್‌ನಲ್ಲಿ ಹಲವೆಡೆ ವಿದ್ಯುತ್‌ ಸಂಪರ್ಕ ಕೆಲ ಸಮಯ ಕೈಕೊಟ್ಟಿತು. 9 ವಿದ್ಯುತ್‌ ಕಂಬಗಳು, ಎರಡು ಟಿಸಿಗೆ ಹಾನಿಯಾಗಿದ್ದು, ಮೆಸ್ಕಾಂ ಸಿಬಂದಿ ತುರ್ತು ಕಾಮಗಾರಿ ಕೈಗೊಂಡರು.

ರಸ್ತೆಗಳೆಲ್ಲ ಕೆಸರುಮಯ

ವಾರಾಹಿ ಮತ್ತು ಒಳಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ ಪೈಪ್‌ಲೈನ್‌ ತೋಡಿರುವ ಗುಂಡಿಯನ್ನು ತೋಡಿ ಮುಚ್ಚಿದ ಕಡೆ ರಸ್ತೆ ಕೆಸರುಮಯವಾಗಿತ್ತು. ಇದಕ್ಕೆ ಡಾಮರು ಕಾಮಗಾರಿ ನಡೆಸದೆ ಇದ್ದದ್ದು ಕಾರಣವಾಗಿದೆ. ಗುಂಡಿಬೈಲು, ಉಡುಪಿ-ಮಣಿಪಾಲ ಮುಖ್ಯ ರಸ್ತೆಗಳ ಬದಿಯಲ್ಲಿ ಕೆಸರು ನೀರು ಹರಿಯುತ್ತಿತ್ತು. ವಾಹನ ಸವಾರರು, ಪಾದಚಾರಿಗಳು ಇದರಿಂದ ಪರಿತಪಿಸುವಂತಾಯಿತು.

ಗುಂಡಿಬೈಲು: ಪೈಪ್‌ ಒಡೆದು ಅವಾಂತರ

ವಾರಾಹಿ, ಒಳಚರಂಡಿ ಕುಡಿಯುವ ನೀರು ಕಾಮಗಾರಿ ನಡೆಸಿದ್ದ ಜಾಗದಲ್ಲಿ (ಗುಂಡಿಬೈಲು) ದೊಡ್ಡಮಟ್ಟದಲ್ಲಿ ನೀರು ಹರಿದಿದ್ದು, ಸ್ಥಳೀಯರಿಗೆ ಸಮಸ್ಯೆಯಾಗಿ ಪರಿಣಮಿಸಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ವಾರಾಹಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ಹಾನಿಯಾಗಿ ದೊಡ್ಡಮಟ್ಟದಲ್ಲಿ ನೀರು ಸೋರಿಕೆಯಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದರು. ಸ್ಥಳಕ್ಕೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಡಿ. ಶೆಟ್ಟಿ, ಸದಸ್ಯೆ ಗೀತಾ ಶೇಟ್‌ ಭೇಟಿ ನೀಡಿ ಪರಿಶೀಲಿಸಿದರು. ಮಣ್ಣನ್ನು ಅಗೆದು ತುರ್ತು ಕಾಮಗಾರಿ ನಡೆಸಿ ಸಂಜೆಯೊಳಗೆ ದುರಸ್ತಿಪಡಿಸಲಾಯಿತು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.