ಧಾರಾಕಾರ ಮಳೆ: ಕೃಷಿ ಚಟುವಟಿಕೆ ಸ್ಥಗಿತ; ಉಕ್ಕಿ ಹರಿಯುತ್ತಿರುವ ನದಿಗಳು
Team Udayavani, Jun 15, 2018, 6:50 AM IST
ಅಜೆಕಾರು: ಪಶ್ಚಿಮ ಘಟ್ಟ ಭಾಗದಲ್ಲಿ ಜೂ.13ರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿ ಹಳ್ಳಕೊಳ್ಳಗಳು ತುಂಬಿ ಮಳೆಯ ನೀರು ಕೃಷಿ ಭೂಮಿಗೆ ನುಗ್ಗಿದೆ.
ಪಶ್ಚಿಮ ಘಟ್ಟದ ತಪ್ಪಲಿನ ಗ್ರಾಮಗಳಾದ ಮಾಳ, ಕೆರ್ವಾಶೆ, ಶಿರ್ಲಾಲು, ಅಂಡಾರು, ಮುಟ್ಲುಪಾಡಿ ಗ್ರಾಮಗಳ ರೈತರ ಕೃಷಿ ಭೂಮಿ ನೆರೆಯಿಂದ ಆವೃತವಾಗಿದೆ.
ಮನೆಗೆ ನುಗ್ಗಿದ ನೀರು
ಗ್ರಾಮೀಣ ಭಾಗದಲ್ಲಿ ಭಾರೀ ಮಳೆಗೆ ಕೃಷಿ ಭೂಮಿಗೆ ನೀರು ನುಗ್ಗಿದರೆ ಪಟ್ಟಣ ಪ್ರದೇಶಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಮನೆಗೆ ನುಗ್ಗಿದೆ.
ಮರ್ಣೆ ಪಂ. ವ್ಯಾಪ್ತಿಯ ಅಜೆಕಾರು ಪೇಟೆಯ ಲತಾ ಟೆಲ್ಲಿಸ್ರವರ ಮನೆಗೆ ಚರಂಡಿಯ ನೀರು ನುಗ್ಗಿ ಆತಂಕ ಸೃಷ್ಟಿಯಾಗಿತ್ತು. ಚರಂಡಿಯಲ್ಲಿ ಕಸ ತ್ಯಾಜ್ಯ ತುಂಬಿರುವುದರಿಂದ ಭಾರೀ ಮಳೆಗೆ ನೀರು ಚರಂಡಿಯ ಮೇಲೆ ಬಂದು ಮನೆಯೊಳಗೆ ನುಗ್ಗಿದೆ.
ವಿಷಯ ಗಮನಕ್ಕೆ ಬರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಅಧ್ಯಕ್ಷ ದಿನೇಶ್ ಕುಮಾರ್ ಅಧಿಕಾರಿಗಳ ಗಮನಕ್ಕೆ ತಂದು ಚರಂಡಿಯಲ್ಲಿ ಸರಾಗವಾಗಿ ನೀರು ಹರಿಯುವಂತೆ ವ್ಯವಸ್ಥೆ ಮಾಡಿ ಮನೆಗೆ ನೀರು ನುಗ್ಗದಂತೆ ಕ್ರಮ ಕೈಗೊಂಡಿದ್ದಾರೆ.
ತುಂಬಿ ಹರಿದ ಸುವರ್ಣಾ ನದಿ
ಎಣ್ಣೆಹೊಳೆ ಮೂಲಕ ಹಾದು ಹೋಗುವ ಸುವರ್ಣಾ ನದಿಯು ತುಂಬಿ ಹರಿದಿದ್ದು ನದಿ ಪಾತ್ರದ ಕೃಷಿ ಭೂಮಿ, ತೋಟ ಜಲಾವೃತಗೊಂಡಿದೆ. ಎಣ್ಣೆಹೊಳೆ ಪೇಟೆಯ ಬಸ್ ನಿಲ್ದಾಣದವರೆಗೂ ನೀರು ತುಂಬಿ ಅಪಾಯಕಾರಿಯಾಗಿ ನದಿಯಲ್ಲಿ ನೀರು ಹರಿದಿದೆ.
ಗದ್ದೆಗಳಿಗೆ, ಅಡಿಕೆ, ಬಾಳೆ ತೋಟಗಳಿಗೆ ನೀರು ನುಗ್ಗಿ ಹಾನಿ
ನದಿಗಳು ತುಂಬಿ ಹರಿಯುತ್ತಿದ್ದು, ಈ ನದಿಗಳ ನೀರು ಅಕ್ಕಪಕ್ಕದ ಗದ್ದೆಗಳಿಗೆ ಹಾಗೂ ಅಡಿಕೆ, ಬಾಳೆ ತೋಟಗಳಿಗೆ ನುಗ್ಗಿ ಹಾನಿ ಉಂಟಾಗಿದೆ. ಮಳೆಯ ನೀರಿನ ಸೆಳೆತಕ್ಕೆ ಭತ್ತದ ಗದ್ದೆಗಳ ಅಂಚು ಕೊಚ್ಚಿಕೊಂಡು ಹೋಗಿದ್ದರೆ ಅಡಿಕೆ ತೋಟಕ್ಕೆ ಹಾಕಿದ ಹಸಿರೆಲೆ ಗೊಬ್ಬರ ನೀರು ಪಾಲಾಗಿದೆ. ಭತ್ತದ ಗದ್ದೆಗಳಲ್ಲಿ ನೀರು ತುಂಬಿ ಬೃಹತ್ ನದಿಯಂತೆ ಭಾಸವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ