ಕರಾವಳಿಯಲ್ಲಿ ಕೋಳಿ ಮಾಂಸ, ಮೊಟ್ಟೆ ದರದಲ್ಲಿ ಭಾರೀ ಇಳಿಕೆ


Team Udayavani, Jul 25, 2022, 8:20 AM IST

thumb chicken gfGFhh

ಕಾಪು: ಕರಾವಳಿಯಲ್ಲಿ 10 ದಿನಗಳ ಹಿಂದೆ ಗಗನಕ್ಕೇರಿದ್ದ ಕೋಳಿ ಮಾಂಸದ ದರ ತೀವ್ರ ಕುಸಿತ ಕಂಡಿದೆ. ಮೊಟ್ಟೆ ಬೆಲೆಯೂ ಇಳಿದಿದ್ದು ಮಾಂಸ ಪ್ರಿಯರು ಢಬಲ್‌ ಧಮಾಕದ ಖುಷಿ ಪಡುವಂತಾಗಿದೆ.

10 ದಿನಗಳ ಹಿಂದೆ ಮಾರುಕಟ್ಟೆಯಲ್ಲಿ ಬ್ರಾಯ್ಲರ್‌ ಕೋಳಿ ಮಾಂಸ ಸ್ಕಿನ್‌ಲೆಸ್‌ ಕೆಜಿಗೆ 240 ರೂ. ಇತ್ತು. ವಿತ್‌ಸ್ಕಿನ್‌ ಕೆ.ಜಿ.ಗೆ 220 ರೂ. ಹಾಗೂ ಜೀವಂತ ಕೋಳಿ 180 ರೂ. ವರೆಗೆ ಇತ್ತು. ಜು. 24ರಂದು ಸ್ಕಿನ್‌ಲೆಸ್‌ ಕೆಜಿಗೆ 155 ರೂ. ಇದ್ದರೆ ವಿತ್‌ಸ್ಕಿನ್‌ 135 ರೂ. ಆಸುಪಾಸಿನಲ್ಲಿದೆ. ಜೀವಂತ ಕೋಳಿ ಕೆಜಿಗೆ 105 ರೂ. ವರೆಗೆ ಕುಸಿದಿದೆ. 6.50 ರೂ.ಗೆ ಮಾರಾಟವಾಗುತ್ತಿದ್ದ ಮೊಟ್ಟೆ ಮೊಟ್ಟೆಯ ದರವೂ ಇಳಿದಿದ್ದು 5.50 ರೂ.ಗೆ ಇಳಿದಿದೆ. ವಾರದಲ್ಲಿ ಮತ್ತಷ್ಟು ಕುಸಿಯುವ ಸಾಧ್ಯತೆಗಳಿವೆ.

ಇಳಿಕೆಗೆ ಕಾರಣವೇನು?:

ಬೇಸಗೆಯಲ್ಲಿ ಮದುವೆ, ಕೋಲ, ತಂಬಿಲ ಸಹಿತ ಶುಭ ಕಾರ್ಯಗಳ ಸಂದರ್ಭ ಕೋಳಿ ಮಾಂಸಕ್ಕೆ ಬೇಡಿಕೆ ಹೆಚ್ಚಿರುವ ಕಾರಣ ದರವೂ ವಿಪರೀತ ಏರಿಕೆೆಯಾಗುತ್ತದೆ. ಮಳೆಗಾಲ ಆರಂಭಗೊಂಡು ಆಷಾಢ ಬರುತ್ತಿದ್ದಂತೆಯೇ ದರ ಇಳಿಯುವುದು ಸಾಮಾನ್ಯ. ಮುಂದೆ ಶ್ರಾವಣ ಮಾಸ ಬರುವುದರಿಂದ ಇಡೀ ರಾಜ್ಯದಲ್ಲಿ ಕೋಳಿಯ ದರ ಕಡಿಮೆಯಾಗುತ್ತದೆ. ಈಗ ಮಾರುಕಟ್ಟೆಯಲ್ಲಿ ತಾಜಾ ಮೀನು ಕೂಡ ಸಿಗುತ್ತಿರುವುದರಿಂದ ಕೋಳಿ ಮಾಂಸಕ್ಕೆ ಬೇಡಿಕೆ ಕಡಿಮೆ. ದರ ಏರಿಕೆಗೆ ಡಿಸೆಂಬರ್‌ ವರೆಗೆ ಕಾಯಬೇಕು ಎನ್ನುತ್ತಾರೆ ಕೋಳಿ ವ್ಯಾಪಾರಿಗಳು.

ಹೊರ ಜಿಲ್ಲೆಗಳಿಂದ ಪೂರೈಕೆ :

ಕೋಳಿ ಮತ್ತು ಕೋಳಿ ಮಾಂಸಕ್ಕೆ ಬೆಂಗಳೂರು, ಮೈಸೂರು, ಕರಾವಳಿ ಜಿಲ್ಲೆಯಲ್ಲಿ ಭಾರೀ ಬೇಡಿಕೆ. ಉಡುಪಿ ಜಿಲ್ಲೆಯ ಬೇಡಿಕೆಯ ಬಹುಪಾಲು ಹುಬ್ಬಳ್ಳಿ, ಹಾಸನ, ಬೆಂಗಳೂರು, ತಮಿಳುನಾಡು, ದಾವಣಗೆರೆ ಜಿಲ್ಲೆಗಳಿಂದ ಪೂರೈಕೆಯಾಗುತ್ತದೆ.

ಸಣ್ಣ ವ್ಯಾಪಾರಿಗಳಿಗೆ ನಷ್ಟ:

ಮಾರುಕಟ್ಟೆಯಲ್ಲಿ ಕೋಳಿ ಮಾಂಸಕ್ಕೆ ಬೇಡಿಕೆ ಕಡಿಮೆಯಾದಾಗ ಬೆಲೆ ಇಳಿಸುತ್ತಾರೆ. ಬೇಡಿಕೆ ಹೆಚ್ಚಾದಾಗ ಬೆಲೆ ಹೆಚ್ಚಿಸುತ್ತಾರೆ. ಮಾಂಸ ಮತ್ತು ಮೊಟ್ಟೆಯ ದರ ಪ್ರತೀ ದಿನ ಬದಲಾಗುತ್ತಿರುತ್ತದೆ. ಕೆಲವೊಮ್ಮೆ ಕೋಳಿ ದರ ವಿಪರೀತ ಇಳಿದಾಗ ಅದು ನಮ್ಮಂತಹ ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟವನ್ನುಂಟು ಮಾಡುತ್ತದೆ ಎನ್ನುತ್ತಾರೆ ಕಾಪು ಸಂತೆ ಮಾರ್ಕೆಟ್‌ನ ಕೋಳಿ ವ್ಯಾಪಾರಿ ಆಶ್ರಿತ್‌ ಶೆಟ್ಟಿ.

ನಷ್ಟದಲ್ಲಿ ಕುಕ್ಕುಟೋದ್ಯಮ :

ಕೋಳಿ ಸಾಕಾಣಿಕೆಗೆ ಪ್ರತೀ ಕೆಜಿಗೆ 100 ರೂ.ಗೂ ಅಧಿಕ ವೆಚ್ಚ ತಗಲುತ್ತದೆ. ಕೋಳಿ ಆಹಾರದ ಬೆಲೆಯೂ ಹೆಚ್ಚಾಗಿರುವುದಲ್ಲದೆ ಅದರ ತಯಾರಿಗೆ ಬಳಸುವ ಕಚ್ಚಾ ಪದಾರ್ಥಗಳಾದ ಮೆಕ್ಕೆ ಜೋಳ, ಸೋಯಾ, ಅಕ್ಕಿ ಎಣ್ಣೆ ಬೆಲೆಯೂ ಹೆಚ್ಚಾಗಿರುವ ಕಾರಣ ನಿರ್ವಹಣ ವೆಚ್ಚ ಹೆಚ್ಚಾಗುತ್ತಿದೆ. ಪ್ರಸ್ತುತ ನಷ್ಟದಲ್ಲೇ ಕುಕ್ಕಟೋದ್ಯಮ ನಡೆಸುವಂತಾಗಿದೆ ಎನ್ನುತ್ತಾರೆ ಕುರ್ಕಾಲು ಅರುಣ್‌ ಪೌಲಿó ಫಾರಂನ ಅರುಣ್‌ ಕೋಟ್ಯಾನ್‌.

ಕಿನ್ನಿಗೋಳಿ: ಕೋಳಿ ಮಾರಾಟ  ಅಂಗಡಿಯಲ್ಲಿ ದರ ಸಮರ! :

ಕಿನ್ನಿಗೋಳಿ: ಜಿಲ್ಲೆಯಾದ್ಯಂತ ಹಲವು ಮಳಿಗೆಯನ್ನು ಹೊಂದಿರುವ ಖಾಸಗಿ ಕೋಳಿ ಮಾರಾಟ ಮಳಿಗೆಯವರು ಕಿನ್ನಿಗೋಳಿಯಲ್ಲಿ ಗ್ರಾಹರಿಗೆ ಆಫರ್‌ ನೀಡಿರುವುದರಿಂದ ಗ್ರಾಹಕರು ಸರತಿಯಲ್ಲಿ ನಿಲ್ಲುವಂತಾಗಿದೆ!

ಕಳೆದ ಗುರುವಾರ ಮತ್ತು ಶುಕ್ರವಾರ ಕೆಜಿಗೆ 99 ರೂ. ಮತ್ತು ಶನಿವಾರ ಮತ್ತು ರವಿವಾರ 110 ರೂ.ಗೆ ಕೋಳಿ ಮಾರಾಟವಾಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಈ ಮಳಿಗೆಯವರು ಹರಿಯಬಿಟ್ಟ ಕಾರಣ   (ಮಾರುಕಟ್ಟೆ ದರ ಕೆಜಿಗೆ ಸುಮಾರು 130 ರೂ.) ಗ್ರಾಹಕರು ಅಲ್ಲಿ ಮುಗಿಬಿದ್ದರು. ಇದಕ್ಕೆ ಪ್ರತಿಯಾಗಿ ಸ್ಥಳೀಯ ಕೋಳಿ ಮಾಂಸದ ಮಳಿಗೆಯವರು ಸಭೆ ನಡೆಸಿ 95 ರೂ.ಗೆ ಕೋಳಿ ಮಾರಾಟ ಮಾಡಲು ನಿರ್ಧರಿಸಿ, 99 ರೂ.ಗೆ ಮಾರಾಟ ಮಾಡುವ ಮಳಿಗೆಗೆ ಸ್ಪರ್ಧೆ ನೀಡಿದರು.

ಪರಿಣಾಮವಾಗಿ 3 ದಿನಗಳಿಂದ ಕಿನ್ನಿಗೋಳಿಯ ಎಲ್ಲ ಕೋಳಿ ಮಾರಾಟ ಮಳಿಗೆಗಳಿಗೆ ಗ್ರಾಹಕರು ಮುಗಿಬೀಳುತ್ತಿದ್ದಾರೆ. ಇದರಿಂದ ಗ್ರಾಹಕರಿಗೆ ಲಾಭವಾಗಿರುವುದು ಹೌದು; ಆದರೆ ಲಾಭಕ್ಕಿಂತ ನಷ್ಟವೇ ಜಾಸ್ತಿಯಾಗಿರುವುದರಿಂದ ಹೆಚ್ಚು ದಿನ ನಡೆಯದು ಎಂದು ಕೋಳಿ ಮಾರಾಟ ಮಳಿಗೆಯವರು  ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.