ಅಮೃತ ಮಹೋತ್ಸವದ ನೆನಪಿಗೆ ಅಮೃತ ನಿವಾಸ 


Team Udayavani, Aug 12, 2022, 7:40 AM IST

ಅಮೃತ ಮಹೋತ್ಸವದ ನೆನಪಿಗೆ ಅಮೃತ ನಿವಾಸ 

ಹೆಬ್ರಿ: ನಾಡ್ಪಾಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೆಂಗಮಾರಿನಲ್ಲಿ 50 ವರ್ಷಗಳಿಂದ ಗುಡಿಸಲಿನಲ್ಲಿ ವಾಸವಾಗಿದ್ದ ನಾರಾಯಣ ಗೌಡ ಅವರಿಗೆ ಹೆಬ್ರಿಯ ಎಎನ್‌ಎಫ್‌ ತಂಡದವರು ಶ್ರಮದಾನ ಜತೆಗೆ ತಾವು ದೇಣಿಗೆಯಾಗಿ ಸಂಗ್ರಹಿ ಸಿದ ಹಣದಿಂದ ಮನೆ ನಿರ್ಮಿಸಿಕೊಟ್ಟು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕೇವಲ ನಾಲ್ಕು ದಿನಗಳಲ್ಲಿ ನಕ್ಸಲ್‌ ನಿಗ್ರಹ ಪಡೆಯ ಸಿಬಂದಿ ಸುಮಾರು 55 ಸಾವಿರ ರೂ.ಗಳನ್ನು ಸಂಗ್ರಹಿಸಿದ್ದಲ್ಲದೆ ಸ್ವತಃ ಶ್ರಮದಾನದ ಮೂಲಕ ಮನೆ ನಿರ್ಮಿಸಿಕೊಟ್ಟಿದ್ದಾರೆ. ಮನೆಗೆ ಬೇಕಾದ ಎಲ್ಲ ಪರಿಕರಗಳನ್ನು ಒದಗಿಸಿದ್ದಾರೆ. ಆ. 11ರಂದು ಕಾರ್ಕಳ ಎಎನ್‌ಎಫ್‌ ಅಧೀಕ್ಷಕ ಪ್ರಕಾಶ್‌ ಅವರು ಸುಮಾರು 2 ಕಿ.ಮೀ. ನಡೆದು ತೆರಳಿ ನಾರಾಯಣ ಗೌಡ ಅವರಿಗೆ ಹೊಸ ಬಟ್ಟೆ ನೀಡುವ ಮೂಲಕ ಮನೆಯನ್ನು ಹಸ್ತಾಂತರಿಸಿದರು.

ಹೆಬ್ರಿ ಠಾಣಾಧಿಕಾರಿ ಸುದರ್ಶನ್‌ ದೊಡ್ಮನಿ, ಎಎನ್‌ಎಫ್‌ ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.

ಅಮೃತ ನಿವಾಸ’:

ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಗ್ರಾಮೀಣ ಪ್ರದೇಶವಾದ ತೆಂಕಮಾರಿನ ರಸ್ತೆ ಮತ್ತು ಮೂಲ ಸೌಲಭ್ಯಗಳಿಲ್ಲದ ಪ್ರದೇಶದಲ್ಲಿ ನಿರ್ಮಿಸಿಕೊಟ್ಟ ಈ ಮನೆಗೆ “ಅಮೃತ ನಿವಾಸ’ ಎಂದು ಹೆಸರಿಡಲಾಗಿದೆ. ಎಎನ್‌ಎಫ್‌ ಸಿಬಂದಿ ಸೇರಿ ಮನೆಗೆ ಬೇಕಾದ ಪಾತ್ರೆಗಳು, ಬಟ್ಟೆಬರೆ ಮತ್ತು ಮನೆ ನಿರ್ಮಾಣಕ್ಕೆ ಸಹಕರಿಸಿದ ಸ್ಥಳೀಯರಿಗೆ ಹೊಸ ವಸ್ತ್ರ ನೀಡುವ ಮೂಲಕ ಅಮೃತ ನಿವಾಸವನ್ನು ಹಸ್ತಾಂತರಿಸಲಾಯಿತು. ಅಲ್ಲದೆ ಮನೆ ಮನೆಯಲ್ಲಿ ತಿರಂಗಾ ಕಾರ್ಯಕ್ರಮದ ಅಂಗವಾಗಿ ಧ್ವಜವನ್ನು ನೀಡಿ ಮನೆಯಲ್ಲಿ ಹಾರಿಸುವಂತೆ ಎಎನ್‌ಎಫ್ ಸಿಬಂದಿ ಸೂಚನೆ ನೀಡಿದರು.

ಮಾನವೀಯತೆ ಮೆರೆದ ಎಎನ್‌ಎಫ್‌ ತಂಡ:

50 ವರ್ಷಗಳಿಂದ ಮನೆಯಿಲ್ಲದೆ, ಸರಕಾರ ಮತ್ತು ಪಂಚಾಯತ್‌ನ ಯಾವುದೇ ಸೌಲಭ್ಯಗಳಿಂದ ವಂಚಿತವಾಗಿ ವಾಸವಾಗಿದ್ದ ಸುಮಾರು 73 ವರ್ಷ ವಯಸ್ಸಿನ ನಾರಾಯಣ ಗೌಡ ಅವರ ಪರಿಸ್ಥಿತಿಯನ್ನು ಗಮನಿಸಿದ ಎಎನ್‌ಎಫ್‌ ತಂಡದ ಮುಖ್ಯಸ್ಥ ಸತೀಶ್‌ ಅವರ ಮಾರ್ಗದರ್ಶನದಲ್ಲಿ ರಾಘವೇಂದ್ರ ಮತ್ತು ಗಣಪತಿ ಅವರು ತಮ್ಮ ತಂಡದೊಂದಿಗೆ ಭೇಟಿ ನೀಡಿ, ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ.

ರಸ್ತೆಯಿಲ್ಲ:

ಗ್ರಾಮೀಣ ಪ್ರದೇಶವಾದ ತೆಂಗಮಾರಿಗೆ ಸರಿಯಾದ ರಸ್ತೆ ಇಲ್ಲ. ಸುಮಾರು 2 ಕಿ.ಮೀ. ನಡೆದೇ ಸಾಗಬೇಕು. ಎಎನ್‌ಎಫ್‌ ತಂಡ ಮನೆಗೆ ಬೇಕಾಗುವ ಸಾಮಗ್ರಿಗಳನ್ನು ತಲೆಹೊರೆ ಯಲ್ಲಿ ಹೊತ್ತೂಯ್ದು ಸ್ಥಳೀಯರ ನೆರವಿನೊಂದಿಗೆ ತಾವೇ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

20 ಸಾವಿರ ರೂ. ಬಹುಮಾನ ಘೋಷಣೆ:

ಹೆಬ್ರಿ ಎಎನ್‌ಎಫ್‌ ತಂಡದ ಈ ಕಾರ್ಯವನ್ನು ಮೆಚ್ಚಿ ಎಎನ್‌ಎಫ್‌ ಪೊಲೀಸ್‌ ಅಧೀಕ್ಷಕ ಪ್ರಕಾಶ್‌ ಇಲಾಖೆಯಿಂದ 20 ಸಾವಿರ ರೂ. ಬಹುಮಾನ ಘೋಷಿಸಿದ್ದಾರೆ.

 

-ಹೆಬ್ರಿ ಉದಯಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.