ಹೆಬ್ರಿ ಸರಕಾರಿ ಹಾಸ್ಟೆಲ್ಗೆ ಸ್ಥಳೀಯಾಡಳಿತ ದಿಢೀರ್ ಭೇಟಿ
Team Udayavani, Sep 17, 2019, 5:11 AM IST
ಹೆಬ್ರಿ: ಆಶ್ರಮ ಶಾಲೆ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಯ ಆಗರ ಎಂಬ ಆರೋಪದ ಹಿನ್ನೆಲೆಯಲ್ಲಿ ಸೆ. 15ರ ರಾತ್ರಿ ಸ್ಥಳೀಯಾಡಳಿತ ಹಾಗೂ ತಾ.ಪಂ. ಸದಸ್ಯರು ದಿಢೀರ್ ಭೇಟಿ ನೀಡಿ ಸಿಬಂದಿ ಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಆಶ್ರಮ ಶಾಲೆಯಲ್ಲಿ ಬೇರೆ ಬೇರೆ ಜಿಲ್ಲೆಯ ಸುಮಾರು 56 ವಿದ್ಯಾರ್ಥಿಗಳಿದ್ದು ಮೂಲ ಸೌಲಭ್ಯಗಳ ಕೊರತೆ ಇದೆ. ಶೌಚಾಲಯ ನಿರ್ವಹಣೆ ಇಲ್ಲದೆ ದುರ್ನಾತ ಬೀರುತ್ತಿದ್ದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ವಿದ್ಯಾರ್ಥಿಗಳು ಸ್ಥಳೀಯಾಡಳಿತದವರಲ್ಲಿ ಈ ಸಂದರ್ಭ ದೂರಿದ್ದಾರೆ.
ಸರಕಾರಿ ಹಾಸ್ಟೆಲ್ನಲ್ಲಿ ಯಾವುದೇ ಮೂಲ ಸೌಲಭ್ಯವಿಲ್ಲದೆ ಮಕ್ಕಳ ಅವಸ್ಥೆ ಯನ್ನು ಗಮನಿಸಿದ ಸ್ಥಳೀಯಾಡಳಿತದ ಅಧಿಕಾರಿಗಳು ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದರು.
ಸಮಸ್ಯೆಯ ಗಂಭೀರತೆಯನ್ನು ಅರಿತ ತಾಲೂಕು ಸಮಾಜ ಕಲ್ಯಾಣಾಧಿಕಾರಿ ವಿಜಯಕುಮಾರ್ ರಾತ್ರಿ 9 ಗಂಟೆ ಹೊತ್ತಿಗೆ ಆಗಮಿಸಿ ಅವ್ಯವಸ್ಥೆಯ ಬಗ್ಗೆ ಸಿಬಂದಿಯನ್ನು ತರಾಟೆಗೆ ತೆಗೆದುಕೊಂಡು ಅವರ ಮೇಲೆ ಕ್ರಮ ಜರಗಿಸುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ