ಕುಚ್ಚಾರು: ಭಾರೀ ಸುಂಟರಗಾಳಿಗೆ ಅಪಾರ ಹಾನಿ


Team Udayavani, Sep 9, 2019, 5:40 AM IST

suntara-gali

ಹೆಬ್ರಿ: ಹೆಬ್ರಿ ಸಮೀಪದ ಕುಚ್ಚಾರು-ಬೇಳಂಜೆ ಪರಿಸರದಲ್ಲಿ ಸೆ. 8ರ ಮುಂಜಾನೆ 7 ಗಂಟೆ ಸುಮಾರಿಗೆ ಬೀಸಿದ ಸುಂಟರಗಾಳಿಗೆ ಕುಚ್ಚಾರು ಗ್ರಾಮದ ಸುಮಾರು 19 ಮನೆಗಳಿಗೆ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ.

ಕುಚ್ಚಾರು ಗ್ರಾ.ಪಂ. ವ್ಯಾಪ್ತಿಯ ಚಿಣ್ಣರಕಟ್ಟೆ, ಬೀದಿಬೆಟ್ಟು, ಮಂಡೊಳ್ಳಿ, ಹೆರ್ಜೆಡ್ಡು ಪರಿಸರದಲ್ಲಿ ಮನೆಗಳ ಹೆಂಚು ಹಾರಿಹೋಗಿದ್ದು ಯಾವುದೇ ಜೀವ ಹಾನಿಯಾಗಿಲ್ಲ. ಈ ಭಾಗದಲ್ಲಿ ಸುಮಾರು 15 ಜನರ ಅಡಿಕೆ, ತೆಂಗು ತೋಟಗಳಿಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ. ಬೃಹತ್‌ ಮರಗಳು ಧರೆಗುರುಳಿ 25ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ತುಂಡಾಗಿ ಸುಮಾರು 5 ಲಕ್ಷ ರೂ. ನಷ್ಟ ಸಂಭವಿಸಿದೆ.

19ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಬೇಳಂಜೆ ಕೆರೆಮನೆ ತಮ್ಮು ನಾಯ್ಕ ಅವರ ಮನೆಗೆ ಸಂಪೂರ್ಣ ಹಾನಿಯಾಗಿದ್ದು ಸುಮಾರು 5 ಲಕ್ಷ ರೂ. ನಷ್ಟ ಸಂಭವಿಸಿದೆ. ಬೇಳಂಜೆ ದೇವಸ್ಥಾನಬೆಟ್ಟು ಮೀನಕ್ಕ ಮರಕಾಲ್ತಿ, ಲಲಿತಾ ಮರಕಾಲ್ತಿ, ಜಯಲಕ್ಷ್ಮೀ, ನಾಗು ನಾಯ್ಕ, ಸೀತಾ ಮರಕಾಲ್ತಿ, ಪೂರ್ಣಿಮಾ ಸೇರ್ವೆಗಾರ್‌, ವಿಮಲಾ, ಸುಶೀಲಾ, ರತ್ನಾ, ಪದ್ದು ಪೂಜಾರ್ತಿ, ಮೃದುಲಾ, ಭುಜಂಗ ಶೆಟ್ಟಿ, ಗುಲಾಬಿ ಶೆಟ್ಟಿ ಅವರ ಮನೆಗಳು ಭಾಗಶಃ ಹಾನಿಯಾಗಿವೆ. ಬೀದಿಬೆಟ್ಟು ಪರಿಸರದ ರಾಮ ನಾಯ್ಕ, ಪುರುಷ ನಾಯ್ಕ, ಲಕ್ಷ್ಮಣ್‌ ನಾಯ್ಕ, ಸುಬ್ರಾಯ ನಾಯ್ಕ ಅವರ ಅಡಿಕೆ ತೋಟಗಳು ಹಾನಿಗೊಳಗಾಗಿವೆ.

ಮೆಸ್ಕಾಂಗೆ ಅಪಾರ ನಷ್ಟ

ಕುಚ್ಚಾರು ಬೇಳಂಜೆ ಪರಿಸರದಲ್ಲಿ ಎಚ್ಟಿ ಲೈನ್‌ನ 12 ಕಂಬಗಳು, ಎಲ್.ಟಿ. ಲೈನ್‌ನ 20 ಕಂಬಗಳು ಸೇರಿದಂತೆ 32 ಕಂಬಗಳಿಗೆ ಹಾನಿಯಾಗಿದ್ದು ಸುಮಾರು 5 ಲಕ್ಷ ರೂ. ನಷ್ಟ ಸಂಭವಿಸಿದೆ. ಸುಮಾರು 2 ದಿನಗಳ ಕಾಲ ವಿದ್ಯುತ್‌ ದುರಸ್ತಿಗೆ ಸಮಯ ತೆಗೆದುಕೊಳ್ಳಬಹುದಾಗಿದ್ದು ಈ ಭಾಗದಲ್ಲಿ ಕರೆಂಟ್ ಸಮಸ್ಯೆ ಎದುರಾಗಿದೆ. ರವಿವಾರವಾದ್ದರಿಂದ ದುರಸ್ತಿ ಕೆಲಸ ಕಷ್ಟವಾಗಿದ್ದು ಎರಡು ದಿನಗಳಲ್ಲಿ ವಿದ್ಯುತ್‌ ಸಮಸ್ಯೆ ಬಗೆಹರಿಯಲಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಜನಪ್ರತಿನಿಧಿಗಳು ಭೇಟಿ

ಹಾನಿಗೊಂಡ ಪ್ರದೇಶಗಳಿಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್‌, ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್‌, ತಾ.ಪಂ. ಸದಸ್ಯ ಅಮೃತಕುಮಾರ್‌ ಶೆಟ್ಟಿ, ಕುಚ್ಚಾರು ಗ್ರಾ.ಪಂ. ಅಧ್ಯಕ್ಷ ರಾಮಣ್ಣ ಪೂಜಾರಿ, ಕಂದಾಯ ನಿರೀಕ್ಷಕ ಮಂಜುನಾಥ ನಾಯಕ್‌, ಹೆಬ್ರಿ ಠಾಣಾಧಿಕಾರಿ ಮಹಾಬಲ ಶೆಟ್ಟಿ, ಮೆಸ್ಕಾಂ ಶಾಖಾಧಿಕಾರಿ ಲಕ್ಷ್ಮೀಶ್‌, ಗ್ರಾಮ ಲೆಕ್ಕಿಗ ಹಿತೇಶ್‌, ಪಿಡಿಒ ಆನಂದಕುಮಾರ್‌ ಬಿ.ಕೆ. ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಾರೀ ಗಾಳಿಗೆ ಬೇಳಂಜೆಯಲ್ಲಿ ಬೃಹತ್‌ ಮರ ರಸ್ತೆಗೆ ಬಿದ್ದು ಕೆಲವು ಗಂಟೆಗಳ ಕಾಲ ಬೇಳಂಜೆ-ಆರ್ಡಿ ರಸ್ತೆ ಸಂಪರ್ಕ ಕಡಿತಗೊಂಡು ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು. ಬೆಳ್ವೆ, ಆರ್ಡಿ ಭಾಗದವರು ಸೋಮೇಶ್ವರ ಮೂಲಕ ಹೆಬ್ರಿಗೆ ಪ್ರಯಾಣಿಸಿದರು. ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಹಾಯದಿಂದ ಮರಗಳ ತೆರವುಕಾರ್ಯ ನಡೆಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.