ಹೆಬ್ರಿ ತಾ| ಆಡಳಿತ ಕಟ್ಟಡ ಲೋಕಾರ್ಪಣೆಗೆ ಸಿದ್ಧ


Team Udayavani, May 26, 2022, 10:52 AM IST

hebri

ಹೆಬ್ರಿ: ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ನೂತನವಾಗಿ ರಚನೆಯಾದ ಹೆಬ್ರಿ ತಾಲೂಕಿನಲ್ಲಿ ಸುಮಾರು 10 ಕೋಟಿ ರೂ. ವೆಚ್ಚದ ತಾಲೂಕು ಆಡಳಿತ ಕಟ್ಟಡ ನಿರ್ಮಾಣಗೊಂಡಿದ್ದು ಲೋಕಾರ್ಪಣೆಗೆ ಸಿದ್ಧಗೊಂಡಿದೆ.

ಹೆಬ್ರಿ ಉಡುಪಿ ಮುಖ್ಯ ರಸ್ತೆಗೆ ತಾಗಿಕೊಂಡು ಕಾಲೇಜು ಆವರಣದ ಒಳಗೆ ಅತ್ಯಾಕರ್ಷಕವಾಗಿ ನಿರ್ಮಾಣಗೊಂಡ ಎರಡು ಮಹಡಿಯ ತಾಲೂಕು ಆಡಳಿತ ಕಟ್ಟಡ ಜೂ.1ರಂದು ಸಿಎಂ ಬೊಮ್ಮಾಯಿ ಅವರಿಂದ ಉದ್ಘಾಟನೆಗೊಳ್ಳಲಿದ್ದು ಸುಮಾರು 5 ಸಾವಿರಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆಯಿದೆ.

ಹೆಬ್ರಿ ತಾಲೂಕು ರಚನೆಯಾಗಿ ಸುಮಾರು 5 ವರ್ಷ ಕಳೆದಿದ್ದು ಇದುವರೆಗೆ ಹೆಬ್ರಿಯ ಸಮುದಾಯ ಆರೋಗ್ಯ ಕೇಂದ್ರದ ಹಳೆ ಕಟ್ಟದಲ್ಲಿ ತಾಲೂಕು ಕಚೇರಿ ನಿರ್ವಹಿಸುತ್ತಿದ್ದು ಜೂ.1ರಿಂದ ನೂತನ ಕಟ್ಟಡಕ್ಕೆ ವರ್ಗಾವಣೆಗೊಳ್ಳಲಿದೆ. ಕಂದಾಯ ಇಲಾಖೆ, ಉಪ ನೋಂದಾಣಾಧಿಕಾರಿಗಳ ಕಚೇರಿ, ಭೂ ದಾಖಲೆಗಳ ಸಹಾಯಕ ಕಚೇರಿ, ಉಪ ಖಜಾನೆ ಸೇರಿದಂತೆ ಒಟ್ಟು 4 ಇಲಾಖೆಗಳು ಈ ನೂತನ ಕಟ್ಟಡದ ಒಳಗೆ ಬರಲಿದೆ.

ಯಾವ ಯಾವ ವಿಭಾಗಗಳಿವೆ?

ನೆಲಮಹಡಿಯಲ್ಲಿ ಉಪ ಖಜಾನೆಯ ಭದ್ರತಾ ಸಿಬಂದಿಯ ಕೊಠಡಿ, ಉಪ ಖಜಾನಾಧಿಕಾರಿಗಳ ಕಾರ್ಯಾಲಯ, ಕೊಠಡಿ. ತಹಶೀಲ್ದಾರ್‌, ತಾ| ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನ್ಯಾಯಾಲಯದ ಸಭಾಂಗಣ ಮತ್ತು ವೀಡಿಯೋ ಕಾನ್ಫರೆನ್ಸ್‌ ಹಾಲ್‌, ತಹಶೀಲ್ದಾರ್‌ ಅವರ ಕೊಠಡಿ, ತಹಶೀಲ್ದಾರ್‌ ಅವರ ಕಾರ್ಯಾಲಯದ ಸಿಬಂದಿ ಶಾಖೆಯ ಕೊಠಡಿ,ಅಭಿಲೇಖಾಲಯ, ಚುನಾವಣ ಶಾಖೆಯ ಭದ್ರತಾ ಕೊಠಡಿ, ಭೂಮಿ ಶಾಖೆ ಪಹಣಿ ವಿತರಣಾ ಕೇಂದ್ರ, ಅಟಲ್‌ ಜೀ ಜನ ಸ್ನೇಹಿ ಕೇಂದ್ರ, ಆಧಾರ್‌ ನೋಂದಣಿ ಕೇಂದ್ರ, ಹೆಬ್ರಿ ಹೋಬಳಿ ರಾಜಸ್ವ ನಿರೀಕ್ಷಕರ ಮತ್ತು ಹೆದ್ದಾರಿ ವೃತ್ತದ ಗ್ರಾಮ ಲೆಕ್ಕಿಗರ ಕಾರ್ಯಾಲಯ ಹೊಂದಿದೆ.

ಮೊದಲ ಮಹಡಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಉಪ ನೋಂದಣಾಧಿಕಾರಿ ಕಾರ್ಯಾಲಯ, ಅಭಿಲೇಖಾಲಯ, ಉಪ ನೋಂದಣಾಧಿಕಾರಿ ಕೊಠಡಿ, ಶಾಸಕರ ಕೊಠಡಿ, ಶಾಸಕರ ಆಪ್ತ ಸಹಾಯಕರ ಕೊಠಡಿ, ತಹಶೀಲ್ದಾರ್‌ ಅವರ ಕಾರ್ಯಾಲಯದ ಸಭಾಂಗಣ, ಚುನಾವಣ ಶಾಖೆಯ ಕೊಠಡಿ ಮತ್ತು ಅಭಿಲೇಖಾಲಯ ಕೇಸ್ವಾನ್‌ ಸಿಬಂದಿಯ ಕೊಠಡಿ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಾರ್ಯಾಲಯ ಒಳಗೊಂಡಿದೆ. ವಿಶಾಲ ಜಾಗದಲ್ಲಿ ಆಕರ್ಷಕ ಕಟ್ಟಡ ನಿರ್ಮಾಣಗೊಂಡಿದ್ದು ಸುಮಾರು 8 ಜನ ಸಾಮರ್ಥ್ಯದ ಲಿಫ್ಟ್‌ ವ್ಯವಸ್ಥೆ ಇದೆ. ಕಚೇರಿ ಸಿಬಂದಿ, ಸಾರ್ವಜನಿಕರಿಗೆ, ಅಂಗವಿಕಲರಿಗೆ ಪ್ರತ್ಯೇಕ ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಲಾಗಿದೆ.

2.38 ಕೋಟಿ ರೂ. ವೆಚ್ಚದ ಕಾಮಗಾರಿಗೆ ಪ್ರಸ್ತಾವನೆ ಕಟ್ಟಡದ ಸುತ್ತ ಸುಸಜ್ಜಿತ ಕಾಂಪೌಂಡ್‌ ವ್ಯವಸ್ಥೆ, ಕಚೇರಿ ಆವರಣದ ಒಳಗೆ ಗಾರ್ಡನ್‌, ಹೈಮಾಸ್ಟ್‌ ದೀಪ, ತಹಶೀಲ್ದಾರ್‌ ಅವರ ವಸತಿ ಗೃಹ ನಿರ್ಮಾಣ ಸೇರಿದಂತೆ ಸುಮಾರು 2.38 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಸಂಬಂಧಪಟ್ಟವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಹಶೀಲ್ದಾರ್‌ ಪುರಂದರ ಕೆ. ತಿಳಿಸಿದ್ದಾರೆ.

ಜನರ ಅಲೆದಾಟ ತಪ್ಪಲಿ

ನೂತನವಾಗಿ ಹೆಬ್ರಿ ತಾಲೂಕು ರಚನೆಯಾಗಿ 5 ವರ್ಷಗಳು ಕಳೆದಿವೆ. ಒಂದು ತಾಲೂಕು ಪೂರ್ಣವಾಗಲು ಸುಮಾರು 30 ಇಲಾಖೆಗಳು ಬೇಕಾಗುತ್ತದೆ. ಆದರೆ ಹೆಬ್ರಿಯಲ್ಲಿ ಇದುವರೆಗೆ ಕೇವಲ 3 ತಾಲೂಕು ಮಟ್ಟದ ಇಲಾಖೆಗಳಿವೆ. ಉಳಿದ ಇಲಾಖೆಗಳು ಶೀಘ್ರ ಕಾರ್ಯಾರಂಭ ಮಾಡುವುದರ ಜತೆ ಜನರಿಗೆ ಅತೀ ಅಗತ್ಯವಾದ ನಾಡಕಚೇರಿ, ಉಪ ನೋಂದಣಾಧಿಕಾರಿ ಕಚೇರಿ ಶೀಘ್ರ ಆರಂಭವಾಗಬೇಕು. ಕೇವಲ ಬೃಹತ್‌ ಕಟ್ಟಡವಿದ್ದರೆ ಸಾಲದು ಜನರಿಗೆ ಸೇವೆ ಬೇಕು. ಆದಷ್ಟು ಶೀಘ್ರ ಜನರ ಅಲೆದಾಟವನ್ನು ತಪ್ಪಿಸಿ ಪೂರ್ಣ ಪ್ರಮಾಣದ ತಾಲೂಕು ಆಡಳಿತ ಜನರಿಗೆ ಸಿಗುವಂತಾಗಲಿ. -ಕೆರೆಬೆಟ್ಟು ಸಂಜೀವ ಶೆಟ್ಟಿ, ಅಧ್ಯಕ್ಷರು, ಪ್ರಗತಿಪರ ನಾಗರಿಕ ಹೋರಾಟ ಸಮಿತಿ

ಹೆಬ್ರಿ ಉದಯಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.