ಟೇಬಲ್‌ ಮೇಲೆ ರಾಜೀನಾಮೆ ಪತ್ರ ಇಟ್ಟು  ಎಸ್‌ಐ ಮನೆಗೆ!


Team Udayavani, Jul 7, 2018, 1:37 PM IST

mahabala-shetty.png

ಹೆಬ್ರಿ: ಟೇಬಲ್‌ ಮೇಲೆ ರಾಜೀನಾಮೆ ಪತ್ರ, ಅದರೊಂದಿಗೆ ಪೊಲೀಸ್‌ ಇಲಾಖೆ ನೀಡಿದ್ದ ಮೊಬೈಲ್‌ಅನ್ನು ಇಟ್ಟು ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಒಬ್ಬರು ಕರ್ತವ್ಯ ತ್ಯಜಿಸಿದ ವಿಲಕ್ಷಣ ಘಟನೆ ಹೆಬ್ರಿ ಠಾಣೆಯಲ್ಲಿ ನಡೆದಿದೆ. ಇಲ್ಲಿನ ಠಾಣಾಧಿಕಾರಿ ಮಹಾಬಲ ಶೆಟ್ಟಿ ಅವರೇ ಶುಕ್ರವಾರ ಮಧ್ಯಾಹ್ನ ರಾಜೀನಾಮೆ ಪತ್ರ ಇಟ್ಟು ತಮ್ಮ ಊರು ಕುಂದಾಪುರದ ಸಿದ್ದಾಪುರಕ್ಕೆ ತೆರಳಿದವರು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಎಚ್ಚೆತ್ತಿದ್ದು, ಮಹಾಬಲ ಶೆಟ್ಟಿ ಅವರ ಮನೆಗೆ ತೆರಳಿ ಮನವೊಲಿಸಲು ಯತ್ನಿಸಿದ್ದಾರೆ. ಎಎಸ್‌ಪಿ ಕುಮಾರಸ್ವಾಮಿ ಅವರು ಈ ಸಂಬಂಧ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ.  ಆದರೆ ಮಹಾಬಲ ಶೆಟ್ಟಿ ಅವರ ಮುಂದಿನ ನಿರ್ಧಾರದ ಬಗ್ಗೆ ತಿಳಿದು ಬಂದಿಲ್ಲ .

ಪ್ರತಿಭಟನೆ 

ಜನ ಮೆಚ್ಚುಗೆಗೆ ಪಾತ್ರರಾದ ಶೆಟ್ಟಿ ಅವರನ್ನು ಕರ್ತವ್ಯದಲ್ಲಿ ಮುಂದುವರಿಸಬೇಕು. ಇದಕ್ಕಾಗಿ ಎಸ್‌ಪಿ ಅವರು ಮನವೊಲಿಸಬೇಕು. ಎಂದು ಶನಿವಾರ ಭಾರೀ ಮಳೆಯನ್ನೂ ಲೆಕ್ಕಿಸದೆ  ಠಾಣೆ ಎದುರು ಕರ್ನಾಟಕ ರಕ್ಷಣಾ ವೇದಿಕೆಯ ಸ್ಥಳೀಯ ಘಟಕ ಪ್ರತಿಭಟನೆ ನಡೆಸಿದೆ. 

ಪ್ರತಿಭಟನಾ ಸ್ಥಳಕ್ಕೆ ಕಾರ್ಕಳದ ಹಿರಿಯ ಪೊಲೀಸ್‌ ಅಧಿಕಾರಿಗಳು ಆಗಮಿಸಿ ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿದ್ದಾರೆ. 

ರಾಜೀನಾಮೆಗೆ ಕಾರಣ ಏನು? 
ಇಲ್ಲಿನ ಕಳೂರು ಸಂತೆಕಟ್ಟೆಯ ಜಾಗವೊಂದರ ತಕರಾರಿನ ವಿಚಾರದಲ್ಲಿ ಮೇಲಧಿಕಾರಿಗಳು ಶೆಟ್ಟಿಯವರ ಮೇಲೆ ಗರಂ ಆಗಿದ್ದಾರೆ. ಇದರಿಂದ ಬೇಸತ್ತ ಅವರು ಏಕಾಏಕಿ ರಾಜೀನಾಮೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಶೆಟ್ಟಿಯವರ ನಿವೃತ್ತಿಗೆ ಇನ್ನು ಎರಡೇ ವರ್ಷವಿದ್ದು ಶಂಕರನಾರಾಯಣದಿಂದ ಇತ್ತೀಚೆಗಷ್ಟೇ ಹೆಬ್ರಿಗೆ ವರ್ಗಾವಣೆಗೊಂಡಿದ್ದರು. 

ಎರಡನೇ ಪ್ರಕರಣ
ಮೇಲಧಿಕಾರಿಗಳ ವರ್ತನೆಯಿಂದ ಬೇಸತ್ತು ಅಧಿಕಾರಿಯೊಬ್ಬರು ಜಿಲ್ಲೆಯಲ್ಲಿ ಏಕಾಏಕಿ ರಾಜೀನಾಮೆ ನೀಡುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಹಿಂದೆ ಕೋಟ ಠಾಣೆಯ ಅಧಿಕಾರಿ ಕಬ್ಬಲ್‌ರಾಜ್‌ ಅವರೂ ಇದೇ ರೀತಿ ರಾಜೀನಾಮೆ ನೀಡಿದ್ದರು.   

ಕಳೆದ 3 ತಿಂಗಳಿನಿಂದ ಜಾಗದ ಸಮಸ್ಯೆ ಬಗ್ಗೆ ಗೊಂದಲ ನಿವಾರಿಸಲು ಸರ್ವೆ ನಡೆಸುವಂತೆ ಹೆಬ್ರಿ ಠಾಣಾಧಿಕಾರಿಗೆ ತಿಳಿಸಿದ್ದೆ. ಆದರೆ ಇದರ ಬಗ್ಗೆ ಅವರು ನಿರಾಕರಿಸಿದ್ದರು. ಈ ಸಮಸ್ಯೆ ಮುಂದುವರಿದರೆ ಹೊಣೆಗಾರರಾಗುವ ಬಗ್ಗೆ ಎಚ್ಚರಿಸಿದ್ದೆ. ಜತೆಗೆ ರಿಪೋರ್ಟ್‌ ಮಾಡಲು ಹೇಳಿದ್ದೆ. ಈಗವರು ವಿಆರ್‌ಎಸ್‌ ನೀಡಿದ್ದಾರೆ. ಅವರೊಂದಿಗೆ ಮಾತುಕತೆಗೆ ಅಧಿಕಾರಿಯೊಬ್ಬರನ್ನು ಕಳಿಸಿದ್ದು, ಮುಂದಿನ ತೀರ್ಮಾನ ನೋಡಬೇಕಿದೆ. 
-ಲಕ್ಷ್ಮಣ ಬ. ನಿಂಬರಗಿ, ಎಸ್‌.ಪಿ. ಉಡುಪಿ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.