ಹೆಬ್ರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ಕೃತಜ್ಞತಾ ಸಭೆ
Team Udayavani, Mar 13, 2019, 1:00 AM IST
ಹೆಬ್ರಿ: ಹೆಬ್ರಿ ತಾಲೂಕಾಗಿ ಘೋಷಣೆಗೊಂಡ ಬಳಿಕ ಅಸ್ಥಿತ್ವಕ್ಕೆ ಬಂದ ಹೆಬ್ರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ನಡೆದ ಮೊದಲ ಹೆಬ್ರಿ ತಾಲೂಕು ಸಾಹಿತ್ಯ ಸಮ್ಮೇಳನ ಎಲ್ಲರ ಸಹಕಾರದೊಂದಿಗೆ ಯಶಸ್ವಿಯಾಗಿದೆ ಎಂದು ಹೆಬ್ರಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಹರಿದಾಸ ಬಿ.ಸಿ. ರಾವ್ ಶಿವಪುರ ಹೇಳಿದರು.
ಅವರ ಮಾ. 10ರಂದು ಅನಂತ ಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ನಡೆದ ಹೆಬ್ರಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು. ಬದುಕು ಮತ್ತು ಬರಹದ ಸಮಕಾಲಿನ ಹಿರಿಯ ಸಾಹಿತಿ ಅಂಬಾತನಯ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮದ ಯಶಸ್ವಿಯ ರುವಾರಿಗಳಾದ ಯೋಗಿಶ್ ಭಟ್,ಭಾಸ್ಕರ್ ಜೋಯಿಸ್ ಅವರ ವಿಶೇಷ ಮುತುವರ್ಜಿಯಲ್ಲಿ ಯುವ ತಂಡದ ಸಂಘಟನೆ ಹಾಗೂ ಶಿಕ್ಷಕರ ವಿಶೇಷ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಇತಿಹಾಸ ಸೃಷ್ಠಿಸಿದೆ ಎಂದರು. ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಮಾತನಾಡಿ ಹಿಂದೆ ನಡೆದುಹೋದ ಘಟನೆಗಳ ಬಗ್ಗೆ ಚಿಂತಿಸಿದೆ ಮುಂದೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಉತ್ತಮ ಕಾರ್ಯಕ್ರಮಗಳು ಹೆಬ್ರಿ ಘಟಕದಿಂದ ಆಗಲಿ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹೆಬ್ರಿ ತಾಲೂಕು ಘಟಕ ಕ.ಸಾ.ಪ. ಅಧ್ಯಕ್ಷ ಪಿ.ವಿ. ಆನಂದ ಸಾಲಿಗ್ರಾಮ ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕಾರಿ ಆದವರಿಗೆ ಕೃತಜ್ಞತೆ ಸಲ್ಲಿಸಿದರು. ಸಭೆಯಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ಯೋಗಿಶ್ ಭಟ್, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಟಿ.ಜಿ.ಆಚಾರ್ಯ ಮೊದಲಾದವರಿದ್ದರು. ಹೆಬ್ರಿ ತಾ| ಕಸಾಪದ ಗೌರವ ಕಾರ್ಯದರ್ಶಿ ಬಲ್ಲಾಡಿ ಚಂದ್ರಶೇಖರ್ ಭಟ್ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿ,ಪ್ರವೀಣ್ ವಂದಿಸಿದರು.
ಉದಯವಾಣಿ ಬಗ್ಗೆ ಮೆಚ್ಚುಗೆ
ಹೆಬ್ರಿಯ ಇತಿಹಾಸದಲ್ಲಿ ನಡೆದ ಮೊದಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿದೇಶ ಪ್ರಚಾರವನ್ನು ಉದಯವಾಣಿ ಪತ್ರಿಕೆ ಕೊಟ್ಟಿದೆ ಎಂದು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯಧ್ಯಕ್ಷ ಎಚ್.ಭಾಸ್ಕರ್ ಜೋಯಿಸ್ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!