ಹೆಬ್ರಿ-ತಾಣ ಚತುಷ್ಪಥ ರಸ್ತೆ: ಕುಸಿದ ಮೋರಿ


Team Udayavani, Nov 22, 2019, 5:32 AM IST

2011HBRE6

ಹೆಬ್ರಿ: ಹೆಬ್ರಿಯಿಂದ ಕಾರ್ಕಳ ಮಾರ್ಗದ ತಾಣ ಚತುಷ್ಪಥ ರಸ್ತೆ ಬದಿಯಲ್ಲಿರುವ ಚರಂಡಿ ಕಳಪೆ ಮಟ್ಟದಿಂದ ಕೂಡಿದ್ದು ಪ್ರಾಥಮಿಕ ಶಾಲೆಗೆ ಹೋಗುವ ದಾರಿಗೆ ಅಳವಡಿಸಲಾದ ಮೋರಿ ಕುಸಿದಿದ್ದು ಅಪಾಯದ ಅಂಚಿನಲ್ಲಿದೆ.

ಹೆಬ್ರಿ ಸರಕಾರಿ ಪ್ರಾಥಮಿಕ ಶಾಲಾ ಮೈದಾನಕ್ಕೆ ಹೋಗುವ ಮಾರ್ಗದಲ್ಲಿ ರಸ್ತೆಯ ಅಂಚಿನ ಚರಂಡಿ ವ್ಯವಸ್ಥೆಗೆ ಅಳವಡಿಸಲಾದ ಮೋರಿ ನೀರಿನ ರಭಸಕ್ಕೆ ಕೊಚ್ಚಿಹೋಗಿದೆ. ಶಾಲಾ ಮೈದಾನದಿಂದ ಹರಿದ ನೀರು ಇಲ್ಲಿಯೇ ಬಂದು ಸೇರುವುದರಿಂದ ನೀರು ಹರಿದು ಹೋಗಲು ಜಾಗವಿಲ್ಲದೆ ರಸ್ತೆ ಮೇಲೆ ಹರಿದ ಪರಿಣಾಮ ಚರಂಡಿಗೆ ಹಾನಿಯಾಗಿದೆ.

ಮೋರಿಯ ಒಂದು ಭಾಗ ಕುಸಿದಿದ್ದು ಈ ಭಾಗದಲ್ಲಿ ಶಾಲಾ ವಿದ್ಯಾರ್ಥಿಗಳು ಸಂಚರಿಸುವುದರಿಂದ ಅಪಾಯ ಉಂಟಾಗುವ ಸಾಧ್ಯತೆ ಇದೆ. ಕಾಮಗಾರಿ ನಡೆದು ಕೇವಲ 8 ತಿಂಗಳಲ್ಲಿ ಈ ಚರಂಡಿಯ ಮೋರಿ ಕುಸಿದಿದೆ.

ಅವೈಜ್ಞಾನಿಕ ಚರಂಡಿ ವ್ಯವಸ್ಥೆ
ರಸ್ತೆ ವಿಸ್ತರಣೆ ಮಾಡಿ ರಸ್ತೆಯ ಎರಡು ಇಕ್ಕೆಲಗಳಲ್ಲಿ ಚರಂಡಿ ನಿರ್ಮಾಣ ಮಾಡಿದ್ದರೂ ರಸ್ತೆಯ ನೀರು ಹರಿಯಲು ಜಾಗವಿಲ್ಲದೆ ಮಳೆ ಸಂದರ್ಭ ರಸ್ತೆ ನದಿಯಂತೆ ಭಾಸವಾಗುತ್ತದೆ. ಶಾಲಾ ವಠಾರ ಎತ್ತರ ಪ್ರದೇಶದಲ್ಲಿದ್ದು ನೀರು ಕೆಳಗೆ ಚರಂಡಿಗೆ ಹರಿದುಹೋಗಲು ಸರಿಯಾದ ಚರಂಡಿಗೆ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲೇ ಹರಿಯುತ್ತಿತ್ತು. ಇದನ್ನು ಮನಗಂಡ ಸ್ಥಳೀಯರು ಚರಂಡಿಯ ಮೇಲು ಹೊದಿಕೆ ಒಡೆದು ನೀರು ಹರಿಯುವಂತೆ ಮಾಡಿದ್ದಾರೆ.

ಶಾಲಾ ವಠಾರ ಅಪಾಯ
ಶಾಲೆಗೆ ಹೋಗುವ ಮಾರ್ಗದ ಬದಿಯಲ್ಲಿ ದೊಡ್ಡ ಕಂದಕ ನಿರ್ಮಾಣ ವಾಗಿದ್ದು ಚಿಕ್ಕ ಮಕ್ಕಳು ಜಾರಿ ಬೀಳುವ ಅಪಾಯವಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಕೂಡಲೇ ಜಾಗೃತವಾಗಬೇಕಿದೆ.

ಶಾಲೆಯ ಪ್ರಮುಖ ದ್ವಾರ
ಸುಮಾರು 137 ವರ್ಷ ಇತಿಹಾಸವಿರುವ ಶಾಲೆಯ ಪ್ರಮುಖ ದ್ವಾರ ಇದೀಗ ಮುಚ್ಚಿದೆ. ಆದ್ದರಿಂದ ಇಲ್ಲಿ ಈ ರೀತಿಯ ಅವ್ಯವಸ್ಥೆಗೆ ಕಾರಣ ವಾಗಿದೆ. ಪ್ರಸ್ತುತ ಮಕ್ಕಳು ಸಂಚರಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಈ ಮಾರ್ಗದಲ್ಲಿ ಮಕ್ಕಳು ಓಡಾಡುವುದು ತುಂಬಾ ಅಪಾಯಕಾರಿ. ಶಿಕ್ಷಣ ಇಲಾಖೆ ಪ್ರಮುಖ ದ್ವಾರದಲ್ಲಿಯೇ ಶಾಲೆಗೆ ಹೋಗುವ ಬಗ್ಗೆ ನಿಬಂಧನೆ ವಿಧಿಸಬೇಕು, ಅಲ್ಲದೆ ಶಾಲಾ ಗೇಟ್‌ ಎದುರಿನ ಚರಂಡಿ ಕಾಮಗಾರಿ ಮಾಡಿದವರಿಗೆ ಕೂಡಲೇ ದುರಸ್ತಿ ಮಾಡುವಂತೆ ಸೂಚನೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ವಿಜಯೇಂದ್ರ ಶೆಟ್ಟಿ ಅವರು
ತಿಳಿಸಿದ್ದಾರೆ.

ಸಮಸ್ಯೆಗೆ ಶೀಘ್ರ ಪರಿಹಾರ
ಚರಂಡಿಗೆ ಸರಿಯಾಗಿ ನೀರು ಹರಿದುಹೋಗಲು ವ್ಯವಸ್ಥೆ ಇಲ್ಲದ ಕಾರಣ ಸಮಸ್ಯೆಯಾಗಿದೆ. ಈ ಬಗ್ಗೆ ಲೋಕೋಪಯೋಗಿ ಇಂಜಿನಿಯರ್‌ ಅವರ ಗಮನಕ್ಕೆ ತಂದಿದ್ದು ಸಮಸ್ಯೆ ಬಗೆಹರಿಸುವ ಬಗ್ಗೆ ಶೀಘ್ರ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.
-ಎಚ್‌.ಕೆ.ಸುಧಾಕರ್‌,ಅಧ್ಯಕ್ಷರು,ಗ್ರಾ.ಪಂ.ಹೆಬ್ರಿ

ತತ್‌ಕ್ಷಣ ದುರಸ್ತಿಗೊಳಿಸಿ
ಹೆಬ್ರಿ ಕಾರ್ಕಳ ಮುಖ್ಯ ರಸ್ತೆ ಆದ್ದರಿಂದ ವಾಹನ ಸಂಚಾರ ಹೆಚ್ಚಾಗಿದ್ದು ಮಕ್ಕಳು ರಸ್ತೆ ದಾಟುವಾಗ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವ ಕಾರಣ ಹಿಂದಿನ ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ಮಕ್ಕಳು ಸಂಚರಿಸುತ್ತಿದ್ದಾರೆ. ಆದರೆ ಶಾಲಾ ಗೇಟ್‌ ಎದುರು ನೀರು ಹರಿದುಹೋಗಲು ಮಾಡಿದ ಶಾಲಾ ಮೈದಾನದ ಚರಂಡಿಯನ್ನು ಹಾನಿ ಮಾಡಿದ್ದು ಮೋರಿ ಕೂಡಾ ಕುಸಿದಿದೆ. ಇದರಿಂದ ಮಕ್ಕಳು ಸೇರಿದಂತೆ ಎಲ್ಲರಿಗೂ ಅಪಾಯವಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ದುರಸ್ತಿ ಮಾಡಬೇಕಾಗಿದೆ.
-ಚಂಪಕಾ, ಮುಖ್ಯ ಶಿಕ್ಷಕಿ ಸ.ಹಿ.ಪ್ರಾ ಶಾಲೆ.

-ಹೆಬ್ರಿ ಉದಯಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.