ಹೆಬ್ರಿ: ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಜಾಥಾ
Team Udayavani, Sep 8, 2018, 7:00 AM IST
ಹೆಬ್ರಿ: ಹೆಬ್ರಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ತ್ಯಜಿಸುವ ಬಗ್ಗೆ ಗುರುವಾರ ಹೆಬ್ರಿ ಸರಕಾರಿ ಪ.ಪೂ.ಕಾಲೇಜು ವಿದ್ಯಾರ್ಥಿಗಳು,ಪಂಚಾಯತ್ ವತಿಯಿಂದ ಪ್ಲಾಸ್ಟಿಕ್ ನಿಷೇಧದ ಘೋಷಣೆ ಮೂಲಕ ಹೆಬ್ರಿ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಯಿತು.
ಪ್ಲಾಸ್ಟಿಕ್ ಬಳಕೆ ಮಾಡದೆ ಬಟ್ಟೆ,ಪೇಪರ್ ಬ್ಯಾಗ್ಗಳನ್ನು ಬಳಸಿ ಪರಿಸರ ಮೇಲೆ ಆಗುವ ಹಾನಿ ತಡೆಗಟ್ಟವ ಕುರಿತು ತಾ. ಪಂ.ಸದಸ್ಯರು,ಗ್ರಾ.ಪಂ.ಸದಸ್ಯರು,ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸೆ.15ರ ತನಕ ಗಡು
ಹೆಬ್ರಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಯಾವುದೇ ಅಂಗಡಿಯವರು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ನ್ನು ಮಾರಾಟ ಮಾಡುವುದು ಸಂಪೂರ್ಣ ನಿಲ್ಲಿಸಬೇಕು. ಈವರೆಗೆ ಇದ್ದ ಕ್ಯಾರಿಬ್ಯಾಗ್ನ್ನು ಹಿಂದಿರುಗಿಸಲು ಸೆ.15ರ ವರೆಗೆ ಕಾಲಾವಕಾಶ ಪಂಚಾಯತ್ನಿಂದ ನೀಡಲಾಗಿದೆ.ಅಂಗಡಿ ಮಾಲಕರು ಗ್ರಾಹಕರಿಗೆ ಬಟ್ಟೆ ಚೀಲ ತರುವಂತೆ ವಿನಂತಿಸಬೇಕು ಎಂದು ಪಂಚಾಯತ್ ಅಂಗಡಿಗಳಿಗೆ ಸೂಚನೆ ನೀಡಿದೆ.
ತಪ್ಪಿದ್ದಲ್ಲಿ ದಂಡ
ಹೆಬ್ರಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮಾಡುವ ಗುರಿಯನ್ನು ಹೆಬ್ರಿ ಗ್ರಾ.ಪಂ.ಹೊಂದಿದ್ದು ಇದಕ್ಕೆ ಅಂಗಡಿ ಮಾಲಕರು ,ಗ್ರಾಹಕರು ಸಹಕರಿಸಬೇಕು. ತಪ್ಪಿದಲ್ಲಿ ಅಂಗಡಿ ಮಾಲಕರಿಗೆ ದಂಡ ವಿಧಿಸಲಾಗುವುದು ಎಂದು ಹೆಬ್ರಿ ಪಂಚಾಯತ್ ತಿಳಿಸಿದೆ.
ಪ್ಲಾಸ್ಟಿಕ್ ಮುಕ್ತ ಗ್ರಾಮಕ್ಕೆ ಸಹಕರಿಸಿ
ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜತೆಗೆ ಪರಿಸರ ಹಾಳುಗುತ್ತದೆ.
ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಪ್ರೇರಿತವಾಗಿ ಪ್ಲಾಸ್ಟಿಕ್ ಬಳಸುವುದಿಲ್ಲ ಎಂಬ ತೀ ರ್ಮಾನಕ್ಕೆ ಬಂದಾಗ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಲ್ಲಸಬಹುದಾಗಿದ್ದು ಗ್ರಾಮಸ್ಥರು , ಅಂಗಡಿ ಮಾಲಕರು ಪಂಚಾಯತ್ ಈ ಅಂದೋಲನಕ್ಕೆ ಸಹಕರಿಸಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಮಾಡಲು ಕೈಜೋಡಿಸಬೇಕು
– ವಿಜಯಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!