ಹೆಬ್ರಿ: ತಂದೆಯಿಂದಲೇ ಮಗನ ಕೊಲೆ
Team Udayavani, Feb 26, 2023, 5:15 AM IST
ಹೆಬ್ರಿ: ದಿನನಿತ್ಯ ಕುಡಿದು ರಂಪಾಟ ಮಾಡುತ್ತಿದ್ದ ಮಗನ ಕಿರುಕುಳ ಸಹಿಸದ ತಂದೆ ಮಗನನ್ನು ಕೊಲೆಮಾಡಿದ ಘಟನೆ ವರಂಗ ಗ್ರಾಮದ ಮೂಡುಬೆಟ್ಟುವಿನಲ್ಲಿ ನಡೆದಿದೆ. ಸತೀಶ್ ಪೂಜಾರಿ(40) ಕೊಲೆಯಾದ ವ್ಯಕ್ತಿ.
ದಿನನಿತ್ಯ ಮದ್ಯ ಸೇವಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದು, ಫೆ. 24ರಂದು ತಂದೆ ಕುಟ್ಟಿ ಪೂಜಾರಿ ಮನೆಯ ಒಳಗೆ ಮಲಗಿದ್ದಾಗ ಸತೀಶ್ ಪೂಜಾರಿಯು ವಿಪರೀತ ಮದ್ಯ ಸೇವಿಸಿ ಬಂದು ಕುಟ್ಟಿ ಪೂಜಾರಿ ಮಲಗಿದ್ದ ಕೋಣೆಯ ಬಾಗಿಲಿಗೆ ಕಾಲಿನಿಂದ ಒದ್ದು ಕುಟ್ಟಿ ಪೂಜಾರಿಯವರನ್ನು ಮನೆಯ ಹೊರಗೆ ಅಂಗಳಕ್ಕೆ ಎಳೆದು ತಂದಾಗ ಕೋಪಗೊಂಡ ಕುಟ್ಟಿ ಪೂಜಾರಿಯು ಅಡುಗೆ ಕೋಣೆಯಲ್ಲಿದ್ದ ಒಲೆ ಬೆಂಕಿ ಊದುವ ಕಬ್ಬಿಣದ ಕೊಳವೆಯಿಂದ ಸತೀಶ ಪೂಜಾರಿ ಅವರ ಮೇಲೆ ಹಲ್ಲೆ ನಡೆಸಿದ ಪರಿಣಾಮ ಸತೀಶ ಪೂಜಾರಿ ಮೃತಪಟ್ಟಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು