ಹೆಜಮಾಡಿ-ಕಿನ್ನಿಗೋಳಿ: ಮತ್ತೆ ಶಾಲೆಗಳಲ್ಲಿ ಹೆಚ್ಚುತ್ತಿರುವ ಕಳವು


Team Udayavani, Nov 10, 2022, 6:10 AM IST

ಹೆಜಮಾಡಿ-ಕಿನ್ನಿಗೋಳಿ: ಮತ್ತೆ  ಶಾಲೆಗಳಲ್ಲಿ ಹೆಚ್ಚುತ್ತಿರುವ ಕಳವು

ಪಡುಬಿದ್ರಿ: ಹೆಜಮಾಡಿಯ ಸರಕಾರಿ ಪ್ರೌಢಶಾಲೆ ಹಾಗೂ ಖಾಸಗಿ ಶಾಲೆಯೊಂದರ ಬಾಗಿಲುಗಳ ಬೀಗವನ್ನು ಒಡೆದು ಒಳ ಪ್ರವೇಶಿಸಿದ ಕಳ್ಳರು ನಿನ್ನೆ ರಾತ್ರಿಯ ವೇಳೆ ಅಲ್ಲಿದ್ದ ಸ್ಟೀಲ್‌ ಅಲ್ಮೇರಾಗಳನ್ನೂ ಒಡೆದು, ಡ್ರಾವರ್‌ಗಳನ್ನು ತೆರೆದು ಒಟ್ಟು ಸುಮಾರು 91020 ರೂ. ನಗದು ಕಳ್ಳತನಗೈದಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಬುಧವಾರ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಹೆಜಮಾಡಿಯ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಕೊಠಡಿಯ ಬೀಗವನ್ನು ಮುರಿದು ಒಳ ಪ್ರವೇಶಿಸಿದ ಕಳ್ಳರು ಅಲ್ಲಿದ್ದ ಕಬ್ಬಿಣದ ಕಪಾಟಿನ ಬಾಗಿಲನ್ನೂ ಒಡೆದು ಅದರೊಳಗೆ ಅಕ್ಷರ ದಾಸೋಹ ಆಹಾರ ವಸ್ತು ಸಾಮಾಗ್ರಿ ಖರೀದಿಗೆಂದು ಇರಿಸಿದ್ದ 15,000 ರೂ. ನಗದನ್ನು ಕಳವುಗೈದಿದ್ದಾರೆ. ಸರಕಾರಿ ಪ. ಪೂ. ಕಾಲೇಜು ಕೊಠಡಿಯ ಬಾಗಿಲನ್ನೂ ಒಡೆದು ಕಳ್ಳತನಕ್ಕೆ ಯತ್ನ ನಡೆಸಿದ್ದಾಗಿಯೂ ಪಡುಬಿದ್ರಿ ಪೊಲೀಸರಿಗೆ ನೀರುವ ದೂರಲ್ಲಿ ತಿಳಿಸಲಾಗಿದೆ.

ಹೆಜಮಾಡಿ ಪೇಟೆ ಬದಿಯಲ್ಲೇ ಇರುವ ಖಾಸಗಿ ಅಲ್‌ ಅಝ್ಹರ್‌ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಕಚೇರಿಯ ಬೀಗವನ್ನು ಒಡೆದು ಒಳ ಪ್ರವೇಶಿಸಿದ ಕಳ್ಳರು ಕಚೇರಿಯಲ್ಲಿದ್ದ ದಾಖಲೆಗಳನ್ನೆಲ್ಲಾ ಚಲ್ಲಾಪಿಲ್ಲಿಗೊಳಿಸಿದ್ದಾರೆ. ಅಲ್ಲೇ ಡ್ರಾವರಿನಲ್ಲಿ ಕುರ್ಚಿ ಖರೀದಿಗೆಂದು ಇರಿಸಿದ್ದ 45,000 ರೂ., ಶೈಕ್ಷಣಿಕ ಪ್ರವಾಸಕ್ಕೆಂದು ಸಂಗ್ರಹಿಸಿಟ್ಟಿದ್ದ 11,000 ರೂ. ಮತ್ತು ಶಾಲಾ ಶುಲ್ಕವಾಗಿ ಸಂಗ್ರಹಿಸಿದ್ದ 20,020 ರೂ. ನಗದು ಸೇರಿದಂತೆ ಒಟ್ಟು 76,020 ರೂ. ಕಳವುಗೈದಿದ್ದಾರೆ.

ಕಿನ್ನಿಗೋಳಿ: ಸೈಂಟ್‌ಮೇರಿಸ್‌ ಶಾಲೆಯಲ್ಲಿ
ಕಿನ್ನಿಗೋಳಿ: ಕಿನ್ನಿಗೋಳಿ ಮುಖ್ಯ ರಸ್ತೆಯ ಕಿನ್ನಿಗೋಳಿ ಸೈಂಟ್‌ ಮೇರಿಸ್‌ ಸೆಂಟ್ರಲ್‌ ಸ್ಕೂಲ್‌ನ ಹೊರಗಿನ ಕಬ್ಬಿಣದ ಬಾಗಿಲು ಹಾಗೂ ಪ್ರಾಂಶುಪಾಲರ ಕಚೇರಿಯ ಬೀಗವನ್ನು ತುಂಡರಿಸಿ ಒಳ ನುಗ್ಗಿದ ಕಳ್ಳರು ಜಾಲಾಡಿದ್ದಾರೆ.

ಬಳಿಕ ಒಳಭಾಗದಿಂದ ಕಾಲೇಜಿನ ಆಫೀಸ್‌ ರೂಮ್‌ಗೆ ನುಗ್ಗಿ ಏಳು ಕಪಾಟುಗಳನ್ನು ಹಾಗೂ ಕಂಪ್ಯೂಟರ್‌ ಡ್ರಾವರ್‌ಗಳನ್ನು ಜಾಲಾಡಿ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ. ಸ್ಥಳಕ್ಕೆ ಮೂಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನಿಗಾ ವಹಿಸಬೇಕಿದೆ
ಕಳೆದ ಕೆಲವು ದಿನಗಳಿಂದ ಕಳ್ಳರು ಶಾಲೆ – ಕಾಲೇಜುಗಳಿಗೆ ನುಸುಳಿ ಕಳವು ಗೈಯುತ್ತಿದ್ದಾರೆ. ಈ ಬಗ್ಗೆ ಪೊಲೀಸರು, ಶಾಲಾಡಳಿತ ಮಂಡಳಿ ಸೂಕ್ತ ನಿಗಾ ವಹಿಸಬೇಕಿದೆ.

 

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್