ಹೆಮ್ಮಾಡಿ: ಅಂಗವಿಕಲರ ಚಿಕಿತ್ಸಾ ಕೊಠಡಿ ಅವ್ಯವಸ್ಥೆ ಆಗರ

ವಿಕಲಚೇತನ ಪುನರ್ವಸತಿ ಕೇಂದ್ರ ಸಿಬಂದಿಗೆ ಸಂಕಟ

Team Udayavani, May 10, 2022, 10:18 AM IST

treatment

ಹೆಮ್ಮಾಡಿ: ಇಲ್ಲಿನ ಸರಕಾರಿ ಹಿ.ಪ್ರಾ. ಶಾಲೆಯ ಹಳೆಯ ಕಟ್ಟಡದಲ್ಲಿ ತಿಂಗಳಿಗೆ 3 ಬಾರಿ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ ಸಿಬಂದಿಯಿಂದ ನಡೆಯುವ ಚಿಕಿತ್ಸಾ ಶಿಬಿರದ ಕೊಠಡಿ ಅವ್ಯವಸ್ಥೆಯ ಆಗರವಾಗಿದೆ. ಕೊಠಡಿಗೆ ಸರಿಯಾದ ಬೆಳಕಿನ ವ್ಯವಸ್ಥೆಯಿಲ್ಲ. ನೀರಿನ ಸೌಕರ್ಯವೂ ಇಲ್ಲ. ಇನ್ನೂ ಕನಿಷ್ಠ ಶೌಚಾಲಯವೂ ಇಲ್ಲ.

ಕುಂದಾಪುರ, ಬ್ರಹ್ಮಾವರ, ಕಾರ್ಕಳ ಸೇರಿದಂತೆ ಉಡುಪಿ ಜಿಲ್ಲೆಯ ಎಲ್ಲ ಶೈಕ್ಷಣಿಕ ವಲಯದಲ್ಲಿ ತಿಂಗಳಿಗೆ 3 ಬಾರಿ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ ಸಿಬಂದಿಯಿಂದ ಚಿಕಿತ್ಸಾ ಶಿಬಿರ ನಡೆಯುತ್ತದೆ. ಅದೇ ರೀತಿ ಬೈಂದೂರು ವಲಯದ ಹೆಮ್ಮಾಡಿಯಲ್ಲಿ ಇಲ್ಲಿನ ಶಾಲೆಯ ಹಳೆಯ ಕಟ್ಟಡದಲ್ಲಿ ತಿಂಗಳಿಗೆ 3 ಶನಿವಾರ ಶಿಬಿರ ನಡೆಯುತ್ತದೆ.

ಈ ಚಿಕಿತ್ಸಾ ಶಿಬಿರದಲ್ಲಿ ಪುನರ್ವಸತಿ ಕೇಂದ್ರದ ಫಿಸಿಯೋಥೆರಪಿಸ್ಟ್‌, ಕ್ಲಿನಿಕಲ್‌ ಸೈಕಾಲಜಿಸ್ಟ್‌, ಅಡಿಯೋಲಜಿಸ್ಟ್‌/ ಸ್ಪೀಚ್‌ ಥೆರಪಿಸ್ಟ್‌ ಭಾಗವಹಿಸುತ್ತಾರೆ. ಈ ಭಾಗದ ಸುತ್ತಮುತ್ತಲಿನ ಗ್ರಾಮದ ವಿಕಲ ಚೇತನರು, ವೃದ್ಧರು ಸೇರಿದಂತೆ ಶಿಬಿರಕ್ಕೆ ಹತ್ತಾರು ಮಂದಿ ಆಗಮಿಸುತ್ತಾರೆ.

ಸಿಬಂದಿ, ರೋಗಿಗಳಿಗೆ ಸಂಕಷ್ಟ

ಆದರೆ ಈ ಕೊಠಡಿಗೆ ವಿದ್ಯುತ್‌ ಸಂಪರ್ಕವನ್ನೇ ಕಲ್ಪಿಸಿಲ್ಲ. ಹಾಗಾಗಿ ಸರಿಯಾದ ಬೆಳಕಿನ ವ್ಯವಸ್ಥೆಯಿಲ್ಲ. ಈಗ ಬೇಸೆಗೆಯೂ ಆಗಿರುವುದರಿಂದ ಫ್ಯಾನ್‌ ಇಲ್ಲದೆ, ಸೆಕೆಗೆ ಒಳಗೆ ಕುಳಿತುಕೊಳ್ಳುವುದೇ ಕಷ್ಟಕರವಾಗಿದೆ. ಎಲ್ಲ ಕಿಟಕಿಗಳ ಬಾಗಿಲು ಸಹ ತೆಗೆಯಲು ಆಗದಷ್ಟು ನಾದುರಸ್ತಿಯಲ್ಲಿದೆ. ಇನ್ನು ಇಲ್ಲಿ ಶೌಚಾಲಯವಿಲ್ಲದೆ ಮಹಿಳಾ ಸಿಬಂದಿಯ ಗೋಳು ಹೇಳತೀರದಾಗಿದೆ. ನೀರಿನ ವ್ಯವಸ್ಥೆಯೂ ಇಲ್ಲ. ಸ್ಥಳೀಯ ಗ್ರಾ.ಪಂ. ಕನಿಷ್ಠ ಮೂಲ ಸೌಕರ್ಯವನ್ನು ಸಹ ಕಲ್ಪಿಸಿ ಕೊಡದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಅನಾರೋಗ್ಯ ಭೀತಿ

ಸ್ವಚ್ಛ ಮಾಡದೇ ಕೊಠಡಿಯು ಅಸ್ತವ್ಯಸ್ತವಾಗಿದೆ. ಇಲ್ಲಿಗೆ ಬಂದು ಹೋಗುವ ರೋಗಿಗಳು ಹಾಗೂ ಸಿಬಂದಿಗೆ ಮೈಯೆಲ್ಲ ತುರಿಕೆ ಶುರುವಾಗುತ್ತದೆ. ಚಿಕಿತ್ಸೆ ಕೊಡಲು ಬರುವ ನಮಗೆ ಅನಾರೋಗ್ಯ ಭೀತಿ ಕಾಡುತ್ತಿದೆ. ಸಂಬಂಧಪಟ್ಟವರು ಈ ಕೊಠಡಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಿಕೊಡಿ ಎನ್ನುವುದಾಗಿ ಇಲ್ಲಿನ ಶಿಬಿರಕ್ಕೆ ಆಗಮಿಸುವ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಸಿಬಂದಿ ಮನವಿ ಮಾಡಿಕೊಂಡಿದ್ದಾರೆ.

ಕ್ರಮಕೈಗೊಳ್ಳಲಾಗುವುದು

ವಿಕಲಚೇತನ ಪುನರ್ವಸತಿ ಕೇಂದ್ರ ಸಿಬಂದಿಯಿಂದ ನಡೆಯುವ ಚಿಕಿತ್ಸಾ ಶಿಬಿರದ ಕೊಠಡಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಈಗಾಗಲೇ ಕ್ರಮಕೈಗೊಳ್ಳಲು ಸಂಬಂಧಪಟ್ಟವರಿಗೆ ತಿಳಿಸಲಾಗಿದೆ. ನೀರಿನ ಸಂಪರ್ಕ ಸದ್ಯಕ್ಕೆ ಕಷ್ಟ. ಹೊಸತಾಗಿ ಪೈಪ್‌ ಲೈನ್‌ ಆಗಬೇಕಿದೆ. ಇದು ಶಿಕ್ಷಣ ಇಲಾಖೆ ಅಧೀನದ ಕೊಠಡಿಯಾಗಿದ್ದು, ಅವರಿಂದ ನಮಗೆ ಯಾವುದೇ ರೀತಿಯ ಸಹಕಾರ ಸಿಗುತ್ತಿಲ್ಲ. -ಯು. ಸತ್ಯನಾರಾಯಣ ರಾವ್‌, ಹೆಮ್ಮಾಡಿ ಗ್ರಾ.ಪಂ. ಅಧ್ಯಕ್ಷರು

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.