ಹೆಮ್ಮಾಡಿ: ಮನೆ ನಿವೇಶನಕ್ಕಾಗಿ ಸಮಾವೇಶ
Team Udayavani, Apr 13, 2017, 5:09 PM IST
ಕುಂದಾಪುರ: ಹೆಮ್ಮಾಡಿ ಕಟ್ಬೆಲೂ¤ರು ಗ್ರಾ.ಪಂ. ವ್ಯಾಪ್ತಿಯ ಮನೆ, ನಿವೇಶನ ರಹಿತರು ಅಂತಿಮ ಪಟ್ಟಿಯನ್ನು ಸ್ಥಳೀಯ ಗ್ರಾ.ಪಂ. ವತಿಯಿಂದ ಸಿದ್ಧಪಡಿಸಿ 2 ವರ್ಷ ಕಳೆದರೂ ಈ ತನಕ ಸರಕಾರ ನಿವೇಶನ ಸ್ಥಳ ಮಂಜೂರು ಮಾಡದ ಕ್ರಮವನ್ನು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ನಾಗರತ್ನ ನಾಡ ತೀವ್ರವಾಗಿ ಖಂಡಿಸಿದರು.
ಹೆಮ್ಮಾಡಿ, ಕಟ್ಬೆಲೂ¤ರು ಗ್ರಾ.ಪಂ. ವ್ಯಾಪ್ತಿಯ ಬಡ ನಿವೇಶನ ರಹಿತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ, ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸರಕಾರಿ ಸ್ಥಳ ಲಭ್ಯವಿದ್ದರೂ ಸ್ಥಳೀಯಾಡಳಿತ ನಿವೇಶನ ಸ್ಥಳ ಮಂಜೂರು ಮಾಡುವುದಕ್ಕೆ ವಿಳಂಬ ಧೋರಣೆ ಅನುಸರಿಸುವುದನ್ನು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದರು. ಈ ಹಿನೆ°ಲೆಯಲ್ಲಿ ಭೂಮಿಯ ಹಕ್ಕಿನ ಹೋರಾಟ ತೀವ್ರಗೊಳಿಸುವ ನಿಟ್ಟಿನಲ್ಲಿ ಎ. 18ರಂದು ಬೈಂದೂರು ಕ್ಷೇತ್ರ ಶಾಸಕ ಕೆ. ಗೋಪಾಲ ಪೂಜಾರಿ ಮನೆ ಚಲೋ ಹೋರಾಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಡ ನಿವೇಶನ ರಹಿತರಿಗೆ ನಿವೇಶನ ಸ್ಥಳ ಹಕ್ಕು ಪತ್ರ ಕೈಗೆ ಸಿಗುವ ತನಕ ಹೋರಾಟವನ್ನು ಹಂತ ಹಂತವಾಗಿ ಮುಂದಕ್ಕೆ ಹಾಕಲಾಗುವುದು ಎಂದು ಸರಕಾರವನ್ನು ಎಚ್ಚರಿಸಿದರು.
ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಜೀವ ಪಡುಕೋಣೆ ಮಾತನಾಡಿ ಕ್ಷೇತ್ರದ ಶಾಸಕರು ಸಮ್ಮಾನ, ಉದ್ಘಾಟನೆ, ಶಂಕು ಸ್ಥಾಪನೆಯಂತಹ ಜನ ಮರಳು ಕಾರ್ಯಕ್ರಮಗಳಲ್ಲಿ ಮುಳುಗದೆ ಜನಪರವಾದ ನಿವೇಶ ಸ್ಥಳ ಮಂಜೂರು ಮಾಡಲು ಮುಂದಾಗಬೇಕು ಎಂದು ಹೇಳಿದರು.
ಕೃಷಿ ಕೂಲಿಕಾರರ ಸಂಘದ ಮುಖಂಡರಾದ ಗೋಪಾಲ ನಾಯ್ಕ ದೇವಲ್ಕುಂದ, ಸಂಜೀವ ಹೆಮ್ಮಾಡಿ, ಶೀಲಾವತಿ ಪಡುಕೋಣೆ, ಪದ್ಮಾವತಿ ಶೆಟ್ಟಿ ಹಾಗೂ ಕುಶಲಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ
ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ
SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ
Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ಗೆ ಗೆಲುವು
ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ
MUST WATCH
ಹೊಸ ಸೇರ್ಪಡೆ
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು
Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ
Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್