ಹೆಸ್ಕಾತ್ತೂರು:ಗ್ರಾಮಕ್ಕೆ ಹರಿದು ಬಂತು ವಾರಾಹಿ ಕಾಲುವೆ ನೀರು


Team Udayavani, Mar 23, 2019, 12:30 AM IST

2203tke1-2.jpg

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುತ್ತಮುತ್ತಲೂ ಈಗ ವಾರಾಹಿ ಕಾಲುವೆ ನೀರು ಹರಿದಿದೆ. ಇದರಿಂದ ಹೆಸ್ಕಾತ್ತೂರು ಹಾಗೂ ಮೂಡು ಕೊರ್ಗಿಗೆ  ಹೊಂದಿಕೊಂಡು ಇರುವ ಹೊಳೆ ಸಾಲಿನಲ್ಲಿ ಅಂತಜರ್ಲಲ ಮಟ್ಟ ಏರಿದ್ದು,ಕೃಷಿಕರಿಗೆ ಪ್ರಯೋಜನವಾಗಿದೆ. 

ಕಿಂಡಿ ಅಣೆಕಟ್ಟಿಗೆ ಗ್ರಾಮಸ್ಥರಿಂದ ಹಲಗೆ
 ಗ್ರಾಮಕ್ಕೆ ಎದುರಾಗುವ ನೀರಿನ ಸಮಸ್ಯೆಯನ್ನು ಅರಿತು, ಇತ್ತೀಚೆಗೆ ವಾರಾಹಿ ಎಡದಂಡೆ ಕಾಲುವೆ ನೀರು ಹಾಯಿಸುವಿಕೆ ಆರಂಭವಾದ ಬಳಿಕ ಹೊಳೆಯಲ್ಲಿ ಮತ್ತೆ  ನೀರು ಕಾಣುತ್ತಿದ್ದು ಇದನ್ನು ಸದ್ವಿನಿಯೋಗಿಸುವ ಉದ್ದೇಶದಿಂದ ಗ್ರಾಮಸ್ಥರು ಕಿಂಡಿ ಅಣೆಕಟ್ಟಿಗೆ ಅಡ್ಡ ಹಲಗೆ ಅಳವಡಿಸಿದ್ದಾರೆ.

ಹೆಚ್ಚಿದ ಅಂತರ್ಜಲ ಮಟ್ಟ 
ಕೊರ್ಗಿ ಹಾಗೂ ಹೆಸ್ಕಾತ್ತೂರು ಗ್ರಾಮದಲ್ಲಿ ಹರಿಯುತ್ತಿರುವ ವಾರಾಹಿ ಕಾಲುವೆ ನೀರಿನಿಂದಾಗಿ ಅಚಾÉಡಿ ಗ್ರಾಮದಲ್ಲೂ ನೀರಿನ ಸೆಲೆ ಹೆಚ್ಚಾಗಿದೆ. ಹಿಂದೆ ಎಪ್ರಿಲ್‌ ಹಾಗೂ ಮೇ ತಿಂಗಳ ಕೊನೆಯಲ್ಲಿ  ಕೆಲವು ಕಡೆಗಳಲ್ಲಿ  ಕುಡಿಯುವ ನೀರಿಗಾಗಿ ಹಲವು ದೂರ ಕ್ರಮಿಸಬೇಕಾದ ಅನಿವಾರ್ಯತೆ ಎದುರಾಗುತ್ತಿತ್ತು. ಆದರೆ ಕಳೆದ ಎರಡು ವರ್ಷಗಳಿಂದಲೂ  ಈ ಭಾಗದಲ್ಲಿ ಹರಿಯುತ್ತಿರುವ  ವಾರಾಹಿ ಕಾಲುವೆಯ ನೀರು ಹಾಗೂ ಕಿಂಡಿ ಅಣಿಕಟ್ಟಿನ ಸಮರ್ಪಕವಾದ ನಿರ್ವಹಣೆಯ ಫಲವಾಗಿ ಇಲ್ಲಿನ ಕೆರೆ ಬಾವಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಅಂತರ್ಜಲ ಮಟ್ಟದಲ್ಲಿ ಏರಿಕೆ ಕಂಡಿದೆ. 

ಹೆಸ್ಕಾತ್ತೂರಿನ ಸುತ್ತಮುತ್ತಲಿನ ಸುಮಾರು 138 ಹಾಗೂ ಮೂಡು ಕೊರ್ಗಿಯಲ್ಲಿ ಸುಮಾರು 60ಕ್ಕೂ ಅಧಿಕ ಮನೆಗಳಿಗೆ ಹೆಸ್ಕಾತ್ತೂರು ಹೊಳೆ ಸಮೀಪದಲ್ಲಿಯೇ ನಿರ್ಮಿಸಿದ ಬಾವಿಯಿಂದ ಓವರ್‌ ಹೆಡ್‌ ಟ್ಯಾಂಕ್‌ಗಳ ಮೂಲಕ ನೀರು ಸರಬರಾಗುತ್ತಿದೆ.  

ಶಾಶ್ವತ ಪರಿಹಾರ ಸಾಧ್ಯ
ವಾರಾಹಿ ಕಾಲುವೆ ನೀರು ಸಮರ್ಪಕವಾಗಿ ಸಂಗ್ರಹಿಸುವ ನಿಟ್ಟಿನಿಂದ ವೈಜ್ಞಾನಿಕವಾಗಿ ಕ್ರಮ ಕೈಗೊಂಡರೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ . ನೀರಿನ ಸದ್ಬಳಕೆ ಮಾಡುವಲ್ಲಿ ಗ್ರಾಮಸ್ಥರ ಪಾತ್ರ ಬಹಳ ಮುಖ್ಯವಾಗಿದೆ.
– ಸುಧಾಕರ ಶೆಟ್ಟಿ,  
ಪಿಡಿಒ, ಗ್ರಾ.ಪಂ. ಕೊರ್ಗಿ 

ಅಂತರ್ಜಲ ಮಟ್ಟ ಏರಿಕೆ 
ಹೊಳೆಯಲ್ಲಿ ಹರಿಯುವ ವಾರಾಹಿ ಕಾಲುವೆ ನೀರಿಗೆ ಅಡ್ಡ ಹಲಗೆ ಅಳವಡಿ ಸಿದ ಪರಿಣಾಮವಾಗಿ ಕಳೆದ 2 ವರ್ಷಗಳಿಂದ ಹೆಸ್ಕಾತ್ತೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ  ಕೆರೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಏರಿಕೆ ಕಂಡಿದೆ.
– ಪ್ರಕಾಶ್‌ ಹೆಸ್ಕಾತ್ತೂರು, ಗ್ರಾಮಸ್ಥರು

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.